Don't Miss!
- News Bengaluru Rain: ಬೆಂಗಳೂರಿನ ಹಲವೆಡೆ ಗುಡುಗು ಜಿನುಗು ಮಳೆ.. ಮನೆಯಿಂದ ಹೊರಬಂದು ಕುಣಿದು ಕುಪ್ಪಳಿಸಿದ ಮಕ್ಕಳು
- Automobiles ಸಣ್ಣ ಕುಟುಂಬಗಳಿಗೆ ಬೆಸ್ಟ್ ಕಾರು... 5.36 ಲಕ್ಷ ರೂ. ಬೆಲೆ... 34 ಕಿ.ಮೀ ಮೈಲೇಜ್!
- Lifestyle 2 ಬಗೆಯ ಮಜ್ಜಿಗೆ ಸಾರು ರೆಸಿಪಿ: ಕಾಯಿ ಹಾಕಿದ, ಕಾಯಿ ಹಾಕದ ಸಾರಿನ ರೆಸಿಪಿ
- Technology ಒಪ್ಪೋ ಸಂಸ್ಥೆಯ ಈ ಫೋನ್ ಬೆಲೆಯಲ್ಲಿ ಭರ್ಜರಿ ಇಳಿಕೆ; ಆಫರ್ಗೆ ಗ್ರಾಹಕರು ಫಿದಾ!
- Sports ಐಪಿಎಲ್ನಿಂದ ದೂರವುಳಿದಿದ್ದ ಟೀಮ್ ಇಂಡಿಯಾ ವೇಗಿ ಟಿ20 ವಿಶ್ವಕಪ್ ಆಡುತ್ತಾರಾ?: ಆಟಗಾರ ಹೇಳಿದ್ದೇನು?
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕಿಕ್ ಕೊಡುತ್ತಿದೆ 'once upon a time in ಜಮಾಲಿಗುಡ್ಡ'
ಡಾಲಿ ಧನಂಜಯ್ ಸಿನಿಮಾಗಳು ಬ್ಯಾಕ್ ಟು ಬ್ಯಾಕ್ ರಿಲೀಸ್ ಆಗುತ್ತಿವೆ. ವಿಭಿನ್ನ ಸಿನಿಮಾಗಳ ಮೂಲಕ ಗಮನ ಸೆಳೆಯುತ್ತಿರುವ ನಟ ರಾಕ್ಷಸನ ಮತ್ತೊಂದು ಸಿನಿಮಾ ರಿಲೀಸ್ಗೆ ತುದಿಗಾಲಲ್ಲಿ ನಿಂತಿದೆ. ಅದುವೇ 'once upon a time in ಜಮಾಲಿಗುಡ್ಡ' .
ಈಗಾಗಲೇ ಪಾತ್ರದ ಹೆಸರು ಹಾಗೂ ವಿಭಿನ್ನ ಗೆಟಪ್ನಿಂದ ಗಮನ ಸೆಳೆಯುತ್ತಿರುವ 'once upon a time in ಜಮಾಲಿಗುಡ್ಡ'ದ ಟ್ರೈಲರ್ ಕೂಡ ರಿಲೀಸ್ ಆಗಿದೆ. ಈ ಸಿನಿಮಾ ಟ್ರೈಲರ್ ಈಗಾಗಲೇ ಸಿನಿಪ್ರಿಯರಿಗೆ ಸಖತ್ ಕಿಕ್ ಕೊಟ್ಟಿದೆ.
'once upon a time in ಜಮಾಲಿಗುಡ್ಡ' ಸಿನಿಮಾ 95 ಹಾಗೂ 96 ಕಾಲ ಘಟ್ಟದಲ್ಲಿ ನಡೆಯುವ ಕಾಲ್ಪನಿಕ ಕಥೆ. ಹೀಗಾಗಿ ಚಿತ್ರದ ಲೊಕೇಶನ್ನಿಂದ ಹಿಡಿದು ಪಾತ್ರದವರೆಗೂ ಹೆಚ್ಚು ಗಮನವನ್ನು ನೀಡಲಾಗಿದೆ.
ಧನಂಜಯ ಹಾಗೂ ಬೇಬಿ ಪ್ರಾಣ್ಯ ನಡುವಿನ ಭಾವನಾತ್ಮಕ ಪಯಣ ಈ ಸಿನಿಮಾದ ಹೈಲೈಟ್. ಜಮಾಲಿಗುಡ್ಡದ ಬಹುತೇಕ ಚಿತ್ರೀಕರಣ ಚಿಕ್ಕಮಗಳೂರಿನ ಬಾಬಾಬುಡನಗಿರಿಯಲ್ಲೇ ನಡೆದಿದೆ.
ಅಂದ್ಹಾಗೆ 'ಜಮಾಲಿಗುಡ್ಡ' ಸಿನಿಮಾ ಈ ವರ್ಷ ಬಿಡುಗಡೆಯಾಗುತ್ತಿರುವ ಧನಂಜಯ್ ಅಭಿನಯದ 6ನೇ ಸಿನಿಮಾ. "ಇದೊಂದು ಫೀಲ್ ಗುಡ್ ಸಿನಿಮಾ. ಕುಟುಂಬ ಸಮೇತರಾಗಿ ಬಂದು ನೋಡಬಹುದಾದ ಚಿತ್ರ. ಕುಶಾಲ್ ಗೌಡ ಈ ಚಿತ್ರಕ್ಕಾಗಿ ಫೇಸ್ ಬುಕ್ ಮೂಲಕ ನಿರ್ಮಾಪಕರನ್ನು ಹುಡುಕಿದರು. ಆಗ ಶ್ರೀಹರಿ ಸಿಕ್ಕಿದರು. ಆ ವೇಳೆ ನಾನು ಕೂಡ ಬ್ಯುಸಿಯಾಗಿದ್ದೆ. ಆದರೆ, ಹೆಚ್ಚಿನ ಚಿತ್ರೀಕರಣ ಬಾಬಾಬುಡನಗಿರಿಯಲ್ಲೇ ನಡೆಯಬೇಕಿದ್ದು, ಅದರಲ್ಲೂ ಸೆಪ್ಟೆಂಬರ್ ಹಾಗೂ ಅಕ್ಟೋಬರ್ ತಿಂಗಳ ವಾತಾವರಣದಲ್ಲೇ ಚಿತ್ರೀಕರಣ ನಡೆಯಬೇಕಿಗಿದ್ದರಿಂದ ಬೇಗನೇ ಶೂಟಿಂಗ್ನಲ್ಲಿ ಭಾಗವಹಿಸಿದೆ. ಕ್ಯಾಮರಾಮ್ಯಾನ್ ಕಾರ್ತಿಕ್ ಸೇರಿದಂತೆ ಇಡೀ ತಂತ್ರಜ್ಞರ ಕೆಲಸ ಅದ್ಭುತ. ಅದಿತಿ ಪ್ರಭುದೇವ ಸೇರಿದಂತೆ ಎಲ್ಲಾ ಕಲಾವಿದರ ಅಭಿನಯ ಕೂಡ ಸಖತ್ತಾಗಿದೆ." ಎಂದು ಧನಂಜಯ್ ಹೇಳಿದ್ದಾರೆ.
ಅದಿತಿ ಪ್ರಭುದೇವಗೆ 'ಜಮಾಲಿಗುಡ್ಡ' ಸಿನಿಮಾ ತುಂಬಾನೇ ಸ್ಪೆಷಲ್. "ಈ ಚಿತ್ರ ನನ್ನ ವೃತ್ತಿಬದುಕಿನಲ್ಲಿ ಸದಾ ನೆನಪಿನಲ್ಲಿ ಉಳಿಯುವ ಸಿನಿಮಾವಾಗಲಿದೆ. ಈ ಚಿತ್ರದ ಭಾವನಾತ್ಮಕ ಸನ್ನಿವೇಶಗಳಲ್ಲಿ ನಾನು ಎಷ್ಟೋ ಕಡೆ ಸಹಜವಾಗಿ ಅತ್ತಿದ್ದು ಇದೆ. ಅಂತಹ ಅದ್ಭುತ ಸನ್ನಿವೇಶಗಳು ಈ ಚಿತ್ರದಲ್ಲಿದೆ" ಎಂದರು ಈ ಸಿನಿಮಾ ಎಷ್ಟು ಸ್ಪೆಷಲ್ ಅನ್ನೋದನ್ನು ನಟಿ ಅದಿತಿ ಪ್ರಭುದೇವ ಹೇಳಿದ್ದಾರೆ.
ಇಪ್ಪತ್ತು ವರ್ಷಗಳ ಹಿಂದೆ ಸಿನಿಮಾದಲ್ಲಿ ನಟಿಸಬೇಕು ಅನ್ನೋ ಆಸೆ ಈಡೇರಲಿಲ್ಲ. ಹೀಗಾಗಿ ಈಗ ನಿರ್ಮಾಪಕನಾಗಿ ಚಿತ್ರರಂಗಕ್ಕೆ ಶ್ರೀ ಹರಿ ಕಾಲಿಟ್ಟಿದ್ದಾರೆ. ಅಂದ್ಹಾಗೆ ಈ ಸಿನಿಮಾದಲ್ಲಿ ಯಶ್ ಶೆಟ್ಟಿ, ರುಶಿಕಾ, ದಿವ್ಯ, ಪ್ರಾಣ್ಯ, ಸಂತು, ಸಂಕಲನಕಾರ ಹರೀಶ್ ಕೊಮ್ಮೆ ನಟಿಸಿದ್ದಾರೆ. ಅರ್ಜುನ್ ಜನ್ಯ ಸಂಗೀತ, ಅನೂಪ್ ಸೀಳಿನ್ ಹಿನ್ನೆಲೆ ಸಂಗೀತ ನೀಡಿದ್ದು, ಡಿಸೆಂಬರ್ 30 ಸಿನಿಮಾ ರಿಲೀಸ್ ಆಗುತ್ತಿದೆ.