Don't Miss!
- News ಉಕ್ರೇನ್ ವಿರುದ್ಧ ರಷ್ಯಾ ಗಂಭೀರ ಆರೋಪ!
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Sports RR vs DC: ಅವೇಶ್ ಖಾನ್, ರಿಯಾನ್ ಪರಾಗ್ ಶೈನ್; ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ವಿನ್
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಅಭಿಮಾನಿಗಳ ಜೊತೆ ಅಭಿಮಾನಿಯಾದ ದರ್ಶನ್
Recommended Video
ಚಾಲೆಂಜಿಂಗ್ ಸ್ಟಾರ್ ದರ್ಶನ್ ಸದ್ಯ ಚಿತ್ರರಂಗದಲ್ಲಿ ಭಾರಿ ಬೇಡಿಕೆ ಹಾಗೂ ಬ್ಯುಸಿ ಇರುವ ನಟ. 'ಕುರುಕ್ಷೇತ್ರ' ಸಿನಿಮಾದ ಪೋಸ್ಟ್ ಪ್ರೊಡಕ್ಷನ್ ಹಾಗೂ 'ಯಜಮಾನ' ಚಿತ್ರ ಶೂಟಿಂಗ್ ಎರಡರಲ್ಲೂ ತೊಡಗಿಸಿಕೊಂಡಿರುವ ಚಾಲೆಂಜಿಂಗ್ ಸ್ಟಾರ್ ಇತ್ತೀಚಿಗಷ್ಟೆ ಬಿಡುವು ಮಾಡಿಕೊಂಡು ಅಭಿಮಾನಿಗಳ ಆಸೆ ಪೂರೈಸಲು ಮುಂದಾಗಿದ್ದರು.
ದರ್ಶನ್ ಹಾಗೂ ಸಹೋದರ ದಿನಕರ್ ಹೆಸರಿನಲ್ಲಿ ಅಭಿಮಾನಿಗಳೆಲ್ಲರೂ ಸೇರಿ ಪ್ರತಿವರ್ಷ ಕ್ರಿಕೆಟ್ ಮ್ಯಾಚ್ ನಡೆಸುತ್ತಾ ಬಂದಿದ್ದಾರೆ. ಈ ವರ್ಷವೂ ಎರಡು ದಿನಗಳು ಕ್ರಿಕೆಟ್ ಮ್ಯಾಚ್ ಆಡಿಸಲಾಯ್ತು. ರಾಜ್ಯದ ಆಯ್ದ ಜಿಲ್ಲೆಗಳಿಂದ ದರ್ಶನ್ ಅಭಿಮಾನಿಗಳು ಮೈದಾನಕ್ಕೆ ಇಳಿದು ಕ್ರಿಕೆಟ್ ಆಡಿದ್ರು.
ದರ್ಶನ್ ಬಗ್ಗೆ ಮೆಚ್ಚುಗೆ ಮಾತನಾಡಿದ ಮಂಗಳೂರು ಬೆಡಗಿ
ಎರಡು ದಿನಗಳ ಅಭಿಮಾನಿಗಳ ಜಾತ್ರೆಯಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಕೂಡ ಅಭಿಮಾನಿ ಆಗಿದ್ದರು. ಅದೆಷ್ಟೇ ಬ್ಯುಸಿ ಆಗಿದ್ದರೂ ಚಾಲೆಂಜಿಂಗ್ ಸ್ಟಾರ್ ಈ ಎರಡು ದಿನಗಳು ಮಾತ್ರ ಬಿಡುವು ಮಾಡಿಕೊಳ್ಳುತ್ತಾರೆ? ಅದ್ಯಾಕೆ ಅಂತೀರಾ ಮುಂದೆ ಓದಿ
ಅಭಿಮಾನಿಗಳ ಜೊತೆ ಅಭಿಮಾನಿ
ಚಾಲೆಂಜಿಂಗ್ ಸ್ಟಾರ್ ದರ್ಶನ್ ತಮ್ಮ ಅಭಿಮಾನಿಗಳಿಗಾಗಿ ಮೈದಾನಕ್ಕಿಳಿದು ಬ್ಯಾಟ್ ಹಿಡಿದು ಕ್ರಿಕೆಟ್ ಆಡಿದ್ದಾರೆ. ಎರಡು ದಿನ ನಡೆದ 'ಡಿಪಿಎಲ್' ಕ್ರಿಕೆಟ್ ಮ್ಯಾಚ್ ನಲ್ಲಿ ಅಭಿಮಾನಿಗಳ ಜೊತೆ ಸೇರೆ ಆಟವಾಡಿದ್ದಾರೆ.
ಫ್ಯಾನ್ಸ್ ಗಾಗಿ ಸಮಯ
ದರ್ಶನ್ ಸದ್ಯ ಬಿಡುವಿಲ್ಲದಂತೆ ಸಿನಿಮಾಗಳ ಚಿತ್ರೀಕರಣದಲ್ಲಿ ಬ್ಯುಸಿ ಆಗಿದ್ದಾರೆ. ಆದರೆ ವರ್ಷಪೂರ್ತಿ ದರ್ಶನ್ ಅವರಿಗಾಗಿ ಚಡಪಡಿಸುವ ಅಭಿಮಾನಿಗಳಿಗಾಗಿ ಎರಡು ದಿನ ಸಮಯ ನೀಡಿದ್ದಾರೆ.
ಡಿಪಿಎಲ್ ನಲ್ಲಿ ಸ್ಟಾರ್ ಗಳು
ಡಿಪಿಎಲ್ ನಲ್ಲಿ ದರ್ಶನ್ ಮಾತ್ರವಲ್ಲದೆ ದಿನಕರ್ ತೂಗುದೀಪ್, ಧರ್ಮ ಕೀರ್ತಿರಾಜ್, ಸೃಜನ್ ಲೋಕೇಶ್ ಹೀಗೆ ಸಾಕಷ್ಟು ಸ್ಟಾರ್ ಗಳು ಅಭಿಮಾನಿಗಳ ಜೊತೆ ಕ್ರಿಕೆಟ್ ಆಡಿದ್ದಾರೆ.
ಕಪ್ ಗೆದ್ದುಕೊಂಡ ಕೆಂಗೇರಿ ಟೀಂ
ರಾಜ್ಯದ ಹಲವಾರು ಜಿಲ್ಲೆಗಳಿಂದ ದರ್ಶನ್ ಅಭಿಮಾನಿಗಳು ಕ್ರಿಕೆಟ್ ಆಟದಲ್ಲಿ ಭಾಗಿ ಆಗಿದ್ದರು. ಕೊನೆಯ ಪಂದ್ಯದಲ್ಲಿ ಮಂಡ್ಯ ತಂಡದ ಎದುರು ಕೆಂಗೇರಿ ಟೀಂ ಆಟವಾಡಿ ಕಪ್ ಗೆದ್ದುಕೊಂಡಿತು.