Don't Miss!
- Finance ಡಾ. ರಾಜ್ಕುಮಾರ್ ಜನ್ಮದಿನದಂದು ಹೊಸ ಉದ್ಯಮ ಆರಂಭಿಸಿದ ಅಶ್ವಿನಿ ಪುನೀತ್ ರಾಜ್ಕುಮಾರ್
- Lifestyle ಮಲೆನಾಡ ಶೈಲಿನ ಮೃದುವಾದ ಕಡುಬು ಮಾಡೋದು ಹೇಗೆ.? ಸಿಂಪಲ್ ತಿಂಡಿ ರೆಸಿಪಿ
- News Realme Narzo 70: ಭರ್ಜರಿ ಕ್ಯಾಮೆರಾ ಫೀಚರ್ಗಳೊಂದಿಗೆ ರಿಯಲ್ಮಿ ನಾರ್ಜೊ 70 ಗ್ರ್ಯಾಂಡ್ ಲಾಂಚ್
- Sports DC vs GT IPL 2024: ಅಕ್ಷರ್, ರಿಷಭ್ ಶೈನಿಂಗ್; ಗುಜರಾತ್ ವಿರುದ್ಧ ಡೆಲ್ಲಿ ಜಯಭೇರಿ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಕೊರೊನಾ ದೂರವಾಗಿ ಎಲ್ಲರ ಬಾಳಲ್ಲೂ ಹೊಸ ಹುರುಪು, ಉತ್ಸಾಹ ಮೂಡಲಿ'
ವರ್ಷದ ಮೊದಲ ಹಬ್ಬ ಸಂಕ್ರಾಂತಿಯನ್ನು ಸ್ಯಾಂಡಲ್ವುಡ್ ಬಹಳ ಖುಷಿಯಿಂದ ಸ್ವಾಗತಿಸಿದೆ. ಕಳೆದ ಒಂದು ವರ್ಷದಿಂದ ಸಿನಿಮಾ, ಕೆಲಸವಿಲ್ಲದೇ ಕೈಕಟ್ಟಿ ಕುಳಿತಿದ್ದ ಚಿತ್ರರಂಗ ಈಗ ನಿಧಾನವಾಗಿ ಚೇತರಿಸಿಕೊಳ್ಳುತ್ತಿದೆ. ಕೊರೊನಾದಿಂದ ಹೊರಬಂದು ಮತ್ತೆ ಮೊದಲಿನಂತೆ ಜೀವನ ನಡೆಸಲು ಮಾರ್ಗಗಳನ್ನು ಕಂಡುಕೊಳ್ಳುತ್ತಿದ್ದಾರೆ.
ಸಾವು-ನೋವುಗಳಿಂದ ಕೂಡಿದ್ದ 2020ಕ್ಕೆ ಗುಡ್ ಬೈ ಹೇಳಿ 2021ನೇ ವರ್ಷ ಎಲ್ಲರ ಬಾಳಲ್ಲೂ ಹೊಸ ಹುರುಪು, ಉತ್ಸಾಹ ಮೂಡಲಿ ಎಂಬ ಆಶಯದೊಂದಿಗೆ ಹೊಸ ವರ್ಷವನ್ನು ಬರಮಾಡಿಕೊಳ್ಳಲಾಗಿದೆ.
ದಿನಕರ್ ಜೊತೆ ದರ್ಶನ್ ಸಿನಿಮಾ ಯಾವಾಗ? ಡಿ ಬಾಸ್ ಬಳಿ ಇರುವ ಸಿನಿಮಾಗಳೆಷ್ಟು? ಇಲ್ಲಿದೆ ಮಾಹಿತಿ
ಈಗ ವರ್ಷದ ಮೊದಲ ಹಬ್ಬ ಸಂಕ್ರಾಂತಿಯ ಸಂಭ್ರಮ. ಕಳೆದ ವರ್ಷದ ನೋವುಗಳನ್ನು ಮರೆತು ಹೊಸ ಹುರುಪು, ಉತ್ಸಾಹದೊಂದಿಗೆ ಜೀವನ ಮುಂದುವರಿಸಬೇಕು ಎಂದ ನಟ ದರ್ಶನ್ ಶುಭಕೋರಿದ್ದಾರೆ.
ಸಂಕ್ರಾಂತಿ ಹಬ್ಬಕ್ಕೆ ಸಾಮಾಜಿಕ ಜಾಲತಾಣದಲ್ಲಿ ಶುಭಕೋರಿರುವ ನಟ ದರ್ಶನ್ ''2021ರ ಮೊದಲನೆಯ ಹಬ್ಬ ಸಂಕ್ರಾಂತಿ ಸಮೃದ್ಧಿಯ ಸಂಕೇತ. ಎಲ್ಲರ ಮನೆ-ಮನೆಗೂ ಎಳ್ಳು ಬೆಲ್ಲ ಬೀರಿ ಸಂತಸ ಹಂಚಿಕೊಳ್ಳುವ ಸಮಯ. ಕಳೆದ ವರ್ಷದ ಸಂಭ್ರಮಗಳನ್ನು ಕಸಿದುಕೊಂಡಿದ್ದ ಕೊರೊನಾ ದೂರವಾಗಿ ಸಂಕ್ರಾಂತಿಯಿಂದ ಎಲ್ಲರ ಬಾಳಲ್ಲೂ ಹೊಸ ಹುರುಪು, ಉತ್ಸಾಹ ಮೂಡಲಿ ಎಂದು ಆಶಿಸುತ್ತೇನೆ. ಸಮಸ್ತ ನಾಡಿನ ಜನತೆಗೆ ಮಕರ ಸಂಕ್ರಾಂತಿಯ ಹಾರ್ಧಿಕ ಶುಭಾಶಯಗಳು'' ಎಂದಿದ್ದಾರೆ.
ದರ್ಶನ್ ಅವರ ಶುಭಾಶಯಕ್ಕೆ ಅಭಿಮಾನಿಗಳು ಸಂತಸ ವ್ಯಕ್ತಪಡಿಸಿದ್ದು, ತಮಗೂ ಈ ವರ್ಷ ಒಳ್ಳೆಯದಾಗಲಿ ಎಂದು ಹಾರೈಸುತ್ತಿದ್ದಾರೆ.
ಇತ್ತೀಚಿಗಷ್ಟೆ ಫೇಸ್ಬುಕ್ ಲೈವ್ನಲ್ಲಿ ಮಾತನಾಡಿದ್ದ ದರ್ಶನ್, 'ಈ ಸಲ ನನ್ನ ಹುಟ್ಟುಹಬ್ಬಕ್ಕೆ ಯಾರೂ ಬರಬೇಡಿ, ಎಲ್ಲರೂ ಸಂಕಷ್ಟದಲ್ಲಿದ್ದೀರ, ನನಗಾಗಿ ಖರ್ಚು ಮಾಡುವ ಹಣವನ್ನು ನಿಮಗಾಗಿ, ನಿಮ್ಮ ಕುಟುಂಬಕ್ಕಾಗಿ ಬಳಸಿ'' ಎಂದು ವಿನಂತಿಸಿದ್ದರು.
ಚಾಲೆಂಜಿಂಗ್ ಸ್ಟಾರ್ ದರ್ಶನ್ ಒಟಿಟಿ ಕುರಿತು ಹೇಳಿಕೆಗೆ ಬಿಸಿ ಪಾಟೀಲ್ ಪ್ರತಿಕ್ರಿಯೆ
ಹಾಗಯೇ ದರ್ಶನ್ ನಟನೆಯಲ್ಲಿ ತಯಾರಾಗಿರುವ ರಾಬರ್ಟ್ ಸಿನಿಮಾದ ಬಿಡುಗಡೆ ಕುರಿತು ಮಾಹಿತಿ ನೀಡಿದ್ದರು. ರಾಬರ್ಟ್ ಸಿನಿಮಾ ಮಹಾಶಿವರಾತ್ರಿ ಹಬ್ಬದ ವಿಶೇಷವಾಗಿ ಮಾರ್ಚ್ 11ಕ್ಕೆ ತೆರೆಗೆ ಬರಲಿದೆ ಎಂದು ಹೇಳಿದ್ದರು.