Don't Miss!
- News ನೇಹಾ ಕೊಲೆಗೆ ಸಿಎಂ ತೀವ್ರ ಖಂಡನೆ: ಕೊಲೆಗಾರನಿಗೆ ಶಿಕ್ಷೆ ಕುರಿತು ಸಿದ್ದರಾಮಯ್ಯ ಹೇಳಿದ್ದೇನು?
- Automobiles Mahindra: ಫ್ಯಾಮಿಲಿ ಕಾರು ಮಹೀಂದ್ರಾ ಎಕ್ಸ್ಯುವಿ700 ಖರೀದಿಸುವವರಿಗೆ ಸಿಹಿಸುದ್ದಿ.. ಇನ್ನೂ ತಿಂಗಳೇ ಸಾಕು!
- Technology Vivo: ಶೀಘ್ರದಲ್ಲೇ ವಿವೋ Y38 5G ಸ್ಮಾರ್ಟ್ಫೋನ್; ವಿನ್ಯಾಸ ಮತ್ತು ಫೀಚರ್ಸ್ ಲೀಕ್
- Sports DC vs SRH: ಹೈದರಾಬಾದ್ ಬ್ಯಾಟರ್ಗಳನ್ನು ಕಟ್ಟಿಹಾಕಲಿದ್ದಾರಾ ಡೆಲ್ಲಿ ಬೌಲರ್ಸ್?; ಸಂಭಾವ್ಯ ಆಡುವ 11ರ ಬಳಗ
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಒಡೆಯ'ನಿಗೆ ಸಾಥ್ ನೀಡಲಿದ್ದಾರೆ ಕನ್ನಡದ ಸ್ಟಾರ್ ನಟರು
Recommended Video
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯಿಸುತ್ತಿರುವ ಒಡೆಯ ಸಿನಿಮಾ ಇತ್ತೀಚಿಗಷ್ಟೆ ಸೆಟ್ಟೇರಿದೆ. ಸಂದೇಶ ನಾಗರಾಜ್ ನಿರ್ಮಾಣ ಮಾಡಲಿರುವ ಈ ಚಿತ್ರವನ್ನ ಎಂ.ಡಿ ಶ್ರೀಧರ್ ನಿರ್ದೇಶನ ಮಾಡುತ್ತಿದ್ದಾರೆ.
ತಮಿಳಿನಲ್ಲಿ ಅಜಿತ್ ಕುಮಾರ್ ಅಭಿನಯಿಸಿ ಸೂಪರ್ ಹಿಟ್ ಆಗಿದ್ದ 'ವೀರಂ' ಚಿತ್ರದ ಕನ್ನಡ ರೀಮೇಕ್ ಇದಾಗಿದೆ. ಇದು ಅಣ್ಣ-ತಮ್ಮಂದಿರ ಕಥೆಯಾಗಿದ್ದು, ಚಿತ್ರದಲ್ಲಿ ದರ್ಶನ್ ಗೆ ನಾಲ್ಕು ಜನರ ತಮ್ಮಂದಿರು ಇರ್ತಾರೆ.
ನಾರಾಯಣ್ ಪುತ್ರನಿಗೆ ಲಾಟರಿ ಹೊಡಿತು : ಡಿ ಬಾಸ್ ಚಿತ್ರದಲ್ಲಿ ಪಂಕಜ್!
ಆ ಪಾತ್ರಗಳಲ್ಲಿ ದರ್ಶನ್ ಅವರ ಗೆಳೆಯ ಯಶಸ್ ಸೂರ್ಯ, ಎಸ್.ನಾರಾಯಣ್ ಅವರ ಮಗ ಪಂಕಜ್, ಸಂದೇಶ್ ನಾಗರಾಜ್ ಅವರ ತಮ್ಮನ ಮಗ ಸಮರ್ಥ್ ಕಾಣಿಸಿಕೊಳ್ಳಲಿದ್ದಾರೆ.
'ಒಡೆಯ'ನಾದ ದರ್ಶನ್ ಗೆ ಬಲ ನೀಡಿದ ಅಂಬಿ
ಇವರ ಜೊತೆ ಕನ್ನಡದ ಮತ್ತಷ್ಟು ಸ್ಟಾರ್ ನಟರು ಚಿತ್ರದಲ್ಲಿ ಇರಲಿದ್ದಾರೆ. ಹಿರಿಯ ನಟ ದೇವರಾಜ್, ಖ್ಯಾತ ಖಳನಟ ರವಿಶಂಕರ್ ಹಾಗೂ ಕಾಮಿಡಿ ಕಲಾವಿದರಾದ ಸಾಧುಕೋಕಿಲಾ ಮತ್ತು ಚಿಕ್ಕಣ್ಣ ಕೂಡ ಒಡೆಯನಿಗೆ ಸಾಥ್ ನೀಡಲಿದ್ದಾರೆ.
ಇನ್ನುಳಿದಂತೆ ನಾಯಕಿ ಯಾರು ಎಂಬುದು ಇನ್ನು ಪಕ್ಕಾ ಆಗಿಲ್ಲ. ಚಿತ್ರಕ್ಕೆ ಅರ್ಜುನ್ ಜನ್ಯ ಸಂಗೀತ ಸಂಯೋಜನೆ ನೀಡಲಿದ್ದಾರೆ. ಅಕ್ಟೋಬರ್ ನಲ್ಲಿ ಚಿತ್ರೀಕರಣ ಅರಂಭವಾಗಲಿದ್ದು, ಮೈಸೂರಿನಲ್ಲೇ ಚಿತ್ರದ ಬಹುಪಾಲು ಚಿತ್ರೀಕರಣ ನಡೆಯಲಿದೆ.