Don't Miss!
- News ಉಕ್ರೇನ್ ವಿರುದ್ಧ ರಷ್ಯಾ ಗಂಭೀರ ಆರೋಪ!
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Sports RR vs DC: ಅವೇಶ್ ಖಾನ್, ರಿಯಾನ್ ಪರಾಗ್ ಶೈನ್; ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ವಿನ್
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ರಾಮಾರ್ಜುನ' ಚಿತ್ರಕ್ಕೆ ಆನೆಬಲ: ಸಿನಿಮಾ ನೋಡಿ ಮೆಚ್ಚಿದ ಧ್ರುವ ಸರ್ಜಾ
ಅನಿಶ್ ತೇಜೇಶ್ವರ್ ನಟಿಸಿ, ಚೊಚ್ಚಲ ಬಾರಿಗೆ ನಿರ್ದೇಶನ ಮಾಡಿರುವ ರಾಮಾರ್ಜುನ ಸಿನಿಮಾ ಬಿಡುಗಡೆಯಾಗಿ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಮೊದಲ ವಾರ ಪ್ರೇಕ್ಷಕರಿಂದ ಅದ್ಭುತ ಪ್ರತಿಕ್ರಿಯೆ ಪಡೆದುಕೊಂಡಿರುವ ರಾಮಾರ್ಜುನ ಎರಡನೇ ವಾರವೂ ಹೌಸ್ಫುಲ್ ಪ್ರದರ್ಶನ ಕಾಣುತ್ತಿದೆ.
Recommended Video
ಇದೀಗ, ರಾಮಾರ್ಜುನ ಚಿತ್ರಕ್ಕೆ ಆನೆಬಲ ಬಂದಿದೆ. ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ರಾಮಾರ್ಜುನ ಸಿನಿಮಾ ನೋಡಿ ಚಿತ್ರದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಅನಿಶ್ ನಿರ್ದೇಶನ ಹಾಗೂ ನಟನೆ ಬಗ್ಗೆ ವೈಯಕ್ತಿಕವಾಗಿ ಹಾಡಿಹೊಗಳಿದ್ದಾರೆ.
ನಮ್ಮ ಒಳ್ಳೆಯ ಕನ್ನಡ ಸಿನಿಮಾ ಉಳಿಸಿಕೊಡಿ: ಕೈಮುಗಿದ ನಟ, ನಿರ್ದೇಶಕ
ಈ ಕುರಿತು ಟ್ವೀಟ್ ಮಾಡಿ ಧ್ರುವ ಸರ್ಜಾ ''ರಾಮಾರ್ಜುನ ಎಂಬ ಅತ್ಯದ್ಭುತ ಸಿನಿಮಾ ನೋಡಿದೆ, ಕಥೆ ಬಹಳ ಚೆನ್ನಾಗಿದೆ. ದಯವಿಟ್ಟು ಸಿನಿಮಾ ನೋಡಿ ಪ್ರೋತ್ಸಾಹಿಸಿ, ನಿಮಗೆ ನಿಜವಾಗಲೂ ಇಷ್ಟ ಆಗುತ್ತೆ ಎಂಬ ಭರವಸೆ ನನಗಿದೆ. ವಿಶೇಷವಾಗಿ ಅನಿಶ್ ಸರ್ ಅವರ ನಟನೆ ಹಾಗೂ ಅವರ ಒಳ್ಳೆಯ ನಿರ್ದೇಶನಕ್ಕೆ ಮೆಚ್ಚುಗೆ ಹೇಳಲೇಬೇಕು. ಇಡೀ ರಾಮಾರ್ಜುನ ಚಿತ್ರತಂಡಕ್ಕೆ ಶುಭಾಶಯ'' ಎಂದು ಸಂತಸ ವ್ಯಕ್ತಪಡಿಸಿದ್ದಾರೆ.
ಧ್ರುವ ಸರ್ಜಾ ಅವರ ಈ ಟ್ವೀಟ್ಗೆ ಅನಿಶ್ ತೇಜೇಶ್ವರ್ ಪ್ರತಿಕ್ರಿಯಿಸಿದ್ದು ''ನಮ್ಮ ರಾಮಾರ್ಜುನ ಸಿನಿಮಾ ನೋಡಿ ನೀವು ಆಡಿದ ಮಾತುಗಳಿಗೆ ನಾನು ಹಾಗೂ ನಮ್ಮ ಚಿತ್ರತಂಡ ಎಂದಿಗೂ ಚಿರಋಣಿ.. ನಿಮ್ಮ ಈ ಮಾತುಗಳಿಂದ ನಮ್ಮ ಚಿತ್ರಕ್ಕೆ ಆನೆ ಭಲ ಬಂದಂತಾಗಿದೆ. ಧನ್ಯವಾದಗಳು'' ಎಂದಿದ್ದಾರೆ.
Ramarjuna Review: ಜನರಿಗಾಗಿ ಧರೆಗಿಳಿದು ಬಂದ 'ರಾಮಾರ್ಜುನ'
ಇನ್ನು ಎರಡನೇ ವಾರ ರಾಮಾರ್ಜುನ ಸಿನಿಮಾಗೆ ಪ್ರೇಕ್ಷಕರ ಕೊರತೆ ಎದುರಾಗಿದ್ದು, ನಟ-ನಿರ್ದೇಶಕ ಅನಿಶ್ ತೇಜೇಶ್ವರ್ ಬೇಸರ ವ್ಯಕ್ತಪಡಿಸಿದ್ದಾರೆ. 'ಕಾಡಿ ಬೇಡಿ ನಮ್ಮ ಸಿನಿಮಾವನ್ನು ಎರಡನೇ ವಾರಕ್ಕೆ ಕೆಲವು ಚಿತ್ರಮಂದಿರಗಳಲ್ಲಿ ಉಳಿಸಿಕೊಂಡಿದ್ದೇನೆ. ದಯವಿಟ್ಟು ಒಂದೊಳ್ಳೆ ಸಿನಿಮಾವನ್ನು ಉಳಿಸಿಕೊಡಿ. ಮೊದಲ ವಾರ ಸಿನಿಮಾ ನೋಡಿದವರನ್ನು ಕೇಳಿಯೇ ಸಿನಿಮಾಕ್ಕೆ ಬನ್ನಿ ಪರವಾಗಿಲ್ಲ. ಆದರೆ ಸಿನಿಮಾವನ್ನು ಚಿತ್ರಮಂದಿರಗಳಲ್ಲಿ ಬಂದು ನೋಡಿ' ಎಂದು ಅನೀಶ್ ಮನವಿ ಮಾಡಿದ್ದಾರೆ.
ಅನಿಶ್ ತೇಜೇಶ್ವರ್, ನಿಶ್ವಿಕಾ ನಾಯ್ಡು, ರಂಗಾಯಣ ರಘು, ಹರೀಶ್ ರಾಜ್, ಶರತ್ ಲೋಹಿತಾಶ್ವ, ಮಿತ್ರ, ಉಗ್ರಂ ಮಂಜು, ಗಿರಿಶ್ ಶಿವಣ್ಣ ಸೇರಿದಂತೆ ಹಲವರು ನಟಿಸಿದ್ದಾರೆ. ಅನಂದ್ ರಾಜವಿಕ್ರಮ್ ಅವರ ಸಂಗೀತವಿದೆ.