Don't Miss!
- Finance ಆಕ್ಸಿಸ್ ಬ್ಯಾಂಕ್ಗೆ ಭರ್ಜರಿ ಲಾಟರಿ, 7,129 ಕೋಟಿ ನಿವ್ವಳ ಲಾಭ!
- News Gold Price: ಚಿನ್ನ ಮತ್ತು ಬೆಳ್ಳಿ ದರದಲ್ಲಿ ಭಾರೀ ಇಳಿಕೆ, ಇಂದಿನ ಬೆಲೆ ವಿವರ
- Lifestyle ಬಾಯಿ ಚಪ್ಪರಿಸಿ ಸವಿಯುವ ನೆಲ್ಲಿಕಾಯಿ ಉಪ್ಪಿನಕಾಯಿ..!
- Sports IPL 2024 :ಬಲಿಷ್ಠ ಹೈದರಾಬಾದ್ ಬಗ್ಗು ಬಡಿದ ಆರ್ಸಿಬಿ: ಕಮಿನ್ಸ್ ಪಡೆಗೆ ಹೀನಾಯ ಸೋಲು
- Automobiles Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಗವಿಸಿದ್ದೇಶ್ವರ ಜಾತ್ರೆಯಲ್ಲಿ ಪಿ.ಶೇಷಾದ್ರಿ ಸಿನಿಮಾ ಪ್ರದರ್ಶನ
ಕೊಪ್ಪಳ ನಗರದ ಗವಿಸಿದ್ದೇಶ್ವರ ರಥೋತ್ಸವ ಅದ್ದೂರಿಯಾಗಿ ಶುರುವಾಗಿದೆ. ನಿನ್ನೆ ಪ್ರಾರಂಭವಾಗಿರುವ ಈ ಜಾತ್ರೋತ್ಸವದಲ್ಲಿ ನಿರ್ದೇಶಕ ಪಿ.ಶೇಷಾದ್ರಿ ಅವರ ಸಿನಿಮಾ ಪ್ರದರ್ಶನ ಆಗಿದೆ.
ಗವಿಸಿದ್ಧೇಶ್ವರನಿಗೆ ನಮೋನ್ನಮಃ : ಇದು ಯಾತ್ರೆ ಅಲ್ಲ ಜಾತ್ರೆ
ಪಿ.ಶೇಷಾದ್ರಿ ನಿರ್ದೇಶನ ಮಾಡಿದ್ದ 'ಡಿಸೆಂಬರ್ 1' ಸಿನಿಮಾ ಗವಿಸಿದ್ದೇಶ್ವರ ಜಾತ್ರೋತ್ಸವದಲ್ಲಿ ಪ್ರದರ್ಶನ ಆಗಿದೆ. ಈ ವಿಷಯವನ್ನು ಸ್ವತಃ ಪಿ.ಶೇಷಾದ್ರಿ ಅವರು ತಮ್ಮ ಫೇಸ್ ಬುಕ್ ಖಾತೆಯ ಮೂಲಕ ಹಂಚಿಕೊಂಡಿದ್ದಾರೆ. ಅಂದಹಾಗೆ, 'ಡಿಸೆಂಬರ್ 1' ಸಿನಿಮಾ ಎರಡು ರಾಷ್ಟ್ರ ಪ್ರಶಸ್ತಿ ವಿಜೇತ ಸಿನಿಮಾ ಎಂಬ ಹೆಗ್ಗಳಿಕೆ ಪಡೆದಿದೆ. ಜೊತೆಗೆ ಚಿತ್ರದ ನಾಯಕಿಯಾದ ನಿವೇದಿತಾ ಈ ಸಿನಿಮಾಗೆ ರಾಜ್ಯ ಪ್ರಶಸ್ತಿಯನ್ನು ಪಡೆದಿದ್ದರು. ಈ ಹಿಂದೆ ಅನೇಕ ಚಲಚಿತ್ರೋತ್ಸವದಲ್ಲಿ ಪ್ರದರ್ಶನ ಆಗಿದ್ದ ಈ ಸಿನಿಮಾ ಈಗ ಜಾತ್ರೋತ್ಸವದಲ್ಲಿ ಪ್ರದರ್ಶನ ಆಗುತ್ತಿರುವುದು ವಿಶೇಷವಾಗಿದೆ.
ಇನ್ನು ಜನವರಿ 03 ರಿಂದ ಶುರುವಾಗಿರುವ ಗವಿಸಿದ್ದೇಶ್ವರ ಜಾತ್ರಾ ರಥೋತ್ಸವ ಜನವರಿ 05 ರವರೆಗೆ ನಡೆಯಲಿವೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತ ಕ್ರಮವಾಗಿ ಕೊಪ್ಪಳ ನಗರ ಹಾಗೂ ಸುತ್ತಮುತ್ತಲಿನ 5 ಕಿ.ಮೀ ವರೆಗೆ ಮದ್ಯಪಾನ ನಿಷೇಧಿಸಿ ಜಿಲ್ಲಾಧಿಕಾರಿ ಎಂ.ಕನಗವಲ್ಲಿ ಅವರು ಆದೇಶ ಹೊರಡಿಸಿದ್ದಾರೆ.