Don't Miss!
- News Bengaluru-Tumkur Metro: 52.41 ಕಿ.ಮೀ. ಮಾರ್ಗ, 19 ನಿಲ್ದಾಣಗಳು; ತುಮಕೂರು-ಬೆಂಗಳೂರು ಮೆಟ್ರೋ ಅಪ್ಡೇಟ್
- Lifestyle ಏಪ್ರಿಲ್ನಲ್ಲಿ 14 ದಿನ ರಜೆ, ಏಪ್ರಿಲ್ 1ಕ್ಕೆ ಬ್ಯಾಂಕ್ಗಳಿಗೆ ರಜೆ ಇರಲು ಕಾರಣವೇನು?
- Sports ರೋಹಿತ್ vs ಹಾರ್ದಿಕ್: ಸತತ ಸೋಲಿನ ನಡುವೆಯೇ ಮುಂಬೈ ಇಂಡಿಯನ್ಸ್ ಇಬ್ಭಾಗ!?
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಬಂಪರ್ಗೂ ಮೊದಲೇ ಹೊಸ ಪ್ರಾಜೆಕ್ಟ್ ಕೈಗೆತ್ತಿಕೊಂಡ ಧನ್ವೀರ್!
'ಬಜಾರ್' ಸಿನಿಮಾದ ನಂತರ 'ಬಂಪರ್' ಎಂಬ ಚಿತ್ರವನ್ನು ಕೈಗೆತ್ತಿಕೊಂಡಿದ್ದ ನಟ ಧನ್ವೀರ್ ಈಗ ಮತ್ತೊಂದು ಸರ್ಪ್ರೈಸ್ ಸುದ್ದಿ ನೀಡಿದ್ದಾರೆ. ಬಂಪರ್ಗೂ ಮೊದಲು ಇನ್ನೊಂದು ಹೊಸ ಪ್ರಾಜೆಕ್ಟ್ ಮಾಡಲು ಮುಂದಾಗಿದ್ದಾರೆ ಎಂಬ ಮಾಹಿತಿ ಹೊರಬಿದ್ದಿದೆ.
ಹೌದು, ಹರಿ ಸಂತೋಷ್ ನಿರ್ದೇಶನದಲ್ಲಿ ಬಂಪರ್ ಸಿನಿಮಾ ಮಾಡುತ್ತಿದ್ದಾರೆ. ಈ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ಸಹ ಬಿಡುಗಡೆಯಾಗಿದೆ. ಶೂಟಿಂಗ್ ಸಹ ಆರಂಭವಾಗಬೇಕಿತ್ತು. ಈ ನಡುವೆ ಬಂಪರ್ಗೆ ಬ್ರೇಕ್ ಹಾಕಿರುವ ಚಿತ್ರತಂಡ ರೊಮ್ಯಾಂಟಿಕ್ ಸಿನಿಮಾ ಆರಂಭಿಸುವ ಸುಳಿವು ನೀಡಿದೆ. ಅಷ್ಟಕ್ಕೂ, ಯಾವುದು ಆ ಚಿತ್ರ? ಮುಂದೆ ಓದಿ....
ಧನ್ವೀರ್ ಗೆ 'ಬಂಪರ್' ಗಿಫ್ಟ್ ನೀಡಿದ ಚಾಲೆಂಜಿಂಗ್ ಸ್ಟಾರ್ ದರ್ಶನ್
'ಬೈ 2 ಲವ್'ನಲ್ಲಿ ಧನ್ವೀರ್
'ಬಂಪರ್' ಸಿನಿಮಾಗೂ ಮುಂಚೆ ರೊಮ್ಯಾಂಟಿಕ್ ಚಿತ್ರವೊಂದು ಮಾಡಲು ತಯಾರಾಗಿದ್ದು, ಆ ಚಿತ್ರಕ್ಕೆ 'ಬೈ 2 ಲವ್' ಎಂದು ಹೆಸರು ಸಹ ಅಂತಿಮವಾಗಿದೆಯಂತೆ. ಈ ಚಿತ್ರವನ್ನು ಹರಿ ಸಂತೋಷ್ ಅವರೇ ನಿರ್ದೇಶನ ಮಾಡಲಿದ್ದಾರೆ.
ಧನ್ವೀರ್ಗೆ ಶ್ರೀಲೀಲಾ ನಾಯಕಿ
ಧನ್ವೀರ್ಗೆ ಈ ಚಿತ್ರದಲ್ಲಿ 'ಕಿಸ್' ಖ್ಯಾತಿಯ ಶ್ರೀಲೀಲಾ ನಾಯಕಿಯಾಗಿ ನಟಿಸುತ್ತಿದ್ದಾರೆ ಎಂದು ವರದಿಯಾಗಿದೆ. ಎಪಿ ಅರ್ಜುನ್ ನಿರ್ದೇಶಿಸಿದ್ದ 'ಕಿಸ್' ಚಿತ್ರದ ಮೂಲಕ ಸ್ಯಾಂಡಲ್ ವುಡ್ ಪ್ರವೇಶಿಸಿದ ನಟಿ ನಂತರ ಶ್ರೀಮುರಳಿ ಜೊತೆ 'ಭರಾಟೆ' ಮಾಡಿದರು. ಈಗ ಧನ್ವೀರ್ ಜೊತೆ 'ಬೈ 2 ಲವ್' ಮಾಡಲಿದ್ದಾರೆ.
ಹರಿ ಸಂತೋಷ್ ಸಿನಿಮಾ
'ಅಲೆಮಾರಿ' ಸಂತು ಎಂದು ಖ್ಯಾತಿ ಗಳಿಸಿಕೊಂಡಿರುವ ಹರಿ ಸಂತೋಷ್ ಕಳೆದ ವರ್ಷ 'ಬಿಚ್ಚುಗತ್ತಿ' ಎಂಬ ಐತಿಹಾಸಿಕ ಚಿತ್ರವನ್ನು ನಿರ್ದೇಶಿಸಿದ್ದರು. ಅದಕ್ಕು ಮುಂಚೆ 'ಕಾಲೇಜು ಕುಮಾರ್' ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದರು. ಈಗ ಬಂಪರ್ ಘೋಷಿಸಿದ್ದರು. ಆ ಪ್ರಾಜೆಕ್ಟ್ಗೂ ಮೊದಲು 'ಬೈ 2 ಲವ್' ಕೈಗೆತ್ತಿಕೊಂಡಿದ್ದಾರೆ.
Recommended Video
ಸುಪ್ರೀತ್ ನಿರ್ಮಾಣದಲ್ಲಿ ಈ ಸಿನಿಮಾ
ಬೈ 2 ಲವ್ ಸಿನಿಮಾವನ್ನು ಕೆವಿಎನ್ ಪ್ರೊಡಕ್ಷನ್ ಮತ್ತು ಸುಪ್ರೀತ್ ಪ್ರೊಡಕ್ಷನ್ ಜಂಟಿಯಾಗಿ ನಿರ್ಮಾಣ ಮಾಡುತ್ತಿದೆ. ಸದ್ಯ ಪ್ರೀ-ಪ್ರೊಡಕ್ಷನ್ ಕೆಲಸ ಆರಂಭಿಸಿರುವ ಚಿತ್ರತಂಡ ಜನವರಿ 4ನೇ ತಾರೀಖಿನಿಂದ ಚಿತ್ರೀಕರಣ ಶುರು ಮಾಡಲು ನಿರ್ಧರಿಸಿದೆ. ಅಜನೀಶ್ ಲೋಕನಾಥ್ ಸಂಗೀತ ಹಾಗೂ ಮಹೇನ್ ಸಿಂಹ ಅವರ ಛಾಯಾಗ್ರಹಣವಿರಲಿದೆ.