Don't Miss!
- News ಮಂಡ್ಯದ ‘ಹಲವು ಸುಮಲತಾ’ ತಂತ್ರ ಬೆಂಗಳೂರು ಗ್ರಾಮಾಂತದಲ್ಲೂ ಬಂತಾ? ಮತ್ತೊಬ್ಬ ಡಾ ಸಿಎನ್ ಮಂಜುನಾಥ್ ಕಣಕ್ಕೆ!
- Sports IPL 2024: ರಾಜಸ್ಥಾನ್ ರಾಯಲ್ಸ್ vs ಡೆಲ್ಲಿ ಕ್ಯಾಪಿಟಲ್ಸ್ ರೋಚಕ ಪಂದ್ಯದ ಟಾಸ್ ವರದಿ, ಆಡುವ 11ರ ಬಳಗ
- Automobiles KTM Duke 125 ಬೆಲೆಗೆ ಯಾವೆಲ್ಲಾ ಬೈಕ್ಗಳು ಸಿಗುತ್ತೆ ಗೊತ್ತಾ?: ಪಲ್ಸರ್ನಿಂದ ಹಿಡಿದು MT 15 ವರೆಗೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Lifestyle ವಿಭಿನ್ನ ಶೈಲಿಯಲ್ಲಿ ಮೊಟ್ಟೆ ಸಾಂಬಾರ್ ಮಾಡಿ..! ಇಲ್ಲಿದೆ ಸಿಂಪಲ್ ಅಡುಗೆ
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಒಡೆಯ'ನಿಗೆ ಸಾಥ್ ನೀಡಲಿದ್ದಾರೆ ಕನ್ನಡದ ಸ್ಟಾರ್ ನಟರು
Recommended Video
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯಿಸುತ್ತಿರುವ ಒಡೆಯ ಸಿನಿಮಾ ಇತ್ತೀಚಿಗಷ್ಟೆ ಸೆಟ್ಟೇರಿದೆ. ಸಂದೇಶ ನಾಗರಾಜ್ ನಿರ್ಮಾಣ ಮಾಡಲಿರುವ ಈ ಚಿತ್ರವನ್ನ ಎಂ.ಡಿ ಶ್ರೀಧರ್ ನಿರ್ದೇಶನ ಮಾಡುತ್ತಿದ್ದಾರೆ.
ತಮಿಳಿನಲ್ಲಿ ಅಜಿತ್ ಕುಮಾರ್ ಅಭಿನಯಿಸಿ ಸೂಪರ್ ಹಿಟ್ ಆಗಿದ್ದ 'ವೀರಂ' ಚಿತ್ರದ ಕನ್ನಡ ರೀಮೇಕ್ ಇದಾಗಿದೆ. ಇದು ಅಣ್ಣ-ತಮ್ಮಂದಿರ ಕಥೆಯಾಗಿದ್ದು, ಚಿತ್ರದಲ್ಲಿ ದರ್ಶನ್ ಗೆ ನಾಲ್ಕು ಜನರ ತಮ್ಮಂದಿರು ಇರ್ತಾರೆ.
ನಾರಾಯಣ್ ಪುತ್ರನಿಗೆ ಲಾಟರಿ ಹೊಡಿತು : ಡಿ ಬಾಸ್ ಚಿತ್ರದಲ್ಲಿ ಪಂಕಜ್!
ಆ ಪಾತ್ರಗಳಲ್ಲಿ ದರ್ಶನ್ ಅವರ ಗೆಳೆಯ ಯಶಸ್ ಸೂರ್ಯ, ಎಸ್.ನಾರಾಯಣ್ ಅವರ ಮಗ ಪಂಕಜ್, ಸಂದೇಶ್ ನಾಗರಾಜ್ ಅವರ ತಮ್ಮನ ಮಗ ಸಮರ್ಥ್ ಕಾಣಿಸಿಕೊಳ್ಳಲಿದ್ದಾರೆ.
'ಒಡೆಯ'ನಾದ ದರ್ಶನ್ ಗೆ ಬಲ ನೀಡಿದ ಅಂಬಿ
ಇವರ ಜೊತೆ ಕನ್ನಡದ ಮತ್ತಷ್ಟು ಸ್ಟಾರ್ ನಟರು ಚಿತ್ರದಲ್ಲಿ ಇರಲಿದ್ದಾರೆ. ಹಿರಿಯ ನಟ ದೇವರಾಜ್, ಖ್ಯಾತ ಖಳನಟ ರವಿಶಂಕರ್ ಹಾಗೂ ಕಾಮಿಡಿ ಕಲಾವಿದರಾದ ಸಾಧುಕೋಕಿಲಾ ಮತ್ತು ಚಿಕ್ಕಣ್ಣ ಕೂಡ ಒಡೆಯನಿಗೆ ಸಾಥ್ ನೀಡಲಿದ್ದಾರೆ.
ಇನ್ನುಳಿದಂತೆ ನಾಯಕಿ ಯಾರು ಎಂಬುದು ಇನ್ನು ಪಕ್ಕಾ ಆಗಿಲ್ಲ. ಚಿತ್ರಕ್ಕೆ ಅರ್ಜುನ್ ಜನ್ಯ ಸಂಗೀತ ಸಂಯೋಜನೆ ನೀಡಲಿದ್ದಾರೆ. ಅಕ್ಟೋಬರ್ ನಲ್ಲಿ ಚಿತ್ರೀಕರಣ ಅರಂಭವಾಗಲಿದ್ದು, ಮೈಸೂರಿನಲ್ಲೇ ಚಿತ್ರದ ಬಹುಪಾಲು ಚಿತ್ರೀಕರಣ ನಡೆಯಲಿದೆ.