Don't Miss!
- News Siddaramaiah: ಹುಬ್ಬಳ್ಳಿಯ ನೇಹಾ ಹಿರೇಮಠ ನಿವಾಸಕ್ಕೆ ಸಿಎಂ ಭೇಟಿ: ಸಿದ್ದರಾಮಯ್ಯ ಕೊಟ್ಟ ಭರವಸೆ ಏನು?
- Lifestyle ದೇಹದಲ್ಲಿ ಈ ಬದಲಾವಣೆ ಆದರೆ ನಿಮ್ಮಲ್ಲಿ ವಿಟಮಿನ್ ಬಿ12 ಕೊರತೆಯಾಗಿದೆ ಎಂದರ್ಥ
- Sports IPL 2024: ಹೈದರಾಬಾದ್ ಅಂಗಳದಲ್ಲಿ ಗೆಲ್ಲುವುದೆ ಆರ್ಸಿಬಿ: ಟಾಸ್ ವರದಿ ಹೀಗಿದೆ
- Automobiles Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನಟಿ ಜಯಂತಿ ಆರೋಗ್ಯದಲ್ಲಿ ಚೇತರಿಕೆ: ಅಭಿನಯ ಶಾರದೆ ಹೆಸರಲ್ಲಿ ಮೃತ್ಯುಂಜಯ ಹೋಮ
Recommended Video
ಅಭಿನಯ ಶಾರದೆ, ಹಿರಿಯ ನಟಿ ಜಯಂತಿ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ. ಅಸ್ತಮಾ ಹಾಗೂ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಜಯಂತಿ ಆರೋಗ್ಯ ಸ್ಥಿತಿ ಈಗ ಸ್ಥಿರವಾಗಿದೆ.
ಬೆಂಗಳೂರಿನ ಕನ್ನಿಂಗ್ ಹ್ಯಾಂ ರಸ್ತೆ ಬಳಿಯಿರುವ ವಿಕ್ರಂ ಆಸ್ಪತ್ರೆಯಲ್ಲಿ ಕಳೆದ ಮೂರು ದಿನಗಳಿಂದ ಜಯಂತಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಡಾ.ಸತೀಶ್ ನೇತೃತ್ವದ ವೈದ್ಯರ ತಂಡ ಚಿಕಿತ್ಸೆ ನೀಡುತ್ತಿದ್ದು, ಜಯಂತಿ ಆರೋಗ್ಯದಲ್ಲಿ ಸುಧಾರಣೆ ಕಂಡು ಬಂದಿರುವುದರಿಂದ ವೆಂಟಿಲೇಟರ್ ತೆಗೆಯಲಾಗಿದೆ. ಇಂದು ತೀವ್ರ ನಿಗಾ ಘಟಕದಿಂದ ವಾರ್ಡ್ ಗೆ ಶಿಫ್ಟ್ ಮಾಡುವ ಸಾಧ್ಯತೆ ಇದೆ.
ಜಯಂತಿ ಅವರ ಆರೋಗ್ಯ ಸ್ಥಿತಿ ವಿಚಾರಿಸಲು ಅನೇಕ ಗಣ್ಯರು ಹಾಗೂ ಕನ್ನಡ ಚಿತ್ರರಂಗದ ಕಲಾವಿದರು ವಿಕ್ರಂ ಆಸ್ಪತ್ರೆಗೆ ಭೇಟಿ ನೀಡುತ್ತಿದ್ದಾರೆ.
ಇಂದು ನಟಿ ಜಯಂತಿ ವಾರ್ಡ್ ಗೆ ಶಿಫ್ಟ್ : ಸುಳ್ಳು ವದಂತಿಗಳಿಗೆ ಬ್ರೇಕ್
ಇತ್ತ ಹಿರಿಯ ನಟಿ ಜಯಂತಿ ಆದಷ್ಟು ಬೇಗ ಗುಣಮುಖರಾಗಲಿ ಎಂದು ನಿರ್ಮಾಪಕ ಭಾ.ಮಾ.ಹರೀಶ್ ಸೇರಿದಂತೆ ಕನ್ನಡ ಚಿತ್ರರಂಗದ ಗಣ್ಯರು ಮೃತ್ಯುಂಜಯ ಹೋಮ ಮಾಡಿಸಿದ್ದಾರೆ.
ನಿನ್ನೆಯಷ್ಟೇ ವಿಕ್ರಂ ಆಸ್ಪತ್ರೆಗೆ ಭೇಟಿ, ಜಯಂತಿ ಆರೋಗ್ಯ ವಿಚಾರಿಸಿದ್ದ ಭಾ.ಮಾ.ಹರೀಶ್ ಮತ್ತು ಸ್ನೇಹಿತರು ಇಂದು ಬೆಳಗ್ಗೆ ಬೆಂಗಳೂರಿನ ರಾಜಾಜಿನಗರದ ಸಂಜೀವಿನಿ ವೀರಾಂಜಿನೇಯ ಸ್ವಾಮಿ ದೇವಸ್ಥಾನದಲ್ಲಿ ಮೃತ್ಯುಂಜಯ ಹೋಮ ನೆರವೇರಿಸಿದರು.