Don't Miss!
- Sports CSK vs LSG IPL 2024: ಮಾರ್ಕಸ್ ಸ್ಟೋಯಿನಿಸ್ ಆರ್ಭಟಕ್ಕೆ ಸಿಎಸ್ಕೆ ಥಂಡಾ; ಚೆನ್ನೈಗೆ ನೀರು ಕುಡಿಸಿದ ಲಕ್ನೋ
- News ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ: ಕಾರಣ ತಿಳಿಸಿದ ಚಾಲೆಂಜಿಂಗ್ ಸ್ಟಾರ್ ದರ್ಶನ್
- Lifestyle ಈ ಕಾರಣಕ್ಕೆ ನೀವು ಮಾವಿನ ಹಣ್ಣನ್ನು ನೀರಿನಲ್ಲಿ ನೆನೆಹಾಕಿಯೇ ತಿನ್ನಬೇಕು, ಅದು ನಿಮ್ಮ ತೋಟದಲ್ಲಿ ಬೆಳೆದಿದ್ದೇ ಆಗಿರಲಿ
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕರಿ ಚಿರತೆ ದತ್ತು ಪಡೆದ 'ಬಜಾರ್' ನಟ ಧನ್ವೀರ್
'ಬಜಾರ್' ಚಿತ್ರದ ಮೂಲಕ ಸ್ಯಾಂಡಲ್ವುಡ್ ಇಂಡಸ್ಟ್ರಿ ಪ್ರವೇಶಿಸಿ ಅಭಿಮಾನಿಗಳ ಹೃದಯದಲ್ಲಿ ಸ್ಥಾನ ಪಡೆದಿರುವ ನಟ ಧನ್ವೀರ್, ಕರಿ ಚಿರತೆಯನ್ನು ದತ್ತು ಪಡೆದುಕೊಂಡಿದ್ದಾರೆ.
35 ಸಾವಿರ ರೂಪಾಯಿ ನೀಡಿ ಒಂದು ವರ್ಷದ ಅವಧಿಗೆ ಕರಿ ಚಿರತೆಯನ್ನು ದತ್ತು ಪಡೆದಿದ್ದಾರೆ. ಸೆಪ್ಟೆಂಬರ್ 8 ರಂದು ಹುಟ್ಟುಹಬ್ಬ ಆಚರಿಸಿಕೊಂಡಿದ್ದ ನಟ ಧನ್ವೀರ್ ಇಂದು ಮೈಸೂರು ಮೃಗಾಲಯಕ್ಕೆ ಭೇಟಿ ನೀಡಿದರು.
ಶಿವರಾಜ್ ಕುಮಾರ್ ಹೆಜ್ಜೆಯನ್ನು ಹಿಂಬಾಲಿಸಿದ ಅಭಿಮಾನಿಗಳು
ಹುಟ್ಟುಹಬ್ಬ ಹಿನ್ನೆಲೆ ಮೈಸೂರು ಮೃಗಾಲಯಕ್ಕೆ ಭೇಟಿ ನೀಡಿದ ಯುವ ನಟನಿಗೆ ಸ್ನೇಹಿತರು ಮತ್ತು ಅಭಿಮಾನಿಗಳು ಸಾಥ್ ನೀಡಿದರು. ಈ ವೇಳೆ ಮೃಗಾಲಯ ಸಿಬ್ಬಂದಿಯಿಂದ ಪ್ರಮಾಣ ಪತ್ರ ಸ್ವೀಕಾರ ಮಾಡಿದರು. ಹಾಗಯೇ ಕೇಕ್ ಕತ್ತರಿಸಿ ಅಭಿಮಾನಿಗಳು ಸಂಭ್ರಮಿಸಿದರು. ಧನ್ವೀರ್ ಪಾರಿವಾಳ ಹಾರಿಸಿದ್ದು ವಿಶೇಷವಾಗಿತ್ತು.
ಇದಕ್ಕೂ ಮುಂಚೆ ನಟ ಶಿವರಾಜ್ ಕುಮಾರ್ ಮೈಸೂರು ಮೃಗಾಲಯದಿಂದ ಪಾರ್ವತಿ ಎಂಬ ಆನೆ ಮರಿಯನ್ನು ಒಂದು ವರ್ಷದ ಅವಧಿಗೆ ದತ್ತು ಪಡೆದುಕೊಂಡಿದ್ದರು. ನಂತರ ಶಿವರಾಜ್ ಕುಮಾರ್ ಅಭಿಮಾನಿ ಸಂಘ ಸುಮಾರು 35 ಪ್ರಾಣಿಗಳು ದತ್ತು ಪಡೆದಿದ್ದರು.
Recommended Video
ಇನ್ನುಳಿದಂತೆ 'ಬಂಪರ್' ಚಿತ್ರದಲ್ಲಿ ಧನ್ವೀರ್ ನಟಿಸುತ್ತಿದ್ದು, ಚಿತ್ರದ ಟೀಸರ್ ಸಹ ಬಿಡುಗಡೆಯಾಗಿದೆ. ಈ ಚಿತ್ರವನ್ನು ಹರಿ ಸಂತು ನಿರ್ದೇಶನ ಮಾಡುತ್ತಿದ್ದಾರೆ.