Don't Miss!
- Technology HMD ಪಲ್ಸ್ ಸರಣಿ ಅಡಿಯಲ್ಲಿ 3 ಹೊಸ ಸ್ಮಾರ್ಟ್ಫೋನ್ ಲಾಂಚ್! ಫೀಚರ್ಸ್ ಏನಿವೆ?
- News Tamannaah Bhatia: ಮಿಲ್ಕಿ ಬ್ಯೂಟಿ ತಮನ್ನಾಗೆ ಮುಂಬೈ ಸೈಬರ್ ಪೊಲೀಸರಿಂದ ಸಮನ್ಸ್.!-ಕಾರಣ ಏನು?
- Automobiles ವಿಮಾನದಂತಹ ಸೌಲಭ್ಯ ಹೊಂದಿರುವ ವಂದೇ ಭಾರತ್ ಸರಣಿ ರೈಲುಗಳು ಶೀಘ್ರ ಬರಲಿವೆ.. ಆರಾಮದಾಯಕ ಪ್ರಯಾಣ!
- Finance April 25 Gold Rate: ಇಂದಿನ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರ ಎಷ್ಟಿದೆ ತಿಳಿಯಿರಿ
- Lifestyle ಬೆಳ್ಳುಳ್ಳಿ ಕಬಾಬ್ ಅಂದುಕೊಂಡ್ರಾ? ಇದು ಚಿಕನ್ ರುಚಿಯ ಹೂವಿನ ಫ್ರೈ..!
- Sports 2009ರ ಐಪಿಎಲ್ ಫೈನಲ್ನಲ್ಲಿ ಆರ್ಸಿಬಿ ಸೋಲಲು ಕಾರಣ ತಿಳಿಸಿದ ಅನಿಲ್ ಕುಂಬ್ಳೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಬ್ರಿಗೇಡ್ ರಸ್ತೆಯಲ್ಲಿ ದೀಪಿಕಾ ಬಿಸಿಬೇಳೆ 'ಬಾತ್'
ಹೆಣ್ಣಿಗೆ ಹಟವಿರಬಾರದು, ಗಂಡಿಗೆ ಚಟವಿರಬಾರದು ಎಂಬ ಗಾದೆ ಮಾತೊಂದಿದೆ. ಈ ಗಾದೆ ಈಗ ಯಾಕೆ ನೆನಪಾಯಿತೆಂದರೆ ಬಾಲಿವುಡ್ ಬಿಂಕದ ಸಿಂಗಾರಿ ದೀಪಿಕಾ ಪಡುಕೋಣೆ ಹಟ ಬಿಟ್ಟಿದ್ದಾರೆ. ಹೊಳೆ ದಾಟಿದ ಮೇಲೆ ಅಂಬಿಗನ ಹಂಗೇಕೆ ಎಂಬಂತಿದ್ದ ದೀಪಿಕಾ ಹೊಸ ರಾಗ ಹಾಡುತ್ತಿದ್ದಾರೆ.
ಕನ್ನಡ ಚಿತ್ರದ ಮೂಲಕ ಬೆಳ್ಳಿಪರದೆಗೆ ಅಂಬೆಗಾಲಿಕ್ಕಿದ ದೀಪಿಕಾ ಬಳಿಕ ಬೆಳ್ಳಿಪರದೆ ಮೇಲೆ ಮಿಂಚುತ್ತಿರುವುದು ಗೊತ್ತೇ ಇದೆ. ಸ್ಯಾಂಡಲ್ ವುಡ್ ಅಂದ್ರೆ ಏನು? ಎಂದು ಒಮ್ಮೆ ಕೇಳಿ ಕನ್ನಡ ಚಿತ್ರರಂಗದ ಬಗ್ಗೆ ತಿರಸ್ಕಾರದ ನೋಟ ಬೀರಿದ್ದ ದೀಪಿಕಾ ಈಗ ಕನ್ನಡ ಚಿತ್ರಗಳಲ್ಲಿ ನಟಿಸುವುದಾಗಿ ಹೇಳಿದ್ದಾರೆ.
ಶಾರುಖ್ ಖಾನ್ ಅವರು ಯಾವಾಗಲೂ ದಕ್ಷಿಣ ಭಾರತ ಅಡುಗೆ ಬಗ್ಗೆ ತಮಾಷೆ ಮಾಡುತ್ತಿರುತ್ತಾರೆ. ಈ ಬಾರಿ ಅವರು ಬೆಂಗಳೂರಿಗೆ ಬರಲಿ ಹೇಳ್ತಿನಿ. ಸೀದಾ ಮನೆಗೆ ಕರೆದೊಯ್ದು ಅನ್ನ ಸಾಂಬಾರ್, ಬಿಸಿಬೇಳೆ ಬಾತ್ ರುಚಿ ತೋರಿಸ್ತೀನಿ ಎಂದಿದ್ದಾರೆ.
'ಚೆನ್ನೈ ಎಕ್ಸ್ ಪ್ರೆಸ್' ಚಿತ್ರದಲ್ಲಿ ಶಾರುಖ್ ಜೊತೆ ದೀಪಿಕಾ ಅಭಿನಯಿಸುತ್ತಿರುವುದು ಗೊತ್ತೇ ಇದೆ. ಮುಂಬೈನಿಂದ ರಾಮೇಶ್ವರದ ತನಕ ಸಾಗುವ ಕಥೆ ಇದೆ. ರೈಲು ಪ್ರಯಾಣದ ಜೊತೆಗೆ ಒಂದಷ್ಟು ತಮಾಷೆ, ರೊಮ್ಯಾಂಟಿಕ್ ಸನ್ನಿವೇಶಗಳೇ ಚಿತ್ರದ ಬಂಡವಾಳ. ಈ ಚಿತ್ರದ ಬಗ್ಗೆಯೂ ದೀಪಿಕಾ ತುಂಬಾ ಎಕ್ಸೈಟ್ ಆಗಿದ್ದಾರೆ.