twitter
    For Quick Alerts
    ALLOW NOTIFICATIONS  
    For Daily Alerts

    ಮಹಿಳೆಯರನ್ನ ಗೌರವಿಸಿ ಎಂದು 'ಎಚ್ಚರಿಕೆ' ನೀಡಿದ ದರ್ಶನ್ ಪತ್ನಿ

    |

    Recommended Video

    ದರ್ಶನ್ ಪತ್ನಿ ವಿಜಯಲಕ್ಷ್ಮಿ ಎಚ್ಚರಿಕೆ ಕೊಟ್ಟಿದ್ದು ಯಾರಿಗೆ? ಯಾಕೆ? | FILMIBEAT KANNADA

    ಚಿತ್ರರಂಗದಲ್ಲಿ ಮೀಟೂ ಅಭಿಯಾನ ದೊಡ್ಡ ಸದ್ದು ಮಾಡುತ್ತಿದೆ. ನಟಿ, ಕಲಾವಿದೆ ಹಾಗೂ ಸಿನಿಮಾ ಇಂಡಸ್ಟ್ರಿಯಲ್ಲಿ ಇನ್ನಿತರ ಕೆಲಸ ಮಾಡುವ ಮಹಿಳೆಯರು ತಮ್ಮ ಮೇಲಾದ ದೌರ್ಜನ್ಯ ಮತ್ತು ಕಿರುಕುಳವನ್ನ ಬಹಿರಂಗಪಡಿಸುತ್ತಿದ್ದಾರೆ.

    ಮತ್ತೊಂದೆಡೆ ಕೇರಳದ ಶಬರಿಮಲೆಗೆ ಮಹಿಳೆಯರು ಪ್ರವೇಶಕ್ಕೆ ಸುಪ್ರೀಂಕೋರ್ಟ್ ಅನುಮತಿ ನೀಡಿದೆ. ಹೀಗಿದ್ದರೂ, ಮಹಿಳೆಯ ಪ್ರವೇಶಕ್ಕೆ ತೀವ್ರ ವಿರೋಧ ವ್ಯಕ್ತವಾಗಿದೆ.

    ಆ ನಿರ್ದೇಶಕನ ಮಂಚಕ್ಕೆ ಕಳುಹಿಸಲು ಸ್ಕೆಚ್ ಹಾಕಿದ್ಲು ಕೇಶ ವಿನ್ಯಾಸಕಿ: ಸಂಗೀತಾ ಭಟ್ ಆ ನಿರ್ದೇಶಕನ ಮಂಚಕ್ಕೆ ಕಳುಹಿಸಲು ಸ್ಕೆಚ್ ಹಾಕಿದ್ಲು ಕೇಶ ವಿನ್ಯಾಸಕಿ: ಸಂಗೀತಾ ಭಟ್

    Darshan wife vijayalakshmi wish to durgashtami

    ಹೀಗೆ, ಮಹಿಳೆಯ ಮೇಲೆ ಕಿರುಕುಳ, ದೌರ್ಜನ್ಯ ನಡೆಯುತ್ತಿರುವ ಇಂತಹ ಸಮಯಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಪತ್ನಿ ಟ್ವೀಟ್ ಮಾಡಿದ್ದಾರೆ. ದಸರಾ ಹಬ್ಬದ ಪ್ರಯುಕ್ತ ಶುಭಕೋರಿರುವ ವಿಜಯಲಕ್ಷ್ಮಿ ಪರೋಕ್ಷವಾಗಿ ಎಚ್ಚರಿಕೆ ನೀಡಿದ್ದಾರೆ.

    'ಶಬರಿಮಲೆಗೆ ಮಹಿಳೆಯರು ಪ್ರವೇಶಿಸಿದರೆ ಸಾಮೂಹಿಕ ಆತ್ಮಹತ್ಯೆ'

    ''ಪ್ರತಿಯೊಬ್ಬ ಮಹಿಳೆಯೊಳಗೆ 'ದುರ್ಗ' ಇರ್ತಾಳೆ. ದೇಗುಲಕ್ಕೆ ಹೋಗಿ ದೇವಿಯ ಪೂಜಿಸುವ ಮೊದಲು ಮಹಿಳೆಯನ್ನ ಗೌರವಿಸುವುದನ್ನ ಕಲಿಯಿರಿ'' ಎಂದು ಟ್ವೀಟ್ ಮಾಡಿದ್ದಾರೆ.

    ಇದು ಹಬ್ಬದ ಪ್ರಯುಕ್ತ ಶುಭಕೋರಿದ್ದರೂ, ಸದ್ಯದ ಬೆಳವಣಿಗಳಿಗೆ ಸೂಕ್ತವಾಗಿದೆ ಎನ್ನುವುದು ನೆಟ್ಟಿಗರ ಅಭಿಪ್ರಾಯ. ಇನ್ನು ದರ್ಶನ್ ಪತ್ನಿಯ ಈ ಟ್ವೀಟ್ ಗೆ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದು, ಇದು ನಿಜ ಎನ್ನುತ್ತಿದ್ದಾರೆ.

    English summary
    Challenging star Darshan's wife vijayalakshmi has taken her twitter account wish to durgashtami.
    Wednesday, October 17, 2018, 17:56
    IIFA

    Kannada Photos

    Go to : More Photos
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X
    X