Don't Miss!
- News Dingaleshwar Swamiji: ಕೋಟಿ ಒಡೆಯ ದಿಂಗಾಲೇಶ್ವರ ಸ್ವಾಮೀಜಿಯ ಆಸ್ತಿ ವಿವರ ತಿಳಿಯಿರಿ
- Sports PBKS vs MI: ಐಪಿಎಲ್ನಲ್ಲಿ ಈ ಇತಿಹಾಸ ನಿರ್ಮಿಸಿದ 2ನೇ ಆಟಗಾರ ರೋಹಿತ್ ಶರ್ಮಾ
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Lifestyle ಊಟದ ರುಚಿ ಹೆಚ್ಚಿಸುತ್ತೆ ಚೌಳಿಕಾಯಿ ಪಲ್ಯ..! ಹೀಗೆ ಮಾಡಿ
- Finance ಬಿಸಿಲ ಬೇಗೆಯಿಂದ ರಕ್ಷಿಸಿಕೊಳ್ಳಲು ಟ್ರಾಫಿಕ್ ಪೊಲೀಸರಿಗೆ ರಿಲಿಫ್: ಬಂತು ಹವಾನಿಯಂತ್ರಿತ ಎಸಿ ಹೆಲ್ಮೆಟ್!
- Technology Samsung: ಸ್ಯಾಮ್ಸಂಗ್ನ ಈ ಸರಣಿ ಫೋನ್ಗಳಲ್ಲಿ ಗ್ರೀನ್ ಲೈನ್ ಸಮಸ್ಯೆ! ವರದಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಲಾಂಚ್ ಆಯ್ತು 'ನಾಗಿಣಿ' ದೀಪಿಕಾ ದಾಸ್ ಹೊಸ ಸಿನಿಮಾ
'ನಾಗಿಣಿ' ಧಾರಾವಾಹಿಯ ಮೂಲಕ ಕಿರುತೆರೆಯಲ್ಲಿ ಒಳ್ಳೆಯ ಹೆಸರು ಮಾಡಿರುವ ದೀಪಿಕಾ ದಾಸ್ ಈಗ ಹೊಸ ಸಿನಿಮಾ ಮಾಡುತ್ತಿದ್ದಾರೆ. ಅವರ 'ಚೌಕಟ್ಟು' ಚಿತ್ರದ ಮುಹೂರ್ತ ಇಂದು ನಡೆದಿದೆ.
ಬೆಂಗಳೂರಿನ ಗಾಳಿ ಆಂಜನೇಯ ಸ್ವಾಮಿ ದೇವಲಯದಲ್ಲಿ ಸಿನಿಮಾ ಲಾಂಚ್ ಆಗಿದೆ. ಈ ಕಾರ್ಯಕ್ರಮದಲ್ಲಿ ಗೀತ ರಚನೆಗಾರ ಹಾಗೂ ನಿರ್ದೇಶಕರ ಸಂಘದ ಅಧ್ಯಕ್ಷ ವಿ ನಾಗೇಂದ್ರ ಪ್ರಸಾದ್ ಭಾಗಿಯಾಗಿದ್ದು, ಕ್ಲಾಪ್ ಮಾಡುವ ಮೂಲಕ ಸಿನಿಮಾಗೆ ಚಾಲನೆ ನೀಡಿದರು.
'ನಾಗಿಣಿ' ದೀಪಿಕಾ ದಾಸ್ ಜೊತೆ ಅಭಿನಯಿಸೋ ಅವಕಾಶ
'ಚೌಕಟ್ಟು' ಥ್ರಿಲ್ಲರ್ ಕಥಾಹಂದರವಿರುವ ಸಿನಿಮಾ ಆಗಿದ್ದು, ಚಿತ್ರದಲ್ಲಿ ನಾಲ್ಕು ಪ್ರಮುಖ ಪಾತ್ರಗಳು ಇರಲಿವೆಯಂತೆ. ದೀಪಿಕಾ ದಾಸ್ ಹಾಗೂ 'ನಾಗಿಣಿ' ಧಾರಾವಾಹಿಯಲ್ಲಿ ರುದ್ರನ ಪಾತ್ರ ನಿರ್ವಹಿಸುತ್ತಿರುವ ಅರುಣ್ ಕುಮಾರ್ ಒಂದೊಂದು ಕ್ಯಾರೆಕ್ಟರ್ ಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ.
ಚಿತ್ರವನ್ನು ಸಂದೀಪ್ ಕೊಟೆಯಾನ್ ನಿರ್ದೇಶನ ಮಾಡುತ್ತಿದ್ದು, ಲಿ ಕೆ ಹೆಚ್ ದಾಸ್ ಕ್ಯಾಮೆರಾ ವರ್ಕ್ ಮಾಡಲಿದ್ದಾರೆ. ಮಂಜುನಾಥ್ ನಿರ್ಮಾಣದ ಸಿನಿಮಾಗೆ ಅನಿಲ್ ಸಿ ಜೆ ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ.