Don't Miss!
- News ಪೂಜೆ ಮಾಡಿದ ಈ ಲಿಂಬೆಹಣ್ಣು ಲಕ್ಷಕ್ಕೆ ಹರಾಜ್! ಶಾಕ್ ಆಡ್ಬೇಡಿ ಇದು ನಿಜ...
- Sports IPL 2024: ಆರ್ಸಿಬಿ vs ಕೆಕೆಆರ್ ಪಂದ್ಯಕ್ಕೂ ಮುನ್ನ ಗಂಭೀರ್ನತ್ತ ಐಸ್-ಕೋಲ್ಡ್ ಲುಕ್ ನೀಡಿದ ಕೊಹ್ಲಿ
- Automobiles ಓಲಾ ಎಸ್ 1 ಪ್ರೋ VS ಏಥರ್ 450X: ಮದಗಜಗಳ ಹಣಾಹಣಿಯಲ್ಲಿ ಯಾರು ಬೆಸ್ಟ್?
- Technology WhatsApp: ವಾಟ್ಸಾಪ್ನಲ್ಲಿ ಈ ಕರೆಗಳನ್ನು ಸ್ವೀಕರಿಸದಂತೆ ಕೇಂದ್ರದಿಂದ ಎಚ್ಚರಿಕೆ! ಯಾಕೆ ಗೊತ್ತಾ?
- Lifestyle ಬಾಯಿ ರುಚಿಗೆ ಗರಿ ಗರಿ ನಿಪ್ಪಟ್ಟು..! ಮನೆಯಲ್ಲೇ ಮಾಡಿ ಟೆಸ್ಟಿ ತಿಂಡಿ
- Finance 25ನೇ ವಯಸ್ಸಿನಲ್ಲಿ 25,000 ರೂ.ನಿಂದ 7,000 ಕೋಟಿ ಗಳಿಸಿದ ವ್ಯಕ್ತಿ ಬಗ್ಗೆ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮಾನನಷ್ಟ ಮೊಕದ್ದಮೆ: ಶ್ರುತಿ ಹರಿಹರನ್ ಗೆ ನೋಟೀಸ್ ಜಾರಿ ಮಾಡಿದ ಕೋರ್ಟ್
ಸ್ಯಾಂಡಲ್ ವುಡ್ ನಲ್ಲಿ #ಮೀಟೂ ಅಭಿಯಾನ ಕೋರ್ಟ್ ಮೆಟ್ಟಿಲೇರಿದೆ. ಶ್ರುತಿ ಹರಿಹರನ್ ವಿರುದ್ಧ ನಟ ಅರ್ಜುನ್ ಸರ್ಜಾ ಮಾನನಷ್ಟ ಮೊಕದ್ದಮೆ ದಾಖಲು ಮಾಡಿದ್ದಾರೆ. ಇದೇ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಸದ್ಯ ಶ್ರುತಿ ಹರಿಹರನ್ ಗೆ ಕೋರ್ಟ್ ನೋಟೀಸ್ ಜಾರಿ ಮಾಡಿದೆ.
ಸಿವಿಲ್ ಕೋರ್ಟ್ ನಲ್ಲಿ ಅರ್ಜುನ್ ಸರ್ಜಾ ಪರ ವಕೀಲರು ಸಲ್ಲಿಸಿದ ಅರ್ಜಿ ವಿಚಾರಣೆ ಇಂದು ನಡೆಯಿತು. ಶ್ರುತಿ ಹರಿಹರನ್ ಪರ ವಕೀಲರ ವಾದ ಆಲಿಸಿದ ಬಳಿಕ ಮಧ್ಯಂತರ ಆದೇಶ ನೀಡಲು ಕೋರ್ಟ್ ತೀರ್ಮಾನಿಸಿದೆ.
ಅರ್ಜುನ್ ಸರ್ಜಾ ರಾಜಿ ಆಗಲ್ಲ: ಶ್ರುತಿ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲು.!
''ಮಧ್ಯಂತರ ಆದೇಶ ನೀಡುವ ಮುನ್ನ ನಮಗೂ ವಾದ ಮಂಡಿಸಲು ಅವಕಾಶ ಕೊಡಿ'' ಎಂದು ಶ್ರುತಿ ಹರಿಹರನ್ ಪರ ವಕೀಲೆ ಜೈನಾ ಕೊಠಾರಿ ಕೋರ್ಟ್ ನಲ್ಲಿ ಮನವಿ ಮಾಡಿದರು. ಇದಕ್ಕೆ ಕೋರ್ಟ್ ಮನ್ನಣೆ ನೀಡಿದೆ. ಅಕ್ಟೋಬರ್ 29ಕ್ಕೆ ವಿಚಾರಣೆಯನ್ನು ಮುಂದೂಡಲಾಗಿದೆ.
ಸಂಧಾನದ ಮಾತೇ ಇಲ್ಲ, ಮನಸ್ಸಿನ ನೋವು ತೋಡಿಕೊಂಡ ಸರ್ಜಾ
#ಮೀಟೂ ಅಭಿಯಾನದ ಅಡಿ ನಟ ಅರ್ಜುನ್ ಸರ್ಜಾ ವಿರುದ್ಧ ನಟಿ ಶ್ರುತಿ ಹರಿಹರನ್ ಲೈಂಗಿಕ ಕಿರುಕುಳದ ಆರೋಪ ಮಾಡಿದ್ದರು. ಈ ಕುರಿತು ತಮ್ಮ ವ್ಯಕ್ತಿತ್ವ ಹಾಗೂ ಘನತೆಗೆ ಶ್ರುತಿ ಹರಿಹರನ್ ಚ್ಯುತಿ ತಂದಿದ್ದಾರೆ ಎಂದು ಅರ್ಜುನ್ ಸರ್ಜಾ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ.