Don't Miss!
- Automobiles ರಾಜ್ಯದಲ್ಲಿ ತಯಾರಾಗುವ ಟೊಯೊಟಾ ಇನ್ನೋವಾ ಹೈಕ್ರಾಸ್ಗೆ ಸೆಲೆಬ್ರಿಟಿಗಳು ಫಿಧಾ: ಈ ಕಾರು ಖರೀದಿಸಿದ ನಟಿ
- News Bengaluru Rain: ಸುದೀರ್ಘ ಕಾಯುವಿಕೆ ಅಂತ್ಯ: ಬೆಂಗಳೂರಿಗೆ ಎಂಟ್ರಿ ಕೊಟ್ಟ ಮಳೆ; ವಿಡಿಯೋ ನೋಡಿ
- Lifestyle 5 ನಿಮಿಷದಲ್ಲಿ ಪಾತ್ರೆಯನ್ನು ಹೊಳೆಯುವಂತೆ ಮಾಡಿ..! ಸುಲಭದ ಟಿಪ್ಸ್ ಇಲ್ಲಿದೆ
- Technology oneplus: ಒನ್ಪ್ಲಸ್ನಿಂದ ಫ್ಲ್ಯಾಗ್ಶಿಪ್ ಕ್ಯಾಮೆರಾ ಸೌಲಭ್ಯದೊಂದಿಗೆ ಫ್ಲಿಪ್ ಫೋನ್!
- Sports LSG vs CSK IPL 2024: ಲಕ್ನೋ vs ಚೆನ್ನೈ ಪಂದ್ಯದ ವರದಿ, ಫ್ಯಾಂಟಸಿ ಡ್ರೀಮ್ ಟೀಂ, ಸಂಭಾವ್ಯ ಆಡುವ 11ರ ಬಳಗ
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
#MyGuru ಅಭಿಯಾನ: ನನ್ನ ಅಣ್ಣ ನನ್ನ ಗುರು ಎಂದು ಚಿರು ಸ್ಮರಿಸಿದ ಧ್ರುವ ಸರ್ಜಾ
ಪ್ರತಿಯೊಬ್ಬರ ಜೀವನದಲ್ಲು ಒಬ್ಬ ಗುರು ಇದ್ದೇ ಇರ್ತಾರೆ. ಸನ್ನಡತೆ, ಸನ್ಮಾರ್ಗ ಹಾಗೂ ಒಳ್ಳೆಯ ಪ್ರಜೆ ಅಥವಾ ವ್ಯಕ್ತಿಯಾಗಿ ರೂಪುಗೊಳ್ಳಲು ಆ ಗುರು ಸ್ಫೂರ್ತಿಯಾಗಿರುತ್ತಾರೆ. ಆ ಗುರುವನ್ನು ನೆನೆಯುವ ಒಂದು ವೇದಿಕೆ ಮಾಡಿಕೊಟ್ಟಿದೆ ಯುವರತ್ನ ಚಿತ್ರತಂಡ.
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಟನೆಯ ಯುವರತ್ನ ಸಿನಿಮಾದಲ್ಲಿ 'ಪಾಠಶಾಲೆ' ಎಂಬ ಹಾಡು ಬಿಡುಗಡೆಯಾಗಿದೆ. ಈ ಹಾಡು ಗುರುವಿನ ಬಗ್ಗೆ ಮೂಡಿಬಂದಿದೆ. ಪ್ರತಿಯೊಬ್ಬರು ತಮ್ಮ ಗುರುವಿನ ಪಾತ್ರವನ್ನು ಮರೆಯಬಾರದು ಎಂದು ಸಂದೇಶ ನೀಡಿದೆ.
ಶಿರಡಿ ಸಾಯಿಬಾಬಾ ಮತ್ತು ಕೊಲ್ಲಾಪುರ ಮಹಾಲಕ್ಷ್ಮೀ ದರ್ಶನ ಪಡೆದ ಪುನೀತ್
ಈ ಹಾಡಿನ ಹಿನ್ನೆಲೆ ಯುವರತ್ನ ಚಿತ್ರತಂಡ #MyGuru ಎಂಬ ವಿಶೇಷ ಅಭಿಯಾನ ಶುರು ಮಾಡಿದೆ. ತಮ್ಮ ಜೀವನದಲ್ಲಿ ಮರೆಯಲಾಗದ ಗುರು ಬಗ್ಗೆ ಒಂದೆರಡು ಮಾತುಗಳನ್ನು ಹಂಚಿಕೊಳ್ಳುವಂತಹ ಅಭಿಯಾನದಲ್ಲಿ ಸೆಲೆಬ್ರಿಟಿಗಳು ಭಾಗಿಯಾಗಿದ್ದಾರೆ. ಪುನೀತ್ ರಾಜ್ ಕುಮಾರ್, ಧ್ರುವ ಸರ್ಜಾ ಸೇರಿದಂತೆ ಹಲವರು ತಮ್ಮ ಗುರುವಿನ ಪರಿಚಯ ಮಾಡಿದ್ದಾರೆ. ಮುಂದೆ ಓದಿ....
ವಿಜಯಲಕ್ಷ್ಮಿ ಟೀಚರ್ ನನ್ನ ಗುರು
#MyGuru ಅಭಿಯಾನದಲ್ಲಿ ಪಾಲ್ಗೊಂಡ ನಟ ಪುನೀತ್ ರಾಜ್ ಕುಮಾರ್ ತಮ್ಮ ಜೀವನದ ಮೌಲ್ಯ ಕಲಿಸಿದ ವಿಜಯಲಕ್ಷ್ಮಿ ಗುರುಗಳನ್ನು ಸ್ಮರಿಸಿಕೊಂಡಿದ್ದಾರೆ. ವಿಜಯಲಕ್ಷ್ಮಿ ಅವರ ಜೊತೆಗಿರುವ ಬಾಲ್ಯದ ಫೋಟೋ ಹಂಚಿಕೊಂಡಿದ್ದಾರೆ. ನಂತರ ಈ ಅಭಿಯಾನವನ್ನು ರಕ್ಷಿತ್ ಶೆಟ್ಟಿ, ಶ್ರೀಮುರಳಿ, ಸಯೇಶಾ ಅವರನ್ನು ಮುಂದುವರಿಸಲು ಟ್ಯಾಗ್ ಮಾಡಿದ್ದಾರೆ.
ನನ್ನ ಅಣ್ಣ ನನ್ನ ಗುರು
''ಬಾಳೆಂಬ ಮೊಳಕೆ ಚಿಗುರೊಡೆಯಲು ಮಳೆಯಾದೆ, ಹೂವಾಗಿ ಅರಳಲು ಸ್ಫೂರ್ತಿಯ ಸೂರ್ಯನಾದೆ ವೃಕ್ಷವಾಗಿ ಬೆಳೆಯಲು ಆಸರೆಯ ಭೂಮಿಯಾದ ನನ್ನ ಅಣ್ಣ ನನ್ನ ಗುರು'' ಎಂದು ಚಿರು ಸರ್ಜಾ ಅವರನ್ನು ಧ್ರುವ ಸ್ಮರಿಸಿಕೊಂಡಿದ್ದಾರೆ.
ಲೆಕ್ಕ ಶಾಸ್ತ್ರ ಕಲಿಸಿದ ಗುರು
''ಲೆಕ್ಕ ಶಾಸ್ತ್ರ ಕಲಿಸಿದ ಗುರು, ಸತೀಶ್ ಸರ್. ನಾನು ನನ್ನ ಸಿನಿಮಾ ಯಾನ ಶುರು ಮಾಡುವುದಕ್ಕೆ ನನ್ನ ಪೋಷಕರನ್ನು ಒಪ್ಪಿಸಿದ್ರು. ನನ್ನ ಹೆಮ್ಮೆಯ ಗುರು'' ಎಂದು ನಿರ್ದೇಶಕ ಪವನ್ ಒಡೆಯರ್ ಫೋಟೋ ಹಂಚಿಕೊಂಡಿದ್ದಾರೆ.
ನನ್ನ ಅಣ್ಣ ನನ್ನ ಗುರು
''ಪ್ರತಿ ಹೆಜ್ಜೆಗೆ ನೆರಳಾಗಿ ಕತ್ತಲ ದಾರಿಯಲ್ಲಿ ಬೆಳಕಾಗಿ. ಪ್ರತಿ ನಡೆಯಲ್ಲೂ ಮುನ್ನಡೆಸಿ ಸಾಗುವ ನನ್ನ ಅಣ್ಣ ನನ್ನ ಗುರು'' ಎಂದು ವಿಜಯ್ ಕಿರಗಂದೂರ್ ಫೋಟೋ ಹಂಚಿಕೊಂಡಿದ್ದಾರೆ ಕಾರ್ತಿಕ್ ಗೌಡ.
Recommended Video