Don't Miss!
- Lifestyle ಗಾಯ ಗುಣವಾಗಲು, ದೃಷ್ಟಿ ಸುಧಾರಣೆ ಸೇರಿ ಕೀವಿ ಹಣ್ಣಿನ ಲಾಭ ಎಷ್ಟಿದೆ ಗೊತ್ತಾ?
- News ಕುಡಿಯುವ ನೀರಿಲ್ಲದೇ ಜನ ಬೆಂಗಳೂರಿಗೆ ಬಾಯ್ ಹೇಳುತ್ತಿದ್ದಾರೆ: ಆರ್.ಅಶೋಕ್
- Sports ರೋಹಿತ್ vs ಹಾರ್ದಿಕ್: ಸತತ ಸೋಲಿನ ನಡುವೆಯೇ ಮುಂಬೈ ಇಂಡಿಯನ್ಸ್ ಇಬ್ಭಾಗ!?
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮತ್ತೊಬ್ಬ ಯುವ ನಿರ್ದೇಶಕನಿಗೆ ಸಾಥ್ ನೀಡಿದ ದರ್ಶನ್
ನಟ ದರ್ಶನ್ ತಾವು ಬೆಳೆಯುವುದರ ಜೊತೆಗ ಇತರರನ್ನು ಬೆಳೆಸುವ ಗುಣ ಇರುವ ವ್ಯಕ್ತಿ. ಅದು ಈಗಾಗಲೇ ಅನೇಕ ಬಾರಿ ಸಾಬೀತು ಆಗಿದೆ. ಇದೀಗ ದರ್ಶನ್ ಕನ್ನಡದ ಯುವ ನಿರ್ದೇಶಕನ ಸಿನಿಮಾಗೆ ಸಾಥ್ ನೀಡಿದ್ದಾರೆ.
ದರ್ಶನ್ ಈಗೀಗಾ ಹೊಸ ಸಿನಿಮಾಗಳಿಗೆ ತಮ್ಮ ಕೈನಲ್ಲಿ ಅದಷ್ಟು ಸಹಾಯ ಮಾಡುತ್ತಿದ್ದಾರೆ. ಸಿನಿಮಾದ ಟ್ರೇಲರ್, ಹಾಡುಗಳು, ಟೀಸರ್ ಬಿಡುಗಡೆ ಮಾಡಿ ಕೊಟ್ಟು ಚಿತ್ರವನ್ನು ಇನ್ನಷ್ಟು ಜನರಿಗೆ ತಲುಪುವ ರೀತಿ ಮಾಡುತ್ತಿದ್ದಾರೆ. ಈಗ ಅದೇ ರೀತಿ 'ಇರುವುದೆಲ್ಲವ ಬಿಟ್ಟು ಇರುವೆ ಬಿಟ್ಟುಕೊಳ್ಳುವುದೇ ಜೀವನ' ತಂಡಕ್ಕೆ ದಾಸ ಬಲ ನೀಡಿದ್ದಾರೆ.
ಸುಂದರ ಸಾಹಿತ್ಯಕ್ಕೆ ಸೊಗಸಾದ ಸಂಗೀತ ಸೇರಿ ಮುದ್ದಾಗಿದೆ ಮೇಘನಾ ಹಾಡು
'ಇರುವುದೆಲ್ಲವ ಬಿಟ್ಟು ಇರುವೆ ಬಿಟ್ಟುಕೊಳ್ಳುವುದೇ ಜೀವನ' ಸಿನಿಮಾದ ಟ್ರೇಲರ್ ನಾಳೆ (ಆಗಸ್ಟ್ 27) ರಿಲೀಸ್ ಆಗಲಿದೆ. ಈ ಟ್ರೇಲರ್ ಅನ್ನು ಸ್ವತಃ ದರ್ಶನ್ ಅವರು ಲಾಂಚ್ ಮಾಡಲಿದ್ದಾರೆ. ಈ ಮೂಲಕ ಮತ್ತೊಂದು ಸಿನಿಮಾ ತಂಡಕ್ಕೆ ದರ್ಶನ್ ತಮ್ಮ ಪ್ರೋತ್ಸಾಹ ನೀಡುತ್ತಿದ್ದಾರೆ.
ಅಂದಹಾಗೆ, 'ಇರುವುದೆಲ್ಲವ ಬಿಟ್ಟು ಇರುವೆ ಬಿಟ್ಟುಕೊಳ್ಳುವುದೇ ಜೀವನ' ಚಿತ್ರ ನಿರ್ದೇಶಕ ಕಾಂತ ಕನ್ನಲಿ ಅವರ ಕನಸಿನ ಸಿನಿಮಾ. ಈ ಸಿನಿಮಾಗಾಗಿ ಬಹಳ ಶ್ರಮ ಪಟ್ಟಿರುವ ಅವರು ಈ ಸಿನಿಮಾದ ಮೇಲೆ ಹೆಚ್ಚು ಪ್ರೀತಿ ಇಟ್ಟುಕೊಂಡಿದ್ದಾರೆ.
'ಇರುವುದೆಲ್ಲವ ಬಿಟ್ಟು' ತಂಡಕ್ಕೆ ಸಾಥ್ ನೀಡಿದ ಶ್ರೀ ಮುರಳಿ
ನಟಿ ಮೇಘನಾ ರಾಜ್ ಈ ಹಿಂದೆ ಕಾಣಿಸಿಕೊಂಡಿರದ ಪಾತ್ರದಲ್ಲಿ ನಟಿಸಿದ್ದಾರೆ. ತಿಲಕ್ ಹಾಗೂ ಶ್ರೀ ಮಹದೇವ್ ಚಿತ್ರದ ನಾಯಕನಾಗಿದ್ದಾರೆ.