Don't Miss!
- News
ಕೊರೊನಾ 2ನೇ ಅಲೆಯಲ್ಲಿ ಪಾಸಿಟಿವಿಟಿ ದರ ಹೆಚ್ಚಲು ಕಾರಣವೇನು?
- Automobiles
ಎಲೆಕ್ಟ್ರಿಕ್ ದ್ವಿಚಕ್ರ ವಾಹನ ಖರೀದಿಗೂ ಮುನ್ನ ಪರಿಶೀಲಿಸಬೇಕಾದ ಸಂಗತಿಗಳಿವು
- Sports
ಮ್ಯಾಕ್ಸ್ವೆಲ್ ಸಿಕ್ಸ್ ದಾಖಲೆ ಮುರಿದ ಕೀರನ್ ಪೊಲಾರ್ಡ್
- Lifestyle
ವಾರ ಭವಿಷ್ಯ: 12 ರಾಶಿಗಳ ರಾಶಿಫಲ ಹೇಗಿದೆ?
- Finance
UMANG APP: ಇಪಿಎಫ್ಗೆ ಸಂಬಂಧಿಸಿದ ಆ್ಯಪ್, ವೈಶಿಷ್ಟ್ಯಗಳೇನು ತಿಳಿಯಿರಿ
- Education
Ninasam Diploma Admission 2020-21: ಮೇ ತಿಂಗಳಲ್ಲಿ ನೀನಾಸಂ ಡಿಪ್ಲೋಮಾ ಪ್ರವೇಶಾತಿ ಆರಂಭ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಕೃಷಿ ಇಲಾಖೆಯ ರಾಯಭಾರಿಯಾಗಿ ದರ್ಶನ್ ಅಧಿಕಾರ ಸ್ವೀಕಾರ ಸಮಾರಂಭ
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಕರ್ನಾಟಕ ಕೃಷಿ ಇಲಾಖೆಯ ರಾಯಭಾರಿಯಾಗಿ ಆಯ್ಕೆಯಾಗಿರುವ ವಿಚಾರ ಗೊತ್ತೆ ಇದೆ. ಈ ಸಂಬಂಧ ಕೃಷಿ ಇಲಾಖೆಯಿಂದ ಅಧಿಕೃತ ಆದೇಶವೂ ಪ್ರಕಟವಾಗಿದೆ.
ಇದೀಗ, ಕೃಷಿ ಇಲಾಖೆಯ ರಾಯಭಾರಿಯಾಗಿ ನಟ ದರ್ಶನ್ ಅವರು ಅಧಿಕಾರ ಸ್ವೀಕಾರ ಮಾಡಲಿದ್ದಾರೆ. ಮಾರ್ಚ್ 5 ರಂದು ಮಧ್ಯಾಹ್ನ ವಿಕಾಸಸೌಧದಲ್ಲಿ ಈ ಸಮಾರಂಭ ನಡೆಯಲಿದೆ.
ಕೃಷಿ ಇಲಾಖೆಗೆ ದರ್ಶನ್ ರಾಯಭಾರಿ: ಹೊರಬಿತ್ತು ಅಧಿಕೃತ ಆದೇಶ
ನಟ ದರ್ಶನ್ ಅವರು ಯಾವುದೇ ಸಂಭಾವನೆ ಪಡೆಯದೆ ಕೃಷಿ ಇಲಾಖೆಯ ರಾಯಭಾರಿಯಾಗಿ ಕಾರ್ಯನಿರ್ವಹಿಸಲು ಒಪ್ಪಿಕೊಂಡಿದ್ದಾರೆ ಎಂದು ಕೃಷಿ ಸಚಿವ ಬಿಸಿ ಪಾಟೀಲ್ ತಿಳಿಸಿದ್ದರು.
ಕೃಷಿ ಇಲಾಖೆಯಿಂದ ಹಮ್ಮಿಕೊಳ್ಳುವ ಕಾರ್ಯಕ್ರಮಗಳು, ಕೃಷಿ ಇಲಾಖೆ ಜಾರಿಗೊಳಿಸುವ ನಿಯಮಗಳ ಪ್ರಚಾರದಲ್ಲಿ ಮತ್ತು ಕೃಷಿ ಚುಟವಟಿಕೆಗಳಿಗೆ ಸ್ಫೂರ್ತಿ ತುಂಬುವ ಕೆಲಸವನ್ನು ದರ್ಶನ್ ಮಾಡಲಿದ್ದಾರೆ.
ಅಂದ್ಹಾಗೆ, ನಟ ದರ್ಶನ್ ಅವರು ಮೈಸೂರಿನಲ್ಲಿ ಪಾರ್ಮ್ ಹೌಸ್ ಹೊಂದಿದ್ದು, ಹಲವು ಬಗೆಯ ಸಾಕು ಪ್ರಾಣಿಗಳನ್ನು ಪೋಷಿಸುತ್ತಾರೆ. ಕೃಷಿ ಚಟುವಟಿಕೆಗಳಲ್ಲಿ ತೊಡಗಿಕೊಂಡಿದ್ದಾರೆ. ರೈತರ ಬಗ್ಗೆ ಹಾಗೂ ಕೃಷಿಯ ಬಗ್ಗೆ ಹೆಚ್ಚು ಆಸಕ್ತಿ ಮತ್ತು ಕಾಳಜಿ ಹೊಂದಿರುವ ನಟ ಎಂಬ ಕಾರಣಕ್ಕೆ ಕೃಷಿ ಇಲಾಖೆ ರಾಯಭಾರಿಯಾಗಿ ನೇಮಕ ಮಾಡಿಕೊಂಡಿದೆ.
ಕರ್ನಾಟಕದಲ್ಲಿ 'ವೀಕೆಂಡ್ ಅಗ್ರಿಕಲ್ಚರ್': ಕೃಷಿ ಇಲಾಖೆಗೆ ಜೊತೆಯಾದ ದಾಸ
ಇದನ್ನು ಮೀರಿ ಕೃಷಿ ಸಚಿವ ಬಿಸಿ ಪಾಟೀಲ್ ಹಾಗೂ ದರ್ಶನ್ ನಡುವೆ ಉತ್ತಮ ಸಂಬಂಧವಿದೆ. ಇಬ್ಬರು ನಡುವೆ ಒಳ್ಳೆಯ ಬಾಂಧವ್ಯ ಇದೆ. ಇದು ಸಹ ಒಂದು ಕಾರಣವಾಗಿದೆ.