Don't Miss!
- Lifestyle ಲಿವರ್ ಸಮಸ್ಯೆಯಿದೆ ಎಂದು ಸೂಚಿಸುವ ಲಕ್ಷಣಗಳಿವು, ಕುಟುಂಬಸ್ಥರು ಲಿವರ್ ದಾನ ಮಾಡಿದರೆ ವ್ಯಕ್ತಿಯ ಪ್ರಾಣ ಉಳಿಸಬಹುದು
- News ಲೋಕಸಭಾ ಚುನಾವಣೆ 2024: ಈ ಆರು ಜಿಲ್ಲೆಗಳಲ್ಲಿ ಬಹುತೇಕ ಶೂನ್ಯ ಮತದಾನ; ಕಾರಣವೇನು?
- Sports LSG vs CSK IPL 2024: ಮತ್ತೊಮ್ಮೆ ಧೋನಿ, ಜಡೇಜಾ ಅಬ್ಬರ; ಲಕ್ನೋ ತಂಡಕ್ಕೆ ಸವಾಲಿನ ಗುರಿ ನೀಡಿದ ಸಿಎಸ್ಕೆ
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ದರ್ಶನ್ ಜೊತೆಗೆ ನಟಿಸೋದು ಖುಷಿಯ ವಿಚಾರ ಎಂದ ಸಿಂಗಂ ವಿಲನ್
ದರ್ಶನ್ ಅಭಿನಯದ 'ಯಜಮಾನ' ಸಿನಿಮಾದ ಚಿತ್ರೀಕರಣ ಕೊನೆಯ ಹಂತಕ್ಕೆ ಬಂದಿದೆ. ಈಗಾಗಲೇ ಚಿತ್ರದ ನಟಿ ತಾನ್ಯ ಹೋಪೆ ತಮ್ಮ ಪಾತ್ರದ ಚಿತ್ರೀಕರಣವನ್ನು ಮುಗಿಸಿದ್ದಾರೆ. ನಟ ಧನಂಜಯ ಕೂಡ ಶೂಟಿಂಗ್ ಮುಗಿಸಿದ್ದು ಕ್ಲೈಮ್ಯಾಕ್ಸ್ ಹಂತದ ಚಿತ್ರೀಕರಣ ಭರದಿಂದ ಸಾಗಿದೆ.
ಪಿ ಕುಮಾರ್ ನಿರ್ದೇಶನದಲ್ಲಿ ಮುಡಿ ಬರುತ್ತಿರುವ 'ಯಜಮಾನ' ಸಿನಿಮಾದ ಕ್ಲೈಮ್ಯಾಕ್ಸ್ ಫೈಟಿಂಗ್ ಶೂಟಿಂಗ್ ಶುರುವಾಗಿದೆ. ದರ್ಶನ್ ಎದುರಿನಲ್ಲಿ ನಟ ಥಾಕೂರ್ ಅನೂಪ್ ಸಿಂಗ್ ಅಭಿನಯ ಮಾಡುತ್ತಿದ್ದು, ಈ ಬಗ್ಗೆ ಅನೂಪ್ ಸಿಂಗ್ ತಮ್ಮ ಟ್ವಿಟ್ಟರ್ ನಲ್ಲಿ ಸಂತಸ ವ್ಯಕ್ತ ಪಡಿಸಿದ್ದಾರೆ.
Filming on .. nothing like the feeling of satisfaction after a hardworking day on sets! #Yajmana my next #nammakannada film! Comin soon !! pic.twitter.com/5F5MArAqTZ
— Thakur Anoop Singh (@theindianthakur) June 14, 2018
'ಯಜಮಾನ'ನಾದ ಡಿ ಬಾಸ್ : ಅಂದು ವಿಷ್ಣು ಇಂದು ದರ್ಶನ್
"ಕನ್ನಡ ಸಿನಿಮಾದಲ್ಲಿ ಹಾಗೂ ದರ್ಶನ್ ಜೊತೆಯಲ್ಲಿ ಅಭಿನಯ ಮಾಡುತ್ತಿರುವುದು ಖುಷಿಯ ವಿಚಾರ. ಹಾರ್ಡ್ ವರ್ಕ್ ಮಾಡಿರುವುದರ ಪ್ರತಿಫಲ ಇಂದು ಚಿತ್ರೀಕರಣದ ಸಮಯದಲ್ಲಿ ಕಾಣುತ್ತಿದೆ" ಎಂದು ನಟ ಥಾಕೂರ್ ಅನೂಪ್ ಸಿಂಗ್ ಟ್ವಿಟ್ಟರ್ ನಲ್ಲಿ ಬರೆದುಕೊಂಡಿದ್ದಾರೆ.
ಸದ್ಯ 'ಯಜಮಾನ' ಸಿನಿಮಾದ ಚಿತ್ರೀಕರಣ ಕೊನೆಯ ಹಂತ ತಲುಪಿದ್ದು, ಶೈಲಜಾ ನಾಗ್ ಚಿತ್ರಕ್ಕೆ ಬಂಡವಾಳ ಹಾಕಿದ್ದಾರೆ. ಶ್ರೀಷ ಕುದುವಳ್ಳಿ ಚಿತ್ರಕ್ಕೆ ಕ್ಯಾಮೆರಾ ವರ್ಕ್ ಮಾಡುತ್ತಿದ್ದು. ವಿ ಹರಿಕೃಷ್ಣ ಸಂಗೀತ ಸಂಯೋಜಿಸಿದ್ದಾರೆ.