Don't Miss!
- News ನೇಹಾ ಕೊಲೆ: ಫಯಾಜ್ ಜೈಲಲ್ಲಿದ್ದರೂ ಆತನ ಮೊಬೈಲ್ನಲ್ಲಿದ್ದ ಫೋಟೋ ಲೀಕ್ ಆಗಿದ್ದೇಗೆ?: ಪ್ರಹ್ಲಾದ್ ಜೋಶಿ
- Sports David Warner: ಊಟನೂ ಬೇಡ, ಹುಡುಗಿನೂ ಬೇಡ; ಆಧಾರ್ ಕಾರ್ಡ್ ಬೇಕೆಂದ ಡೇವಿಡ್ ವಾರ್ನರ್!
- Technology Lava: ಲಾವಾ ಪ್ರೊ ವಾಚ್ Zn ಹಾಗೂ Vn ಸ್ಮಾರ್ಟ್ವಾಚ್ ಲಾಂಚ್! ಸೀಮಿತ ಅವಧಿಯ ಕೊಡುಗೆ ಸಹ ಲಭ್ಯ..
- Lifestyle ಚಪಾತಿ, ಅನ್ನಕ್ಕೆ ಟೊಮೆಟೋ ಬೇಳೆ ಸಾರು ಸಖತ್ ರುಚಿ..! ಮಾಡೋದು ಸುಲಭ..!
- Automobiles ಅಪ್ಪ-ಮಗಳ ಭಾಂದವ್ಯ.. ಪ್ರೀತಿಯ ಪುತ್ರಿಗೆ ತಂದೆಯಿಂದ 2 ಕೋಟಿಯ ಪೋರ್ಷೆ ಕಾರು ಗಿಫ್ಟ್
- Finance ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 10 ಹಳದಿ ಅನಕೊಂಡ ಸಹಿತ ವ್ಯಕ್ತಿ ಬಂಧನ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಪುನೀತ್ ಗೌರವಾರ್ಥ ಸಾಮೂಹಿಕ ನೇತ್ರದಾನ ಮಾಡಿದ ಗ್ರಾಮಸ್ಥರು
ಪವರ್ ಸ್ಟಾರ್, ನಟಸಾರ್ವಭೌಮ, ಕನ್ನಡಿಗರ ಕಣ್ಮಣಿ ಪುನೀತ್ ರಾಜಕುಮಾರ್ ವಿಧಿವಶರಾಗಿ ಇಂದಿಗೆ ಹತ್ತು ದಿನ ಕಳೆದಿವೆ. ಜನರು ಇನ್ನು ಈ ನೋವಿನಿಂದ ಹೊರಬಂದಿಲ್ಲ. ನೆಚ್ಚಿನ ನಟನ ಸ್ಮರಣೆಯಲ್ಲಿ ತೊಡಗಿದ್ದಾರೆ. ಕಣ್ಣೀರು ಸುರಿಸುತ್ತಲೇ ಇದ್ದಾರೆ. ಅಪ್ಪು ಬದುಕಿದ್ದಾಗ ಮಾಡಿದ ಮಾನವೀಯ ಕಾರ್ಯಗಳು, ಸಮಾಜಮುಖಿ ಕೆಲಸಗಳು ಒಂದೊಂದಾಗೇ ಹೊರಬರುತ್ತಿವೆ. ಇನ್ನು ಪುನೀತ್ ರಾಜಕುಮಾರ್ ಅವರು ತಮ್ಮ ಕಣ್ಣುಗಳನ್ನು ದಾನ ಮಾಡಿದ ಬಳಿಕ ಹೆಚ್ಚಿನ ಮಂದಿಯು ನೇತ್ರದಾನ ಮಾಡಲು ಮುಂದಾಗುತ್ತಿದ್ದಾರೆ. ದಿನೇ ದಿನೇ ಈ ಮಾನವೀಯ ಕಾರ್ಯದ ಸಂಕಲ್ಪ ಮಾಡಿದವರ ಸಂಖ್ಯೆ ಹೆಚ್ಚುತ್ತಲೇ ಇದೆ.
ಆದರೆ ಇಲ್ಲೊಂದು ಗ್ರಾಮದಲ್ಲಿ 60ಕ್ಕೂ ಹೆಚ್ಚು ಮಂದಿ ಪುನೀತ್ ರಾಜಕುಮಾರ್ ಅವರ ನೇತ್ರದಾನ ಮಾಡಿದ್ದನ್ನು ಆದರ್ಶವಾಗಿಟ್ಟುಕೊಂಡು ಕಣ್ಣುಗಳನ್ನು ದಾನ ಮಾಡುವ ಸಂಕಲ್ಪ ತೊಟ್ಟಿದ್ದಾರೆ. ಮಾತ್ರವಲ್ಲ, ಇದಕ್ಕಾಗಿ ನಿಯಮಾನುಸಾರ ಪತ್ರಕ್ಕೂ ಸಹಿ ಹಾಕಿದ್ದಾರೆ. ಇಂಥದ್ದೊಂದು ಮಹತ್ಕಾರ್ಯಕ್ಕೆ ಮುಂದಾಗಿರುವುದು ದಾವಣಗೆರೆ ತಾಲೂಕಿನ ಚಟ್ಟೋಬನಹಳ್ಳಿ ತಾಂಡಾದ ಗ್ರಾಮಸ್ಥರು. ಇವರ ಈ ಕಾರ್ಯಕ್ಕೆ ಈಗ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗುತ್ತಿದೆ.
ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರು ಸಾವಿನಲ್ಲೂ ಮಾನವೀಯತೆ ಮೆರೆದಿದ್ದರು. ತಮ್ಮ ಎರಡೂ ಕಣ್ಣುಗಳನ್ನು ದಾನ ಮಾಡಿದ್ದರು. ಇದು ನಾಲ್ವರಿಗೆ ಬೆಳಕು ನೀಡಿತ್ತು. ಆ ಬಳಿಕ ನೇತ್ರದಾನ ಮಾಡುವವರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ. ಪುನೀತ್ ರಾಜಕುಮಾರ್ ಅವರು ಹಾಕಿಕೊಟ್ಟ ಮಾರ್ಗವನ್ನು ಹಲವರು ಅನುಸರಿಸತೊಡಗಿದ್ದಾರೆ. ಜೊತೆಗೆ ತಮ್ಮ ಕಣ್ಣುಗಳನ್ನು ದಾನ ಮಾಡುವ ಮೂಲಕ ಮಾನವೀಯ ನಿರ್ಧಾರ ತೆಗೆದುಕೊಂಡಿದ್ದಾರೆ.
ಯುವಕ-ಯುವತಿಯರಿಂದ ಸಾಮೂಹಿಕ ನೇತ್ರದಾನ
ನಟ ಪುನೀತ್ ರಾಜಕುಮಾರ್ ಅವರ ಈ ಕಾರ್ಯ ಈಗ ಒಂದು ಗ್ರಾಮದ ಮೇಲೆ ಪರಿಣಾಮ ಬೀರಿದೆ. ಈ ಗ್ರಾಮದ ಬರೋಬ್ಬರಿ 60ಕ್ಕೂ ಜನರು ಕಣ್ಣು ದಾನ ಮಾಡಲು ನಿರ್ಧಾರ ಮಾಡಿದ್ದಾರೆ. ಜೊತೆಗೆ ನೇತ್ರದಾನ ಮಾಡುವ ಪತ್ರಕ್ಕೆ ಸಹಿ ಹಾಕಿದ್ದಾರೆ. ಅಪ್ಪುಗೆ ಗೌರವ ಸಲ್ಲಿಸಲು ಬಂಜಾರ ಸಮುದಾಯದ 60ಕ್ಕೂ ಅಧಿಕ ಯುವಕರು, ಯುವತಿಯರು ಹಾಗೂ ಗ್ರಾಮದ ಜನರು ನೇತ್ರದಾನ ಮಾಡುವ ಸಂಕಲ್ಪ ತೊಟ್ಟಿದ್ದಾರೆ.
ಗ್ರಾಮವೇ ಶೋಕದಲ್ಲಿ ಮುಳುಗಿತ್ತು
ಪುನೀತ್ ಅಗಲಿಕೆಯ ಬಳಿಕ ಇಡೀ ಗ್ರಾಮವೇ ಶೋಕದ ಮಡುವಿನಲ್ಲಿ ಮುಳುಗಿತ್ತು. ಪುನೀತ್ ರಾಜಕುಮಾರ್ ಸಾವನ್ನಪ್ಪಿದ ದಿನವಂತೂ ಗ್ರಾಮದ ಜನರು ಊಟವನ್ನೇ ಮಾಡಿರಲಿಲ್ಲ. ಕಣ್ಣೀರು ಸುರಿಸಿದ್ದರು. ಪುನೀತ್ ರಾಜಕುಮಾರ್ ಅವರನ್ನು ನೆನೆದು ಬಿಕ್ಕಿ ಬಿಕ್ಕಿ ಅತ್ತಿದ್ದರು. ಆದ್ರೆ ಪುನೀತ್ ರಾಜಕುಮಾರ್ ಅವರು ನೇತ್ರದಾನ ಮಾಡಿದ್ದಾರೆ ಎಂಬ ಸುದ್ದಿ ತಿಳಿಯುತ್ತಿದ್ದಂತೆ ನಟಸಾರ್ವಭೌಮನಿಗೆ ಅರ್ಥಪೂರ್ಣವಾಗಿ ಗೌರವ ಸಲ್ಲಿಸುವ ದೃಷ್ಟಿಯಿಂದ ಈ ತೀರ್ಮಾನಕ್ಕೆ ಬಂದಿದ್ದಾರೆ.
ಶೋಕದಲ್ಲಿ ಮುಳುಗಿದ್ದ ಚಟ್ಟೋಬನಹಳ್ಳಿ
ಒಂದು ವಾರ ಶೋಕದಲ್ಲಿ ಮುಳುಗಿದ್ದ ಚಟ್ಟೋಬನಹಳ್ಳಿ ಗ್ರಾಮಸ್ಥರ ನೋವು ಇನ್ನೂ ಕಡಿಮೆಯಾಗಿಲ್ಲ. ಪುನೀತ್ ಅವರ ಆದರ್ಶ ಮೈಗೂಡಿಸಿಕೊಳ್ಳುವ ಮೂಲಕ 60ಕ್ಕೂ ಅಧಿಕ ಮಂದಿ ಕಣ್ಣು ದಾನ ಮಾಡಿ ಪುನೀತ್ ಗೆ ಗೌರವ ಸಲ್ಲಿಸುವ ಕೆಲಸವನ್ನು ಚಟ್ಟೋಬಹಳ್ಳಿ ಗ್ರಾಮಸ್ಥರು ಮಾಡಿದ್ದಾರೆ.
110 ಮನೆಗಳಿರುವ ಚಿಕ್ಕ ಊರಿನವರ ದೊಡ್ಡ ಗುಣ
ಅಪ್ಪು ಅನೇಕ ಜನರಿಗೆ ಸಹಾಯ ಮಾಡಿದ್ದಲ್ಲದೆ ಕಣ್ಣು ದಾನ ಮಾಡಿದ್ದರು. ಅವರು ಕಣ್ಣು ದಾನ ಮಾಡಿದ್ದಕ್ಕೆ ಪುನೀತ್ ಅವರ ದಾರಿಯಲ್ಲೇ ಅಭಿಮಾನಿಗಳು ಹೋಗಲು ಶುರು ಮಾಡಿದ್ದಾರೆ. ಕೇವಲ 110 ಮನೆಗಳಿರೋ ಚಿಕ್ಕ ಊರಲ್ಲಿ 60ಕ್ಕೂ ಅಧಿಕ ಜನರು ಕಣ್ಣು ದಾನ ಮಾಡಲು ಮುಂದಾಗುವ ಮೂಲಕ ರಾಜ್ಯಕ್ಕೆ ಚಟ್ಟೋಬನಹಳ್ಳಿ ತಾಂಡ ಮಾದರಿಯಾಗಿದೆ.