ಕೊಪ್ಪಳ ನಗರದ ಗವಿಸಿದ್ದೇಶ್ವರ ರಥೋತ್ಸವ ಅದ್ದೂರಿಯಾಗಿ ಶುರುವಾಗಿದೆ. ನಿನ್ನೆ ಪ್ರಾರಂಭವಾಗಿರುವ ಈ ಜಾತ್ರೋತ್ಸವದಲ್ಲಿ ನಿರ್ದೇಶಕ ಪಿ.ಶೇಷಾದ್ರಿ ಅವರ ಸಿನಿಮಾ ಪ್ರದರ್ಶನ ಆಗಿದೆ.
ಗವಿಸಿದ್ಧೇಶ್ವರನಿಗೆ ನಮೋನ್ನಮಃ : ಇದು ಯಾತ್ರೆ ಅಲ್ಲ ಜಾತ್ರೆ
ಪಿ.ಶೇಷಾದ್ರಿ ನಿರ್ದೇಶನ ಮಾಡಿದ್ದ 'ಡಿಸೆಂಬರ್ 1' ಸಿನಿಮಾ ಗವಿಸಿದ್ದೇಶ್ವರ ಜಾತ್ರೋತ್ಸವದಲ್ಲಿ ಪ್ರದರ್ಶನ ಆಗಿದೆ. ಈ ವಿಷಯವನ್ನು ಸ್ವತಃ ಪಿ.ಶೇಷಾದ್ರಿ ಅವರು ತಮ್ಮ ಫೇಸ್ ಬುಕ್ ಖಾತೆಯ ಮೂಲಕ ಹಂಚಿಕೊಂಡಿದ್ದಾರೆ. ಅಂದಹಾಗೆ, 'ಡಿಸೆಂಬರ್ 1' ಸಿನಿಮಾ ಎರಡು ರಾಷ್ಟ್ರ ಪ್ರಶಸ್ತಿ ವಿಜೇತ ಸಿನಿಮಾ ಎಂಬ ಹೆಗ್ಗಳಿಕೆ ಪಡೆದಿದೆ. ಜೊತೆಗೆ ಚಿತ್ರದ ನಾಯಕಿಯಾದ ನಿವೇದಿತಾ ಈ ಸಿನಿಮಾಗೆ ರಾಜ್ಯ ಪ್ರಶಸ್ತಿಯನ್ನು ಪಡೆದಿದ್ದರು. ಈ ಹಿಂದೆ ಅನೇಕ ಚಲಚಿತ್ರೋತ್ಸವದಲ್ಲಿ ಪ್ರದರ್ಶನ ಆಗಿದ್ದ ಈ ಸಿನಿಮಾ ಈಗ ಜಾತ್ರೋತ್ಸವದಲ್ಲಿ ಪ್ರದರ್ಶನ ಆಗುತ್ತಿರುವುದು ವಿಶೇಷವಾಗಿದೆ.
ಇನ್ನು ಜನವರಿ 03 ರಿಂದ ಶುರುವಾಗಿರುವ ಗವಿಸಿದ್ದೇಶ್ವರ ಜಾತ್ರಾ ರಥೋತ್ಸವ ಜನವರಿ 05 ರವರೆಗೆ ನಡೆಯಲಿವೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತ ಕ್ರಮವಾಗಿ ಕೊಪ್ಪಳ ನಗರ ಹಾಗೂ ಸುತ್ತಮುತ್ತಲಿನ 5 ಕಿ.ಮೀ ವರೆಗೆ ಮದ್ಯಪಾನ ನಿಷೇಧಿಸಿ ಜಿಲ್ಲಾಧಿಕಾರಿ ಎಂ.ಕನಗವಲ್ಲಿ ಅವರು ಆದೇಶ ಹೊರಡಿಸಿದ್ದಾರೆ.
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ | Subscribe to Kannada Filmibeat.