Don't Miss!
- News Rain Alert: ಮಳೆ.. ಮಳೆ.. ಈ ಜಿಲ್ಲೆಗಳಲ್ಲಿ ಭರ್ಜರಿ ಮಳೆ ಗ್ಯಾರಂಟಿ!
- Lifestyle ಮಳೆ ನಿರೀಕ್ಷೆಯಲ್ಲಿದ್ದವರಿಗೆ ಶಾಕ್ ಕೊಟ್ಟ ಹವಾಮಾನ ಇಲಾಖೆ..!
- Automobiles Tata: ಒಬ್ಬರೇ ಬಂದು 2 ಸಾವಿರ ಟಾಟಾ ಎಲೆಕ್ಟ್ರಿಕ್ ಕಾರುಗಳನ್ನು ಖರೀದಿಸಿ ಹೋಗಿಬಿಟ್ಟರು!
- Technology ಮೇ 1 ರಂದು ವಿವೋ T3x 5G ಮೊಬೈಲ್ ಮತ್ತೆ ಖರೀದಿಗೆ ಲಭ್ಯ!..ಅಗ್ಗದ ಬೆಲೆ ಇದೆ!
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Sports IPL 2024: ಎಸ್ಆರ್ಹೆಚ್ ಸಂಘಟಿತ ಆಟಕ್ಕೆ ಬ್ರೇಕ್ ಹಾಕಲು ಆರ್ಸಿಬಿ ಏನು ಮಾಡಬೇಕು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಗರುಡ ಗಮನ ವೃಷಭ ವಾಹನ'ಕ್ಕೆ ಹೊರ ರಾಜ್ಯಗಳಿಂದ ಬಂತು ಡಿಮ್ಯಾಂಡ್
ಕೆಲವು ದಿನಗಳ ಹಿಂದಷ್ಟೆ ಬಿಡುಗಡೆ ಆದ 'ಗರುಡ ಗಮನ ವೃಷಭ ವಾಹನ' ಸಿನಿಮಾ ರಾಜ್ಯದಾದ್ಯಂತ ಉತ್ತಮ ಪ್ರದರ್ಶನ ಕಾಣುತ್ತಿದೆ. ವಿಮರ್ಶಕರಿಂದಲೂ ಉತ್ತಮ ಪ್ರಶಂಸೆ ಗಳಿಸಿಕೊಂಡಿದೆ. ದಿನ ಕಳೆದಂತೆ ಚಿತ್ರಮಂದಿರಗಳ ಸಂಖ್ಯೆ, ಶೋಗಳ ಸಂಖ್ಯೆ ಹೆಚ್ಚುತ್ತಲೇ ಸಾಗಿದೆ.
'ಗರುಡ ಗಮನ ವೃಷಭ ವಾಹನ' ಸಿನಿಮಾದ ಖ್ಯಾತಿ ನೆರೆಯ ರಾಜ್ಯಗಳಿಗೂ ವ್ಯಾಪಿಸಿದ್ದು, ಸಿನಿಮಾವು ಇತರೆ ರಾಜ್ಯಗಳಲ್ಲಿಯೂ ಬಿಡುಗಡೆ ಆಗಿದೆ. ಇನ್ನಷ್ಟು ಶೋಗಳಿಗೆ ಬೇಡಿಕೆ ಹೆಚ್ಚುತ್ತಿದೆ. ಆಂಧ್ರಪ್ರದೇಶದ ಕೆಲವು ಕಡೆ ಶೋಗಳನ್ನು ಹಾಕಲಾಗಿದ್ದು ಅಲ್ಲಿ ಹೌಸ್ಫುಲ್ ಪ್ರದರ್ಶನ ಕಂಡಿದೆ ಸಿನಿಮಾ. ಈ ಬಗ್ಗೆ ಚಿತ್ರತಂಡ ಹೆಮ್ಮೆಯಿಂದ ಹೇಳಿಕೊಂಡಿದೆ. ಇತರೆ ರಾಜ್ಯಗಳಲ್ಲಿಯೂ ಸಿನಿಮಾವನ್ನು ಬಿಡುಗಡೆ ಮಾಡಲು ವಿತರಕರು ಉತ್ಸಾಹ ತೋರಿಸಿದ್ದಾರೆ.
''ಬೇರೆ ಬೇರೆ ಭಾಷೆಗಳವರು ಕತೆಯ, ಸಿನಿಮಾದ ರೀಮೇಕ್ ಹಕ್ಕಿಗಾಗಿ ಬೇಡಿಕೆ ಇಟ್ಟಿದ್ದಾರೆ. ಈ ಬಗ್ಗೆ ಮಾತುಕತೆಗಳು ಚಾಲ್ತಿಯಲ್ಲಿವೆ'' ಎಂದಿದ್ದಾರೆ ನಿರ್ದೇಶಕ, ನಟ ರಾಜ್ ಬಿ ಶೆಟ್ಟಿ.
''ನಾವು ಬಹಳ ಕಷ್ಟಪಟ್ಟು ಸಿನಿಮಾ ಮಾಡಿದ್ದೇವೆ. ಆದರೆ ಕೆಲವರು ಅದನ್ನು ಮೊಬೈಲ್ನಲ್ಲಿ ಚಿತ್ರೀಕರಿಸಿ ಪೈರಸಿ ಮಾಡುತ್ತಿದ್ದಾರೆ. ಆದರೆ ಸಿನಿಮಾ ಬಿಡುಗಡೆಗೆ ಮುನ್ನವೇ ನಾವು ಕಾನೂನು ರೀತ್ಯ ಸಿದ್ದತೆಗಳನ್ನು ಮಾಡಿಕೊಂಡಿದ್ದೆವು. ತಪ್ಪಿತಸ್ಥರಿಗೆ ತಕ್ಕ ಶಿಕ್ಷೆ ಆಗುತ್ತದೆ. ಯಾರೂ ಸಹ ಪೈರಸಿಗೆ ಬೆಂಬಲ ನೀಡಬೇಡಿ, ಚಿತ್ರಮಂದಿರಕ್ಕೆ ಬಂದು ಸಿನಿಮಾ ನೋಡಿ'' ಎಂದು ರಾಜ್ ಬಿ ಶೆಟ್ಟಿ ಮನವಿ ಮಾಡಿದ್ದಾರೆ.
ರಾಜ್ ಶೆಟ್ಟಿ, ರಿಷಬ್ ಶೆಟ್ಟಿ ಮತ್ತು ತಂಡ ರಾಜ್ಯ ಪ್ರವಾಸ ಮಾಡುತ್ತಿದ್ದು, ಮೈಸೂರು, ಮಂಗಳೂರು, ಮಣಿಪಾಲ, ಬೆಂಗಳೂರು ಇನ್ನೂ ಹಲವು ಕಡೆಗಳಿಗೆ ತೆರಳಿ ಪ್ರೇಕ್ಷಕರೊಟ್ಟಿಗೆ 'ಗರುಡ ಗಮನ ವೃಷಭ ವಾಹನ' ಸಿನಿಮಾ ವೀಕ್ಷಿಸುತ್ತಿದ್ದಾರೆ. ಸಿನಿಮಾದ ಬಗ್ಗೆ ಬಹಳ ಒಳ್ಳೆಯ ವಿಮರ್ಶೆಗಳು ಕೇಳಿ ಬಂದಿದ್ದು, ಸಿನಿಮಾ ಯಶಸ್ವಿಯಾಗಿ ಎರಡನೇ ವಾರಕ್ಕೆ ಕಾಲಿಟ್ಟಿದೆ.