ಮಕ್ಕಳ ಭವಿಷ್ಯಕ್ಕಾಗಿ ಮಕ್ಕಳ ರಕ್ಷಣೆಗೆ ನಿಂತ 'ಯಜಮಾನ'
Recommended Video

ಮಕ್ಕಳ ದಿನಾಚರಣೆಯ ಪ್ರಯುಕ್ತ ಶುಭಾಶಯ ಕೋರಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಮಕ್ಕಳ ಭವಿಷ್ಯಕ್ಕಾಗಿ 'ಮಕ್ಕಳನ್ನ ರಕ್ಷಿಸಿ' ಎಂದು ಕರೆ ನೀಡಿದ್ದಾರೆ.
ಸದ್ಯದ ಸಮಾಜದಲ್ಲಿ ಅನೇಕ ಮಕ್ಕಳು ಶಿಕ್ಷಣವನ್ನ ಬಿಟ್ಟು, ತಮ್ಮ ಜೀವನ ಹಾಗೂ ತನ್ನ ಕುಟುಂಬ ಜೀವನ ನಿರ್ವಹಣೆಗಾಗಿ ಕೆಲಸ ಮಾಡುತ್ತಿದ್ದಾರೆ. 14 ವರ್ಷದೊಳಗಿನ ಮಕ್ಕಳು ಕೆಲಸ ಮಾಡುವುದು ಕಾನೂನಿನ ಪ್ರಕಾರ ಅಪರಾಧ. ಈ ಪದ್ಧತಿಯನ್ನ ನಿರ್ಮೂಲನೆ ಮಾಡಬೇಕು ಎಂದು ನಟ ದರ್ಶನ್ ಸಲಹೆ ನೀಡಿದ್ದಾರೆ.
''ಎಲ್ಲಾ ಮಕ್ಕಳಿಗೂ, ಮಕ್ಕಳ ಮನಸ್ಸುಳ್ಳವರಿಗೂ ಮಕ್ಕಳ ದಿನಾಚರಣೆಯ ಹಾರ್ಧಿಕ ಶುಭಾಶಯಗಳು. ಬಾಲಕಾರ್ಮಿಕ ಪದ್ಧತಿಯನ್ನು ನಮ್ಮ ದೇಶದಿಂದ ನಿರ್ಮೂಲನೆ ಮಾಡಲು ಎಲ್ಲರೂ ಕೈಜೋಡಿಸಿ ಮಕ್ಕಳಿಗೆ ಉಜ್ವಲವಾದ ಭವಿಷ್ಯವನ್ನು ರೂಪಿಸಿ ಕೊಡುವಲ್ಲಿ ಸಾಧ್ಯವಾದಷ್ಟು ಶ್ರಮಿಸಬೇಕು'' ಎಂದಿದ್ದಾರೆ.

ಮಕ್ಕಳ ಬಗ್ಗೆ ದರ್ಶನ್ ಅವರು ತೋರಿರುವ ಕಳಕಳಿಗೆ ಸಾಮಾಜಿಕ ಜಾಲತಾಣದಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ. ಇತ್ತೀಚಿಗಷ್ಟೆ ದರ್ಶನ್ ಅವರ ಮಗ ವಿನೀಶ್ ಹುಟ್ಟುಹಬ್ಬ ಆಚರಿಸಲಾಗಿತ್ತು. ದರ್ಶನ್ ಜೊತೆ ವಿನೀಶ್ ಕೂಡ ಕೆಲವು ಸಿನಿಮಾದಲ್ಲಿ ನಟಿಸಿದ್ದಾರೆ.


Click it and Unblock the Notifications











