Don't Miss!
- News Lok Sabha Election: ರಾಜಕೀಯ ಅಖಾಡದಲ್ಲಿ ನಕಲಿ ಅಭ್ಯರ್ಥಿಗಳ ಸೌಂಡ್ ಜೋರು: ಅಖಾಡದಲ್ಲಿ ನಕಲಿ ರಾಹುಲ್ ಗಾಂಧಿ, ಪಿಎಸ್ ಯಡಿಯೂರಪ್ಪ
- Technology ಒಪ್ಪೋ ಸಂಸ್ಥೆಯ ಈ ಫೋನ್ ಬೆಲೆಯಲ್ಲಿ ಭರ್ಜರಿ ಇಳಿಕೆ; ಆಫರ್ಗೆ ಗ್ರಾಹಕರು ಫಿದಾ!
- Automobiles ಭಾರತದ ರಸ್ತೆಯಲ್ಲಿ ಘರ್ಜಿಸುತ್ತಿರುವ ಪವರ್ಫುಲ್ ಎಪ್ರಿಲಿಯಾ ಬೈಕ್ಗಾಗಿ ಅಕ್ಸೆಸರೀಸ್ ಬಿಡುಗಡೆ
- Sports ಐಪಿಎಲ್ನಿಂದ ದೂರವುಳಿದಿದ್ದ ಟೀಮ್ ಇಂಡಿಯಾ ವೇಗಿ ಟಿ20 ವಿಶ್ವಕಪ್ ಆಡುತ್ತಾರಾ?: ಆಟಗಾರ ಹೇಳಿದ್ದೇನು?
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ದರ್ಶನ್ 'ಮುನಿಸು' ಅಂತೆ-ಕಂತೆ ಅಷ್ಟೆ... ಕಿವಿಗೆ ಹಾಕಿಕೊಳ್ಳಬೇಡಿ
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯಿಸಲು ಒಪ್ಪಿಕೊಂಡಿರುವ 50ನೇ ಸಿನಿಮಾ 'ಕುರುಕ್ಷೇತ್ರ' ಸೆಟ್ಟೇರುವ ಮುನ್ನವೇ ಗಲ್ಲಿ ಗಾಸಿಪ್ ಪಂಡಿತರ ಬಾಯಿಗೆ ಆಹಾರವಾಗಿದೆ.
''ಕುರುಕ್ಷೇತ್ರ' ಚಿತ್ರತಂಡ ಮೇಲೆ ಮುನಿಸಿಕೊಂಡಿರುವ ದರ್ಶನ್, ಸಿನಿಮಾದಿಂದ ಹೊರಬಂದಿದ್ದಾರೆ'' ಎಂಬ ಗುಲ್ಲು ಕಳೆದ ಎರಡ್ಮೂರು ದಿನಗಳಿಂದ ಗಾಂಧಿನಗರದ ಮೂಲೆ ಮೂಲೆಯಲ್ಲೂ ಕೇಳಿಬರುತ್ತಿದೆ.
'ಕುರುಕ್ಷೇತ್ರ'ದ ಬಗ್ಗೆ ಬೇಸರಗೊಂಡಿದ್ದಾರಾ ನಟ ದರ್ಶನ್.?
ಹಾಗಾದ್ರೆ, 'ಕುರುಕ್ಷೇತ್ರ' ಚಿತ್ರವನ್ನ ದರ್ಶನ್ ಕೈಬಿಟ್ಟಿದ್ದಾರಾ.? ಎಂಬ ಅನುಮಾನಕ್ಕೆ ಸಹೋದರ ದಿನಕರ್ ತೂಗುದೀಪ ಉತ್ತರ ನೀಡಿದ್ದಾರೆ. ಮುಂದೆ ಓದಿರಿ...
ಇದೆಲ್ಲ ಸುಳ್ಳು
''ಕುರುಕ್ಷೇತ್ರ ಚಿತ್ರವನ್ನ ದರ್ಶನ್ ಕೈಬಿಟ್ಟಿಲ್ಲ. ಅಂತಹ ಅವಕಾಶವನ್ನು ದರ್ಶನ್ ಬಿಡೋದಿಲ್ಲ'' ಎಂದು 'ಚಿತ್ರಲೋಕ.ಕಾಮ್'ಗೆ ದಿನಕರ್ ತೂಗುದೀಪ ಸ್ಪಷ್ಟಪಡಿಸಿದ್ದಾರೆ.
'ಕುರುಕ್ಷೇತ್ರ'ದಲ್ಲಿ ದರ್ಶನ್ ಸಂಭಾವನೆ ಕೇಳಿ ಬೆಚ್ಚಿಬಿದ್ದ ಗಾಂಧಿನಗರ.!
ಅಪರೂಪದ ಅವಕಾಶ
''ದುರ್ಯೋಧನ ಪಾತ್ರಕ್ಕಾಗಿ ದರ್ಶನ್, ತೂಕ ಹೆಚ್ಚಿಸಿಕೊಳ್ಳುತ್ತಿದ್ದಾರೆ. ಒಬ್ಬ ನಟನ ಜೀವನದಲ್ಲಿ ಸಿಗುವ ಅಪರೂಪದ ಅವಕಾಶ ಇದು'' ಎನ್ನುತ್ತಾರೆ ದಿನಕರ್ ತೂಗುದೀಪ
'ಕುರುಕ್ಷೇತ್ರ'ಕ್ಕೆ ಕರ್ಣ ಫಿಕ್ಸ್: ಇದು ದರ್ಶನ್ ಬಳಗಕ್ಕೆ ಶಾಕ್ ಆದ್ರು ಖುಷಿ ವಿಚಾರವೇ.!
ಇದೇ ತಿಂಗಳು ಸಿನಿಮಾ ಸೆಟ್ಟೇರಲಿದೆ
'ಕುರುಕ್ಷೇತ್ರ' ಸಿನಿಮಾ ಇದೇ ತಿಂಗಳು ಸೆಟ್ಟೇರಲಿದೆ. ಮುನಿರತ್ನ ರವರ ಹುಟ್ಟುಹಬ್ಬದಂದು 'ಕುರುಕ್ಷೇತ್ರ' ಸಿನಿಮಾದ ಮುಹೂರ್ತ ನೆರವೇರಲಿದೆ. ಹೈದರಾಬಾದ್ ನಲ್ಲಿ ಇರುವ ರಾಮೋಜಿ ಫಿಲ್ಮ್ ಸಿಟಿಯಲ್ಲಿ 'ಕುರುಕ್ಷೇತ್ರ' ಚಿತ್ರದ ಶೂಟಿಂಗ್ ನಡೆಯಲಿದೆ.
'ಕುರುಕ್ಷೇತ್ರ'ದ ಪಾತ್ರಧಾರಿಗಳು...
'ಕುರುಕ್ಷೇತ್ರ' ಸಿನಿಮಾದಲ್ಲಿ ರವಿಚಂದ್ರನ್ 'ಶ್ರೀಕೃಷ್ಣ'ನ ಪಾತ್ರ ನಿರ್ವಹಿಸಲಿದ್ದಾರೆ. ದ್ರೋಣಾಚಾರ್ಯ ಆಗಿ ಶ್ರೀನಿವಾಸ ಮೂರ್ತಿ ಬಣ್ಣಹಚ್ಚಲಿದ್ರೆ, ಧೃತರಾಷ್ಟ್ರನಾಗಿ ಶ್ರೀನಾಥ್ ಅಭಿನಯಿಸಲಿದ್ದಾರೆ. ಉಳಿದ ಪಾತ್ರಗಳಿಗೆ ಆಯ್ಕೆ ನಡೆಯಬೇಕಿದೆ.