Don't Miss!
- News Namma Metro Service Extend: ಲೋಕಸಭಾ ಚುನಾವಣೆಗಾಗಿ ಮೆಟ್ರೋ ಸೇವೆ ವಿಸ್ತರಣೆ, ಗಮನಿಸಿ
- Automobiles Hero: ಮಧ್ಯಮ ವರ್ಗದವರ ನೆಚ್ಚಿನ ಬೈಕ್.. ರೂ.75 ಸಾವಿರ ಬೆಲೆ.. ಮೈಲೇಜ್ನಲ್ಲಿ ಸರಿ ಸಾಟಿಯಿಲ್ಲ!
- Lifestyle 3ನೇ ಬಾರಿ ಬಾಹ್ಯಾಕಾಶಕ್ಕೆ ಹಾರಲು ಮುಂದಾದ ಸುನೀತಾ ವಿಲಿಯಮ್ಸ್..!
- Sports T20 World Cup 2024: ವೀರೇಂದ್ರ ಸೆಹ್ವಾಗ್ ಆಯ್ಕೆಯ ಭಾರತ ತಂಡದಲ್ಲಿ ಪ್ರಮುಖ ಆಟಗಾರರಿಗೆ ಸ್ಥಾನವಿಲ್ಲ!
- Technology Realme: ರಿಯಲ್ಮಿ ನಾರ್ಜೋ 70 5G, ನಾರ್ಜೋ 70x 5G ಸ್ಮಾರ್ಟ್ಫೋನ್ ಲಾಂಚ್! ಸಖತ್ ಫೀಚರ್ಸ್... ಬೆಲೆ ಎಷ್ಟು?
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ರಾಮಾರ್ಜುನ' ಚಿತ್ರಕ್ಕೆ ಆನೆಬಲ: ಸಿನಿಮಾ ನೋಡಿ ಮೆಚ್ಚಿದ ಧ್ರುವ ಸರ್ಜಾ
ಅನಿಶ್ ತೇಜೇಶ್ವರ್ ನಟಿಸಿ, ಚೊಚ್ಚಲ ಬಾರಿಗೆ ನಿರ್ದೇಶನ ಮಾಡಿರುವ ರಾಮಾರ್ಜುನ ಸಿನಿಮಾ ಬಿಡುಗಡೆಯಾಗಿ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಮೊದಲ ವಾರ ಪ್ರೇಕ್ಷಕರಿಂದ ಅದ್ಭುತ ಪ್ರತಿಕ್ರಿಯೆ ಪಡೆದುಕೊಂಡಿರುವ ರಾಮಾರ್ಜುನ ಎರಡನೇ ವಾರವೂ ಹೌಸ್ಫುಲ್ ಪ್ರದರ್ಶನ ಕಾಣುತ್ತಿದೆ.
Recommended Video
ಇದೀಗ, ರಾಮಾರ್ಜುನ ಚಿತ್ರಕ್ಕೆ ಆನೆಬಲ ಬಂದಿದೆ. ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ರಾಮಾರ್ಜುನ ಸಿನಿಮಾ ನೋಡಿ ಚಿತ್ರದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಅನಿಶ್ ನಿರ್ದೇಶನ ಹಾಗೂ ನಟನೆ ಬಗ್ಗೆ ವೈಯಕ್ತಿಕವಾಗಿ ಹಾಡಿಹೊಗಳಿದ್ದಾರೆ.
ನಮ್ಮ ಒಳ್ಳೆಯ ಕನ್ನಡ ಸಿನಿಮಾ ಉಳಿಸಿಕೊಡಿ: ಕೈಮುಗಿದ ನಟ, ನಿರ್ದೇಶಕ
ಈ ಕುರಿತು ಟ್ವೀಟ್ ಮಾಡಿ ಧ್ರುವ ಸರ್ಜಾ ''ರಾಮಾರ್ಜುನ ಎಂಬ ಅತ್ಯದ್ಭುತ ಸಿನಿಮಾ ನೋಡಿದೆ, ಕಥೆ ಬಹಳ ಚೆನ್ನಾಗಿದೆ. ದಯವಿಟ್ಟು ಸಿನಿಮಾ ನೋಡಿ ಪ್ರೋತ್ಸಾಹಿಸಿ, ನಿಮಗೆ ನಿಜವಾಗಲೂ ಇಷ್ಟ ಆಗುತ್ತೆ ಎಂಬ ಭರವಸೆ ನನಗಿದೆ. ವಿಶೇಷವಾಗಿ ಅನಿಶ್ ಸರ್ ಅವರ ನಟನೆ ಹಾಗೂ ಅವರ ಒಳ್ಳೆಯ ನಿರ್ದೇಶನಕ್ಕೆ ಮೆಚ್ಚುಗೆ ಹೇಳಲೇಬೇಕು. ಇಡೀ ರಾಮಾರ್ಜುನ ಚಿತ್ರತಂಡಕ್ಕೆ ಶುಭಾಶಯ'' ಎಂದು ಸಂತಸ ವ್ಯಕ್ತಪಡಿಸಿದ್ದಾರೆ.
ಧ್ರುವ ಸರ್ಜಾ ಅವರ ಈ ಟ್ವೀಟ್ಗೆ ಅನಿಶ್ ತೇಜೇಶ್ವರ್ ಪ್ರತಿಕ್ರಿಯಿಸಿದ್ದು ''ನಮ್ಮ ರಾಮಾರ್ಜುನ ಸಿನಿಮಾ ನೋಡಿ ನೀವು ಆಡಿದ ಮಾತುಗಳಿಗೆ ನಾನು ಹಾಗೂ ನಮ್ಮ ಚಿತ್ರತಂಡ ಎಂದಿಗೂ ಚಿರಋಣಿ.. ನಿಮ್ಮ ಈ ಮಾತುಗಳಿಂದ ನಮ್ಮ ಚಿತ್ರಕ್ಕೆ ಆನೆ ಭಲ ಬಂದಂತಾಗಿದೆ. ಧನ್ಯವಾದಗಳು'' ಎಂದಿದ್ದಾರೆ.
Ramarjuna Review: ಜನರಿಗಾಗಿ ಧರೆಗಿಳಿದು ಬಂದ 'ರಾಮಾರ್ಜುನ'
ಇನ್ನು ಎರಡನೇ ವಾರ ರಾಮಾರ್ಜುನ ಸಿನಿಮಾಗೆ ಪ್ರೇಕ್ಷಕರ ಕೊರತೆ ಎದುರಾಗಿದ್ದು, ನಟ-ನಿರ್ದೇಶಕ ಅನಿಶ್ ತೇಜೇಶ್ವರ್ ಬೇಸರ ವ್ಯಕ್ತಪಡಿಸಿದ್ದಾರೆ. 'ಕಾಡಿ ಬೇಡಿ ನಮ್ಮ ಸಿನಿಮಾವನ್ನು ಎರಡನೇ ವಾರಕ್ಕೆ ಕೆಲವು ಚಿತ್ರಮಂದಿರಗಳಲ್ಲಿ ಉಳಿಸಿಕೊಂಡಿದ್ದೇನೆ. ದಯವಿಟ್ಟು ಒಂದೊಳ್ಳೆ ಸಿನಿಮಾವನ್ನು ಉಳಿಸಿಕೊಡಿ. ಮೊದಲ ವಾರ ಸಿನಿಮಾ ನೋಡಿದವರನ್ನು ಕೇಳಿಯೇ ಸಿನಿಮಾಕ್ಕೆ ಬನ್ನಿ ಪರವಾಗಿಲ್ಲ. ಆದರೆ ಸಿನಿಮಾವನ್ನು ಚಿತ್ರಮಂದಿರಗಳಲ್ಲಿ ಬಂದು ನೋಡಿ' ಎಂದು ಅನೀಶ್ ಮನವಿ ಮಾಡಿದ್ದಾರೆ.
ಅನಿಶ್ ತೇಜೇಶ್ವರ್, ನಿಶ್ವಿಕಾ ನಾಯ್ಡು, ರಂಗಾಯಣ ರಘು, ಹರೀಶ್ ರಾಜ್, ಶರತ್ ಲೋಹಿತಾಶ್ವ, ಮಿತ್ರ, ಉಗ್ರಂ ಮಂಜು, ಗಿರಿಶ್ ಶಿವಣ್ಣ ಸೇರಿದಂತೆ ಹಲವರು ನಟಿಸಿದ್ದಾರೆ. ಅನಂದ್ ರಾಜವಿಕ್ರಮ್ ಅವರ ಸಂಗೀತವಿದೆ.