Don't Miss!
- News ಉಕ್ರೇನ್ ವಿರುದ್ಧ ರಷ್ಯಾ ಗಂಭೀರ ಆರೋಪ!
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Sports RR vs DC: ಅವೇಶ್ ಖಾನ್, ರಿಯಾನ್ ಪರಾಗ್ ಶೈನ್; ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ವಿನ್
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮಾರುವೇಷದಲ್ಲಿ ಚಿತ್ರಮಂದಿರಕ್ಕೆ ತೆರಳಿ ಸಿನಿಮಾ ವೀಕ್ಷಿಸಿದ ದರ್ಶನ್
ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ರಾಬರ್ಟ್ ಸಿನಿಮಾ ಭರ್ಜರಿ ಯಶಸ್ಸು ಕಂಡಿದೆ. ಬಾಕ್ಸ್ ಆಫೀಸ್ ನಲ್ಲಿ ಧೂಳ್ ಎಬ್ಬಿಸುತ್ತಿರುವ ರಾಬರ್ಟ್ 4 ದಿನಗಳಲ್ಲೇ 50 ಕೋಟಿ ಕ್ಲಬ್ ಸೇರುವ ಮೂಲಕ ದಾಖಲೆ ನಿರ್ಮಿಸಿದೆ.
Recommended Video
ಚಿತ್ರಮಂದಿರಗಳಲ್ಲಿ ಹೌಸ್ ಫುಲ್ ಪ್ರದರ್ಶನ ಕಾಣುತ್ತಿದ್ದು, ಅಭಿಮಾನಿಗಳು ಮುಗಿಬಿದ್ದು ಸಿನಿಮಾ ವೀಕ್ಷಿಸುತ್ತಿದ್ದಾರೆ. ಈ ನಡುವೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಯಾರಿಗೂ ಗೊತ್ತಾಗದ ಹಾಗೆ ಮಾರುವೇಷದಲ್ಲಿ ಚಿತ್ರಮಂದಿರಕ್ಕೆ ತೆರಳಿ ಅಭಿಮಾನಿಗಳ ನಡುವೆ ಕುಳಿತು ಸಿನಿಮಾ ವೀಕ್ಷಿಸಿದ್ದಾರೆ.
'ರಾಬರ್ಟ್' 3ನೇ ದಿನವೂ ಭರ್ಜರಿ ಕಲೆಕ್ಷನ್: ಯಾವ ಜಿಲ್ಲೆಯಲ್ಲಿ ಎಷ್ಟು ಗಳಿಕೆ ಮಾಡಿದೆ? ಇಲ್ಲಿದೆ ವಿವರ
ಅಭಿಮಾನಿಗಳ ಶಿಳ್ಳೆ, ಚಪ್ಪಾಳೆಗಳನ್ನು ಕೇಳಿಕೊಂಡು ಎಂಜಾಯ್ ಮಾಡಿರುವ ದರ್ಶನ್ ಮುಂದಿನ ಸಿನಿಮಾದಲ್ಲಿ ಶಿಳ್ಳೆ, ಚಪ್ಪಾಳೆ ಹೆಚ್ಚಾಗಿ ಬರುವ ದೃಶ್ಯಗಳ ಕಡೆ ಗಮನ ಹರಿಸುವುದಾಗಿ ಹೇಳಿದ್ದಾರೆ. ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಡಿ ಬಾಸ್ ದರ್ಶನ್, ಮಾರುವೇಷದಲ್ಲಿ ಸಿನಿಮಾ ವೀಕ್ಷಿಸಿದ ಬಗ್ಗೆ ವಿವರಿಸಿದ್ದಾರೆ. ಸಿನಿಮಾದಲ್ಲಿ ವಿನೋದ್ ಪ್ರಭಾಕರ್ ನಟನೆ, ತೊದಲು ಮಾತು ಖುಷಿ ಕೊಟ್ಟಿದೆ ಎಂದಿದ್ದಾರೆ.
ಇದೇ ಸಮಯದಲ್ಲಿ ಬಾಕ್ಸ್ ಆಫೀಸ್ ಸುಲ್ತಾನ್ ಬಿರುದಿನ ಬಗ್ಗೆ ಮಾತನಾಡಿದ ಡಿ ಬಾಸ್ ಬಾಕ್ಸ್ ಆಫೀಸ್ ಸುಲ್ತಾನ ಬಿರುದನ್ನು ಮೊದಲ ಬಾರಿಗೆ ಪತ್ರಕರ್ತರಾದ ವಿಜಯ್ ಸಾರಥಿಯವರು ಬರೆದಿದ್ದರು. ಅವತ್ತಿನಿಂದ ಇಂದಿನ ವರೆಗೆ ಆ ಹೆಸರು ಇದೆ. ಇಂದು ಅವರು ನಮ್ಮೊಂದಿಗಿಲ್ಲ ಆದರೆ ಹೃದಯದಲ್ಲಿ ಇದ್ದಾರೆ ಎಂದು ವಿಜಯ್ ಸಾರಥಿ ಅವರನ್ನು ನೆನಪಿಸಿಕೊಂಡರು.
ರಾಬರ್ಟ್ ಸಿನಿಮಾ ಯಶಸ್ಸಿನ ಖುಷಿಯನ್ನು ಇಡೀ ತಂಡ ಎಂಜಾಯ್ ಮಾಡುತ್ತಿದೆ. ಕನ್ನಡ ಮತ್ತು ತೆಲುಗಿನಲ್ಲಿ ಅದ್ದೂರಿಯಾಗಿ ಬಿಡುಗಡೆಯಾದ ರಾಬರ್ಟ್ ಸಿನಿಮಾದ ವಿಜಯಯಾತ್ರೆ ನಾಲ್ಕನೇ ದಿನವೂ ಮುಂದುವರೆದಿದೆ.