Don't Miss!
- Sports DC vs GT IPL 2024: ಅಕ್ಷರ್, ರಿಷಭ್ ಶೈನಿಂಗ್; ಗುಜರಾತ್ ವಿರುದ್ಧ ಡೆಲ್ಲಿ ಜಯಭೇರಿ
- News ದ್ವೇಷ ಉತ್ತೇಜಿಸುವ ಪೋಸ್ಟ್: ಕರ್ನಾಟಕ ಬಿಜೆಪಿ ವಿರುದ್ಧ ದೂರು ದಾಖಲಿಸಿದ ಚುನಾವಣಾ ಆಯೋಗ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Lifestyle 613 ದಿನ ಕೊರೊನಾ ವಿರುದ್ಧ ಹೋರಾಡಿ ವೃತಪಟ್ಟ ವ್ಯಕ್ತಿ..!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮತ್ತೋರ್ವ ನಾಯಕ ನಟ ರಾಜಕೀಯ ಕಣಕ್ಕೆ ಎಂಟ್ರಿ
ಚುನಾವಣೆ ಸಮೀಪಿಸುತ್ತಿದ್ದಂತೆ ಪ್ರತಿನಿತ್ಯ ರಾಜಕೀಯರಂಗದಲ್ಲಿ ಕಲಾವಿದರ ಹೆಸರುಗಳು ಕೇಳಿ ಬರುತ್ತಲೇ ಇವೆ. ಅದೇ ರೀತಿಯಲ್ಲಿ ಈಗಾಗಲೇ ಕೆಲ ಸ್ಟಾರ್ ಗಳು ರಾಜಕೀಯ ಪಕ್ಷಗಳ ಪರವಾಗಿ ಪ್ರಚಾರ ಕಾರ್ಯಗಳನ್ನ. ಶುರು ಮಾಡಿಕೊಂಡಿದ್ದಾರೆ.
ದರ್ಶನ್, ಸುದೀಪ್, ಶಶಿಕುಮಾರ್, ರಂಗಾಯಣರಘು, ಉಪೇಂದ್ರ, ರೂಪ ಐಯ್ಯರ್, ಇವರುಗಳ ನಂತರ ಈಗ ಸ್ಯಾಂಡಲ್ ವುಡ್ ನ ಮತ್ತೊರ್ವ ನಟ ರಾಜಕೀಯ ಪಕ್ಷ ಸೇರಲು ಸಿದ್ದತೆ ಮಾಡಿಕೊಂಡಿದ್ದಾರೆ. ಹೌದು ಶಿಷ್ಯ ಸಿನಿಮಾದ ಮೂಲಕ ಚಿತ್ರರಂಗದಲ್ಲಿ ಹೆಸರು ಮಾಡಿದ್ದ ನಟ ದೀಪಕ್ ರಾಜಕೀಯ ಸೇರುವ ಆಸೆಯನ್ನ ವ್ಯಕ್ತ ಪಡಿಸಿದ್ದಾರೆ.
ತಾವು ಕಾಂಗ್ರೆಸ್ ಪಕ್ಷ ಸೇರುವುದಾಗಿ ದೀಪಕ್ ತಮ್ಮ ಫೇಸ್ ಬುಕ್ ನಲ್ಲಿ ಬರೆದುಕೊಂಡಿದ್ದಾರೆ. ರಾಜಕೀಯಕ್ಕೆ ಬರಲು ಮುಂದಾಗಿರುವ ದೀಪಕ್ ಅವರ ನಿರ್ಧಾರಕ್ಕೆ ಕೆಲ ಅಭಿಮಾನಿಗಳು ವಿರೋಧ ವ್ಯಕ್ತ ಪಡಿಸಿದರೆ ಇನ್ನೂ ಕೆಲವರು ಶುಭಾಶಯ ಕೋರಿದ್ದಾರೆ.
ಕಿಚ್ಚನ ರಾಜಕೀಯ ಭವಿಷ್ಯ ಹೇಳಿದ ರಾಜಗುರು
ಕಾಂಗ್ರೆಸ್ ಮೂಲಕ ಚುನಾವಣಾ ಕಣಕ್ಕೆ ಬರಲು ನಿರ್ಧರಿಸಿರುವ ದೀಪಕ್ ಯಾವಾಗ ಪಕ್ಷಕ್ಕೆ ಸೇರಿಕೊಳ್ಳುತ್ತಾರೆ ಎನ್ನುವ ಬಗ್ಗೆ ಮಾತ್ರ ಸುಳಿವು ನೀಡಿಲ್ಲ. ಒಟ್ಟಾರೆ ಈ ಭಾರಿಯ ಚುನಾವಣೆಯಲ್ಲಿ ಸ್ಯಾಂಡಲ್ ವುಡ್ ನ ಬಹುತೇಕ ಸ್ಟಾರ್ ಕಲಾವಿದರು ಕಾಣಿಸಿಕೊಳ್ಳುವುದು ಖಚಿತವಾಗುತ್ತಿದೆ.