Don't Miss!
- News ಉಕ್ರೇನ್ ವಿರುದ್ಧ ರಷ್ಯಾ ಗಂಭೀರ ಆರೋಪ!
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Sports RR vs DC: ಅವೇಶ್ ಖಾನ್, ರಿಯಾನ್ ಪರಾಗ್ ಶೈನ್; ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ವಿನ್
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ದರ್ಶನ್ ಅಪಘಾತದ ಬಗ್ಗೆ ಪತ್ನಿ ವಿಜಯಲಕ್ಷ್ಮಿ ನೀಡಿದ ಪ್ರತಿಕ್ರಿಯೆ
Recommended Video
ನಟ ದರ್ಶನ್ ತಮ್ಮ ಆರೋಗ್ಯ ಸ್ಥಿತಿಯ ಹೇಗಿದೆ ಎಂಬುದನ್ನು ಅವರೇ ಆಡಿಯೋ ಮೂಲಕ ಕೆಲ ನಿಮಿಷಗಳ ಹಿಂದೆ ತಿಳಿಸಿದ್ದಾರೆ. ಈಗ ಅವರ ಪತ್ನಿ ವಿಜಯಲಕ್ಷ್ಮಿ ಕೂಡ ಈ ಬಗ್ಗೆ ಮಾತನಾಡಿದ್ದಾರೆ.
ದರ್ಶನ್ ಅಪಘಾತದ ವಿಷಯ ತಿಳಿದ ತಕ್ಷಣ ಗಾಬರಿಯಿಂದ ಮೈಸೂರಿನ ಆಸ್ಪತ್ರೆಗೆ ಪತ್ನಿ ವಿಜಯಲಕ್ಷ್ಮಿ ಬಂದರು. ಬಳಿಕ ಅವರ ಆರೋಗ್ಯ ವಿಚಾರಿಸಿ ಕೆಲ ಸಮಯ ಅವರ ಜೊತೆಗೆ ಮಾತನಾಡಿದರು. ಈ ವೇಳೆ ನಟ ದರ್ಶನ್ ಪುತ್ರ ವಿನೀಶ್ ಸಹ ಅಮ್ಮನ ಜೊತೆ ಇದ್ದರು.
ದರ್ಶನ್ ಸ್ಥಿತಿ ಹೇಗಿದೆ? ವಿನೋದ್ ಪ್ರಭಾಕರ್ ನೀಡಿದ ಮಾಹಿತಿ
ಸದ್ಯ ದರ್ಶನ್ ಆರೋಗ್ಯದ ಬಗ್ಗೆ ಸ್ಪಷ್ಟನೆ ನೀಡಿರುವ ವಿಜಯಲಕ್ಷ್ಮಿ ''ಅಭಿಮಾನಿಗಳು ಆತಂಕ ಪಡಬೇಡಿ ಅವರಿಗೆ ಏನು ಆಗಿಲ್ಲ. ಕೈ ಮೂಳೆ ಫ್ರಾಕ್ಚರ್ ಆಗಿತ್ತು ಅಷ್ಟೇ'' ಎಂದು ಹೇಳಿದ್ದಾರೆ. ಮುಂದೆ ಓದಿ...
ವಿಜಯಲಕ್ಷ್ಮಿ ದರ್ಶನ್ ಪ್ರತಿಕ್ರಿಯೆ
''ಇನ್ನು ಕೆಲವು ಗಂಟೆಗಳಲ್ಲಿ ವಾರ್ಡ್ ಗೆ ಶಿಫ್ಟ್ ಮಾಡುತ್ತಾರೆ. ಅವರ ಬಲಗೈಗೆ ಸಣ್ಣ ಪುಟ್ಟ ಗಾಯಗಳು ಆಗಿವೆ. ಈಗ ಆರಾಮಾಗಿದ್ದು, ನಮ್ಮ ಜೊತೆಗೆ ಮಾತನಾಡಿದ್ದಾರೆ. ಡಾಕ್ಟರ್ ಎಲ್ಲ ಚಿಕಿತ್ಸೆ ನೀಡಿದ್ದಾರೆ. ಇನ್ನು ಎರಡು ವಾರಗಳಲ್ಲಿ ಅವರು ಶೂಟಿಂಗ್ ಗೆ ಮರಳಬಹುದು.'' - ವಿಜಯಲಕ್ಷ್ಮಿ, ದರ್ಶನ್ ಪತ್ನಿ
ಗಾಬರಿ ಪಡುವ ಅಗತ್ಯವಿಲ್ಲ
''ಅಭಿಮಾನಿಗಳು ಆತಂಕ ಪಡಬೇಡಿ ಅವರಿಗೆ ಏನು ಆಗಿಲ್ಲ. ಕೈ ಮೂಳೆ ಫ್ರಾಕ್ಚರ್ ಆಗಿತ್ತು. ಆ ಕಾರಣ ಕೆಲವು ದಿನ ವಿಶ್ರಾಂತಿ ಬೇಕಾಗಿದೆ. ಅದು ಬಿಟ್ಟರೆ ಗಾಬರಿ ಪಡುವ ಅಗತ್ಯ ಏನು ಇಲ್ಲ. ಸದ್ಯಕ್ಕೆ ಐ ಸಿ ಯು ನಲ್ಲಿ ಇದ್ದಾರೆ. ಒಂದು ಗಂಟೆಯ ಬಳಿಕ ವಾರ್ಡ್ ಗೆ ಶಿಫ್ಟ್ ಮಾಡಲಾಗುವುದು ಎಂದು ಡಾಕ್ಟರ್ ತಿಳಿಸಿದ್ದಾರೆ.'' - ವಿಜಯಲಕ್ಷ್ಮಿ, ದರ್ಶನ್ ಪತ್ನಿ
ಆಸ್ಪತ್ರೆಯ ಹಾಸಿಗೆ ಮೇಲೆ ಮಲಗಿರುವ ದರ್ಶನ್ ಮಾತನ್ನು ಒಮ್ಮೆ ಕೇಳಿಸಿಕೊಳ್ಳಿ!
ಅಮ್ಮ, ನಾನು, ವಿನೀಶ್ ಎಲ್ಲ ಇದ್ದೇವೆ
''ದರ್ಶನ್ ಜೊತೆಗೆ ಅಮ್ಮ, ನಾನು, ವಿನೀಶ್ ಎಲ್ಲ ಇದ್ದೇವೆ. ಅವರ ತಮ್ಮ ಕೂಡ ಬರುತ್ತಿದ್ದಾರೆ. ದೇವರಾಜ್, ಪ್ರಜ್ವಲ್ ದೇವರಾಜ್ ಅವರು ಕೂಡ ತುಂಬ ಚೆನ್ನಾಗಿ ಇದ್ದಾರೆ. ಅವರನ್ನು ಸಹ ಈಗ ಮಾತನಾಡಿಕೊಂಡು ಬಂದೆವು. ಅವರ ಕುಟುಂಬದವರು ಆಸ್ಪತ್ರೆಗೆ ಬಂದಿದ್ದಾರೆ. ಎಲ್ಲರೂ ಹುಷಾರಾಗಿ ಇದ್ದಾರೆ.'' - ವಿಜಯಲಕ್ಷ್ಮಿ, ದರ್ಶನ್ ಪತ್ನಿ
ಅಭಿಮಾನಿಗಳಿಗೆ ದರ್ಶನ್ ಮನವಿ
''ಎಲ್ಲರಿಗೂ ನಮಸ್ಕಾರ. ಅಭಿಮಾನಿಗಳನ್ನು ನಾನು ಅನ್ನದಾತರು ಎಂದು ಕರೆಯಲು ಇಷ್ಟ ಪಡುತ್ತಾನೆ. ನಿಮ್ಮ ದಯೆಯಿಂದ ನಾನು ಆರಾಮಾಗಿದ್ದೇನೆ. ನನಗೆ ಏನು ಆಗಿಲ್ಲ.'' ಎಂದು ಹೇಳುವ ಮೂಲಕ ಎಲ್ಲರಲ್ಲಿ ಇದ್ದ ಆತಂಕದ ವಾತವರಣವನ್ನು ಮರೆಯಾಗುವಂತೆ ಮಾಡಿದ್ದಾರೆ.
ಊಹಾಪೋಹಗಳನ್ನು ಬಿಡಿ : ದರ್ಶನ್ ರನ್ನ ಕಣ್ಣಾರೆ ಕಂಡ ಸಂದೇಶ್ ನಾಗರಾಜ್ ಹೇಳಿದಿಷ್ಟು!
ಆಸ್ಪತ್ರೆಗೆ ಯಾರು ಬರಬೇಡಿ
''ದಯವಿಟ್ಟು ಆಸ್ಪತ್ರೆಗೆ ಯಾರು ಬರಬೇಡಿ. ಇದು ನನ್ನ ಮನವಿ ಅಂತ ತಿಳಿದುಕೊಳ್ಳಿ. ಆಸ್ಪತ್ರೆಯಲ್ಲಿ ಇರುವ ಬೇರೆಯರಿಗೆ ನಮ್ಮಿಂದ ತೊಂದರೆ ಆಗಬಾರದು. ಇಂದು ಸಂಜೆ ಅಥವಾ ನಾಳೆ ನಿಮ್ಮ ಮುಂದೆ ನಾನೇ ಬರುತ್ತೇನೆ'' ಎಂದು ದರ್ಶನ್ ಅಭಿಮಾನಿಗಳಲ್ಲಿ ಮನವಿ ಮಾಡಿದ್ದಾರೆ.
ನಾಲ್ಕು ಜನರು ಪ್ರಯಾಣ ಮಾಡುತ್ತಿದ್ದರು
ಅಪಘಾತವಾದ ಆಡಿ ಕ್ಯೂ 7 ಕಾರು ದರ್ಶನ್ ಅವರದಾಗಿತ್ತು. ಕಾರಿನಲ್ಲಿ ದರ್ಶನ್, ದೇವರಾಜ್, ಪ್ರಜ್ವಲ್ ದೇವರಾಜ್ ಹಾಗೂ ದರ್ಶನ್ ಸ್ನೇಹಿತ ಈ ನಾಲ್ಕು ಜನರು ಪ್ರಯಾಣ ಮಾಡುತ್ತಿದ್ದರು. ದರ್ಶನ್ ಫ್ರೆಂಡ್ ಕಾರ್ ಡೈವಿಂಗ್ ಮಾಡುತ್ತಿದ್ದು, ದರ್ಶನ್ ಮುಂದಿನ ಸೀಟ್ ನಲ್ಲಿ ಕುಳಿತಿದ್ದರು.