Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಅದ್ದೂರಿ ಧ್ರುವ ಸರ್ಜಾ ಈಗ ಬಹದ್ದೂರ್ ಹುಡುಗ
ತಮ್ಮ ಆರಂಭದ ಚಿತ್ರ 'ಅದ್ದೂರಿ' ಮೂಲಕ ಭರವಸೆ ಹುಟ್ಟಿಸಿರುವ ಧ್ರುವ ಸರ್ಜಾ ಅವರು ಕೆಲದಿನಗಳಿಂದ ಸುದ್ದಿಯಲ್ಲೂ ಇಲ್ಲ ಸುಳಿವೂ ಇಲ್ಲ. ಈಗ ಮತ್ತೊಂದು ಚಿತ್ರಕ್ಕೆ ಸಹಿ ಹಾಕುವ ಮೂಲಕ ಮತ್ತೆ ಸುದ್ದಿಯಾಗಿದ್ದಾರೆ. ಚಿತ್ರದ ಹೆಸರು 'ಬಹದ್ದೂರ್'.
ತಮ್ಮ ಚೊಚ್ಚಲ ಚಿತ್ರ 'ಅದ್ದೂರಿ' 25 ಕೇಂದ್ರಗಳಲ್ಲಿ ಸೆಂಚುರಿ ಬಾರಿಸಿದರೂ ಧ್ರುವ ಸರ್ಜಾ ಯಾವುದೇ ಚಿತ್ರವನ್ನು ಒಪ್ಪಿಕೊಂಡಿರಲಿಲ್ಲ. ಸರಿಸುಮಾರು 40 ಸ್ಕ್ರಿಪ್ಟ್ ಗಳನ್ನು ನೋಡಿ ತಮ್ಮ ಮುಂದಿನ ಚಿತ್ರಕ್ಕೆ ಸಹಿ ಹಾಕಿದ್ದಾರೆ. ಅದಕ್ಕಾಗಿಯೇ ಇಷ್ಟೊಂದು ತಡವಾಯಿತು ಎನ್ನಲಾಗಿದೆ. ಅದ್ದೂರಿ ಚಿತ್ರ ವಿಮರ್ಶೆ ಓದಿ.
ಆಕ್ಷನ್ ಕಿಂಗ್ ಅರ್ಜುನ್ ಸರ್ಜಾ ಅವರ ಸೋದರಿಯರ ಪುತ್ರ ಧ್ರುವ ಸರ್ಜಾ ಅವರ ಹೊಸ ಚಿತ್ರ ಜನವರಿ ವೇಳೆಗೆ ಸೆಟ್ಟೇರಲಿದೆ. ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳುತ್ತಿರುವವರು ಚೇತನ್. ಇದು ಇವರ ಚೊಚ್ಚಲ ನಿರ್ದೇಶನದ ಚಿತ್ರ.
'ಅದ್ದೂರಿ' ನಿರ್ದೇಶಕ ಅರ್ಜುನ್ ಗೆ ಸಹಾಯಕರಾಗಿ ಹಾಗೂ ರಜನಿಕಾಂತ, ಪುಲಕೇಶಿ, ವರದನಾಯಕ ಮುಂತಾದ ಚಿತ್ರಗಳಿಗೆ ಹಾಡುಗಳನ್ನೂ ಬರೆದಿದ್ದಾರೆ ಚೇತನ್. ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರ ಅಂದರ್ ಬಾಹರ್ ಚಿತ್ರ ನಿರ್ಮಿಸಿರುವ ಲೆಜೆಂಡ್ ಇಂಟರ್ ನ್ಯಾಷನಲ್ ಗ್ರೂಪ್ ಸಂಸ್ಥೆ ಈ ಚಿತ್ರವನ್ನು ನಿರ್ಮಿಸುತ್ತಿದೆ.
ರಜನೀಶ್, ಪ್ರಸಾದ್ ರಾವ್, ಅಂಬರೀಶ್, ಭಾಸ್ಕರ್, ಅವಿನಾಶ್ ಮತ್ತು ಶ್ರೀನಿವಾಸ್ ಚಿತ್ರದ ನಿರ್ಮಾಪಕರು. ಆಸ್ಕರ್ ಪ್ರಶಸ್ತಿ ಪಡೆದ ಜೈಹೋ ಹಾಡಿನಲ್ಲಿ ಹಾಡಿದ್ದ ವಿಜಯಪ್ರಕಾಶ್ ಈ ಚಿತ್ರದ ಸಂಗೀತ ನಿರ್ದೇಶಕರು. ಸತ್ಯಹೆಗಡೆ ಛಾಯಾಗ್ರಾಹಕರಾಗಿ ಆಯ್ಕೆಯಾಗಿರುವ ಈ ನೂತನ ಚಿತ್ರದ ಉಳಿದ ತಾರಾಗಣ ಹಾಗೂ ತಂತ್ರಜ್ಞರ ಆಯ್ಕೆ ಪ್ರಗತಿಯಲ್ಲಿದೆ. (ಒನ್ಇಂಡಿಯಾ ಕನ್ನಡ)