Don't Miss!
- Lifestyle ಬಾಯಿ ರುಚಿಗೆ ಗರಿ ಗರಿ ನಿಪ್ಪಟ್ಟು..! ಮನೆಯಲ್ಲೇ ಮಾಡಿ ಟೆಸ್ಟಿ ತಿಂಡಿ
- Automobiles Kia: ಬ್ರೇಕ್ ಇಲ್ಲದ ಟ್ರಕ್ನಂತೆ ಮುನ್ನುಗ್ಗುತ್ತಿದೆ ಕಿಯಾ: ಈಗ ಸಣ್ಣ ಪಟ್ಟಣಗಳಲ್ಲೂ ಸಿಗಲಿದೆ!
- Sports RCB vs KKR: ಯಶ್ ಮೇಲೆ 'ದಯೆ' ತೋರುತ್ತಾರಾ ರಿಂಕು ಸಿಂಗ್?; ಜಿದ್ದು ತೀರಿಸಿಕೊಳ್ತಾರಾ ಆರ್ಸಿಬಿ ವೇಗಿ?
- Technology ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಡೀಪ್ಫೇಕ್ ದೊಡ್ಡ ಕಳವಳಕಾರಿ ಎಂದ ಮೋದಿ
- News ಚಿತ್ರದುರ್ಗದಲ್ಲಿ ಬಿಜೆಪಿಗೆ ಬಂಡಾಯದ ಬಿಸಿ: ಅಭ್ಯರ್ಥಿ ಬದಲಿಸದಿದ್ದರೆ ಪಕ್ಷೇತರ ಸ್ಪರ್ಧೆ, ಏ.3ಕ್ಕೆ ನಾಮಪತ್ರ ಸಲ್ಲಿಕೆ?
- Finance 25ನೇ ವಯಸ್ಸಿನಲ್ಲಿ 25,000 ರೂ.ನಿಂದ 7,000 ಕೋಟಿ ಗಳಿಸಿದ ವ್ಯಕ್ತಿ ಬಗ್ಗೆ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಒಡೆಯ'ನಾದ ದರ್ಶನ್ ಗೆ ಬಲ ನೀಡಿದ ಅಂಬಿ
Recommended Video
ನಟ ದರ್ಶನ್ ಇಂದಿನಿಂದ 'ಒಡೆಯ'ನಾಗಿದ್ದಾರೆ. ಅರ್ಥಾತ್ ಡಿ ಬಾಸ್ ಅವರ ಹೊಸ ಸಿನಿಮಾ ಇಂದು ಲಾಂಚ್ ಆಗಿದೆ. ದರ್ಶನ್ ಅವರ ಈ ಚಿತ್ರಕ್ಕೆ ನಟ ಅಂಬರೀಶ್ ಸಾಥ್ ನೀಡಿದ್ದಾರೆ. ಈ ಚಿತ್ರಕ್ಕೆ ಮೊದಲು 'ಒಡೆಯರ್' ಎಂಬ ಹೆಸರು ಇದ್ದು, ಬಳಿಕ 'ಒಡೆಯ' ಎಂದು ಅದನ್ನು ಬದಲಿಸಲಾಗಿತ್ತು.
'ಒಡೆಯ' ದರ್ಶನ್ ನಟನೆಯ 52ನೇ ಸಿನಿಮಾವಾಗಿದೆ. ಈ ಚಿತ್ರದ ಮುಹೂರ್ತ ಇಂದು ಮೈಸೂರಿನಲ್ಲಿ ನಡೆದಿದೆ. ಈ ಚಿತ್ರದ ನಿರ್ಮಾಪಕ ಸಂದೇಶ್ ನಾಗರಾಜ್ ಅವರ ಹುಟ್ಟುಹಬ್ಬದ ವಿಶೇಷವಾಗಿ ಸಿನಿಮಾ ಮುಹೂರ್ತ ಕಾರ್ಯಕ್ರಮ ನಡೆದಿದೆ. ಈ ಕಾರ್ಯಕ್ರಮಕ್ಕೆ ನಟ ಅಂಬರೀಶ್ ಭಾಗಿಯಾಗಿದ್ದು, ದರ್ಶನ್ ಚಿತ್ರಕ್ಕೆ ಶುಭ ಕೋರಿದ್ದಾರೆ.
ಮತ್ತೊಂದು ಮಹತ್ವದ ಪಾತ್ರದಲ್ಲಿ ಡಿ ಬಾಸ್ : ಭಗತ್ ಸಿಂಗ್ ಆದ ದರ್ಶನ್!
ನಿರ್ಮಾಪಕ ಸಂದೇಶ್ ನಾಗರಾಜ್ ಅವರು ನಟ ದರ್ಶನ್ ಹಾಗೂ ಅಂಬರೀಶ್ ಇಬ್ಬರಿಗೂ ಆಪ್ತರು. ಈ ಹಿಂದೆ ದರ್ಶನ್ ಅವರ 'ಐರಾವತ' ಸಿನಿಮಾಗೆ ಬಂಡವಾಳ ಹಾಕಿದ್ದ ಅವರು ಈಗ ಮತ್ತೆ ದಾಸ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಅಲ್ಲದೆ, ಅಂಬರೀಶ್ ಅವರ ಮಗನ ಚೊಚ್ಚಲ ಚಿತ್ರ 'ಅಮರ್' ಕೂಡ ಸಂದೇಶ್ ನಾಗರಾಜ್ ಅವರ ಬ್ಯಾನರ್ ನಲ್ಲಿ ಬರುತ್ತಿದೆ.
ಇನ್ನು 'ಒಡೆಯ' ಚಿತ್ರವನ್ನು ಎಂ.ಡಿ.ಶ್ರೀಧರ್ ನಿರ್ದೇಶನ ಮಾಡುತ್ತಿದ್ದಾರೆ. ಈ ಹಿಂದೆ ಎಂ.ಡಿ.ಶ್ರೀಧರ್ ನಟ ದರ್ಶನ್ ಜೊತೆಗೆ 'ಬುಲ್ ಬುಲ್' ಸಿನಿಮಾವನ್ನು ಮಾಡಿದ್ದರು. ಈ ಚಿತ್ರದ ಯಶಸ್ಸಿನ ಬಳಿಕ ಮತ್ತೆ ಈ ಜೋಡಿ ಒಂದಾಗಿದೆ.
ದರ್ಶನ್ ನ ನೋಡಲು ಅಭಿಮಾನಿಗಳ ನೂಕುನುಗ್ಗಲು, ಲಘು ಲಾಠಿ ಪ್ರಹಾರ.!
'ಕುರುಕ್ಷೇತ್ರ', 'ಯಜಮಾನ', 'ಒಡೆಯ' ಸದ್ಯ ದರ್ಶನ್ ಅವರ ಮುಂದಿನ ಚಿತ್ರಗಳಾಗಿವೆ. ಇದರ ಜೊತೆಗೆ ತರುಣ್ ಸುಧೀರ್ ಅವರ ನಿರ್ದೇಶನದ ಚಿತ್ರದಲ್ಲಿ ಸಹ ದರ್ಶನ್ ನಟಿಸುತ್ತಾರೆ.