Don't Miss!
- Finance ಎಂಡಿಎಚ್ ಮತ್ತು ಎವರೆಸ್ಟ್ ಸೇರಿದಂತೆ ಎಲ್ಲಾ ಬ್ರಾಂಡ್ ಮಸಾಲೆಗಳ ಮಾದರಿಗಳ ಪರೀಕ್ಷೆಗೆ ಮುಂದಾದ FSSAI
- News ಮತದಾನದ ದಿನ ಬೆಳಗ್ಗೆ ಸಿಗಲ್ಲ ಬಾಡಿಗೆ ವಾಹನಗಳು!
- Sports CSK vs LSG IPL 2024: ಐಪಿಎಲ್ನಲ್ಲಿ ಈ ದಾಖಲೆ ಮಾಡಿದ ಮೊದಲ ಸಿಎಸ್ಕೆ ನಾಯಕ ರುತುರಾಜ್ ಗಾಯಕ್ವಾಡ್
- Lifestyle ಈ ಕಾರಣಕ್ಕೆ ನೀವು ಮಾವಿನ ಹಣ್ಣನ್ನು ನೀರಿನಲ್ಲಿ ನೆನೆಹಾಕಿಯೇ ತಿನ್ನಬೇಕು, ಅದು ನಿಮ್ಮ ತೋಟದಲ್ಲಿ ಬೆಳೆದಿದ್ದೇ ಆಗಿರಲಿ
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕೂಗಿ ಹೇಳಿತು ಜಮಾನ, ಇವನೇ ನಮ್ಮ 'ಯಜಮಾನ'
Recommended Video
ಭಾನುವಾರದ ರಜೆ ಎಲ್ಲರಿಗೂ ಖುಷಿ ನೀಡುತ್ತದೆ. ಈ ಭಾನುವಾರ ದರ್ಶನ್ ಅಭಿಮಾನಿಗಳಿಗೆ ಡಬಲ್ ಖುಷಿ ಸಿಕ್ಕಿದೆ. ಕಾರಣ 'ಯಜಮಾನ'.
'ಯಜಮಾನ' ಸಿನಿಮಾದ ಫಸ್ಟ್ ಲುಕ್ ಮೋಷನ್ ಪೋಸ್ಟರ್ ಇಂದು ಬಿಡುಗಡೆಯಾಗಿದೆ. ದರ್ಶನ್ ಅಭಿಮಾನಿಗಳಿಗೆ ಈ ಮೋಷನ್ ಪೋಸ್ಟರ್ ಸಖತ್ ಇಷ್ಟ ಆಗಿದೆ. ಯೂ ಟ್ಯೂಬ್ ನಲ್ಲಿ ಮೋಷನ್ ಪೋಸ್ಟರ್ ಕೆಲವೇ ಗಂಟೆಗಳಲ್ಲಿ ಒಂದುವರೆ ಲಕ್ಷ ಹಿಟ್ಸ್ ಪಡೆದಿದೆ.
ದರ್ಶನ್ ಕನ್ನಡದ 'ಸಲ್ಮಾನ್ ಖಾನ್' ಎಂದ ದಕ್ಷಿಣದ ಖ್ಯಾತ ಖಳನಟ
'ಭೂಮಿ ತೂಕದ ಆನೆ, ಬೆಳೆದ ತನ್ನಿಂದ ತಾನೆ, ಕೂಗಿ ಹೇಳಿತು ಜಮಾನ, ಅಭಿಮಾನಿಗಳ ಸುಲ್ತಾನ' ಎಂದು 'ಯಜಮಾನ'ನನ್ನು ಇಲ್ಲಿ ವರ್ಣಿಸಲಾಗಿದೆ.
'ಯಜಮಾನ' ನಟ ದರ್ಶನ್ ಅವರ ಬಹು ನಿರೀಕ್ಷಿತ ಸಿನಿಮಾ. ಇಲ್ಲಿ ರಶ್ಮಿಕಾ ಮಂದಣ್ಣ ಹಾಗೂ ತಾನ್ಯ ಹೋಪೆ ಸಿನಿಮಾದ ನಾಯಕಿ ಆಗಿದ್ದಾರೆ. ವಿಶೇಷ ಅಂದರೆ, ದರ್ಶನ್ ಪುತ್ರ ವಿನೀಶ್ ಚಿತ್ರದ ಒಂದು ಹಾಡಿನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.
'ಡಿ-ಬಾಸ್' ಭಕ್ತರಿಗೆ ಭರ್ಜರಿ ಸುದ್ದಿ: ದರ್ಶನ್ ಭೇಟಿ ಮಾಡಿದ 'ರಂಗಸ್ಥಳಂ' ನಿರ್ದೇಶಕ ಸುಕುಮಾರ್
ಈ ಸಿನಿಮಾವನ್ನು ಪಿ ಕುಮಾರ್ ನಿರ್ದೇಶನ ಮಾಡಿದ್ದಾರೆ. ಸಿನಿಮಾದ ಚಿತ್ರೀಕರಣ ಬಹುತೇಕ ಕೊನೆಯ ಹಂತದಲ್ಲಿದೆ. ಬಿ ಸುರೇಶ್ ಬ್ಯಾನರ್ ನಲ್ಲಿ ಚಿತ್ರ ನಿರ್ಮಾಣ ಆಗುತ್ತಿದೆ.