ಕನ್ನಡ ಹಬ್ಬಕ್ಕೆ ಶುಭಕೋರಿದ ದರ್ಶನ್-ಯಶ್-ಧ್ರುವ ಸರ್ಜಾ
ನಾಡಿನಾದ್ಯಂತ ಕನ್ನಡ ರಾಜ್ಯೋತ್ಸವದ ಸಡಗರ ಜೋರಾಗಿದೆ. ದೇಶದ ಪ್ರಧಾನಿ ನರೇಂದ್ರ ಮೋದಿ ಸಹ ಕನ್ನಡಿಗರಿಗೆ ಕನ್ನಡದಲ್ಲಿ ಶುಭಕೋರುವ ಮೂಲಕ ರಾಜ್ಯೋತ್ಸವದ ಮೆರುಗನ್ನು ಹೆಚ್ಚಿಸಿದ್ದಾರೆ.
ಈ ಕಡೆ ಸ್ಯಾಂಡಲ್ ವುಡ್ನಲ್ಲಿ ಕನ್ನಡ ಹಬ್ಬದ ಸಂಭ್ರಮ ಮನೆ ಮಾಡಿದೆ. ಸ್ಟಾರ್ ನಟ-ನಟಿಯರು, ನಿರ್ದೇಶಕ-ತಂತ್ರಜ್ಞರು ಸೇರಿದಂತೆ ಅನೇಕರು ರಾಜ್ಯೋತ್ಸವಕ್ಕೆ ಶುಭಕೋರಿದ್ದಾರೆ. ಪುನೀತ್ ರಾಜ್ ಕುಮಾರ್, ಶಿವರಾಜ್ ಕುಮಾರ್, ಸುದೀಪ್, ಜಗ್ಗೇಶ್ ನಂತರ ಈಗ ದರ್ಶನ್, ಯಶ್, ಧ್ರುವ ಸರ್ಜಾ ಟ್ವಿಟ್ಟರ್ ಮೂಲಕ ವಿಶ್ ಮಾಡಿದ್ದಾರೆ. ಮುಂದೆ ಓದಿ...

ದರ್ಶನ್ ತೂಗುದೀಪ
''ಎಲ್ಲಾದರೂ ಇರು ಎಂತಾದರೂ ಇರು, ಎಂದೆಂದಿಗೂ ನೀ ಕನ್ನಡವಾಗಿರು. ಕನ್ನಡವೇ ಸತ್ಯ, ಕನ್ನಡವೇ ನಿತ್ಯ. ಸಮಸ್ತ ನಾಡಿನ ಕನ್ನಡಾಭಿಮಾನಿಗಳಿಗೆ ಕನ್ನಡ ರಾಜ್ಯೋತ್ಸವದ ಹಾರ್ಧಿಕ ಶುಭಾಶಯಗಳು.'' ನಿಮ್ಮ ದಾಸ ದರ್ಶನ್

ರಾಕಿಂಗ್ ಸ್ಟಾರ್ ಯಶ್
''ಈ ಮಣ್ಣಿನ ಪ್ರತಿ ಕಣವೂ ಬಂಗಾರ... ಕನ್ನಡಾಂಬೆ ನೀನೆ ಭಾರತ ಮಾತೆಯ ಸಿಂಧೂರ'' - ಯಶ್

ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ
''ಕನ್ನಡ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು...ಜೈ ಕನ್ನಡಾಂಬೆ..ಜೈ ಆಂಜನೇಯ'' - ಧ್ರುವ ಸರ್ಜಾ

ಬಹುಭಾಷಾ ನಟ ಪ್ರಕಾಶ್ ರಾಜ್
''ನಮ್ಮ ಭಾಷೆ...ನಮ್ಮ ಧ್ವನಿ.....ನಮ್ಮ ಸಂಪತ್ತು ....ಕನ್ನಡ . ಇಂದು ನಮ್ಮ ಹಬ್ಬ..ಎಲ್ಲರೂ ಒಂದಾಗಿ ಸಂಭ್ರಮಿಸೊಣ... ಕನ್ನಡ ರಾಜ್ಯೊತ್ಸವದ ಶುಭಾಶಯಗಳು'' - ಪ್ರಕಾಶ್ ರಾಜ್
Recommended Video

ನಟ ಗಣೇಶ್
''ನರಕಕ್ ಇಳ್ಸಿ ನಾಲ್ಗೆ ಸೀಳ್ಸಿ ಬಾಯ್ ಒಲಸಾಕಿದ್ರೂನು ಮೂಗ್ನಲ್ ಕನ್ನಡ ಪದವಾಡ್ತೀನಿ...'' - ಗಣೇಶ್


Click it and Unblock the Notifications











