Don't Miss!
- Automobiles Tata Curvv Vs Citroen Basalt: ಟಾಟಾಗೆ ಸೆಡ್ಡು ಹೊಡೆಯುವ ತಾಕತ್ತಿದೆಯೇ?
- Lifestyle ನರಿ ಮತ್ತು ಕೋಳಿಗೂ ಮೂರ್ಖರ ದಿನಕ್ಕೂ ಇದೆ ನಂಟು..! ಏನದು.?
- News RBI: ಬ್ಯಾಂಕ್ ಕೆಲಸ ಮುಗಿದಿಲ್ವಾ? ಭಯ ಬೇಡ ಮಾರ್ಚ್ 30, 31ಕ್ಕೂ ಓಪನ್ ಇರುತ್ತೆ ಆರ್ಬಿಐ ಕಚೇರಿಗಳು!
- Technology ಈ Amoled ಡಿಸ್ಪ್ಲೇ ಫೋನ್ ಬೆಲೆಯಲ್ಲಿ ಭಾರೀ ಇಳಿಕೆ!..ಈ ಆಫರ್ಗೆ ನೀವು ಫಿದಾ ಆಗ್ತೀರಾ!
- Finance ಮೊದಲ ಬಾರಿಗೆ ಅಂಬಾನಿ ಅದಾನಿ ಸೇರಿ ವ್ಯಾಪಾರ ಒಪ್ಪಂದ, ಇಲ್ಲಿದೆ ಒಪ್ಪಂದ ವಿವರ
- Sports IPL 2024: ವಿರಾಟ್ ಕೊಹ್ಲಿ ಕೆಕೆಆರ್ ಡಗೌಟ್ ನೋಡಿದ್ರೆ ಉರಿದು ಬೀಳ್ತಾರೆ; ಆರ್ಸಿಬಿ ಮಾಜಿ ಕ್ರಿಕೆಟಿಗ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮೈಸೂರಿನ ಚಾಮುಂಡೇಶ್ವರಿ ಸನ್ನಿಧಿಯಲ್ಲಿ ಧ್ರುವ ಸರ್ಜಾ, ಪ್ರೇಮ್ ಸಿನಿಮಾ ಲಾಂಚ್
ಧ್ರುವಾ ಸರ್ಜಾ ಬ್ಯಾಕ್ ಟು ಬ್ಯಾಕ್ ಸಿನಿಮಾಗಳನ್ನು ಒಪ್ಪಿಕೊಳ್ಳುತ್ತಿದ್ದಾರೆ. ಈಗಾಗಲೇ ಎ ಪಿ ಅರ್ಜುನ್ ನಿರ್ದೇಶನದ 'ಮಾರ್ಟಿನ್' ಸಿನಿಮಾದ ಚಿತ್ರೀಕರಣ ನಡೆಯುತ್ತಿದೆ. ಈ ಸಿನಿಮಾ ಕೂಡ ಮೊದಲ ಪ್ಯಾನ್ ಇಂಡಿಯಾ ಸಿನಿಮಾ ಆಗಿದ್ದು, ಈಗ ಮತ್ತೊಂದು ಸಿನಿಮಾ ಸೆಟ್ಟೇರಿದೆ.
'ಏಕ್ ಲವ್ ಯಾ' ಸಿನಿಮಾ ಬಳಿಕ ಜೋಗಿ ಪ್ರೇಮ್ ಮತ್ತೊಂದು ಸಿನಿಮಾವನ್ನು ಕೈಗೆತ್ತಿಕೊಂಡಿದ್ದಾರೆ. ಈ ಬಾರಿ ಪಕ್ಕಾ ಕಮರ್ಷಿಯಲ್ ಮಾಸ್ ಸಿನಿಮಾ ನಿರ್ದೇಶನ ಮಾಡುತ್ತಿದ್ದು, ಆಕ್ಷನ್ ಪ್ರಿನ್ ಧ್ರುವ ಸರ್ಜಾ ಜೊತೆಯಾಗಿದ್ದಾರೆ. ಧ್ರುವ ಹಾಗೂ ಜೋಗಿ ಪ್ರೇಮ್ ಮೊದಲ ಕಾಂಬಿನೇಷನ್ ಸಿನಿಮಾ ಹೇಗಿರುತ್ತೆ ಅನ್ನುವುದನ್ನು ಸ್ಯಾಂಡಲ್ವುಡ್ ಕುತೂಹಲದಿಂದ ನೋಡುತ್ತಿದೆ.
ಚಾಮುಂಡೇಶ್ವರಿ ಸನ್ನಿಧಿಯಲ್ಲಿ ಸೆಟ್ಟೇರಿತು ಸಿನಿಮಾ
ಧ್ರುವ ಸರ್ಜಾ ಹಾಗೂ ಜೋಗಿ ಪ್ರೇಮ್ ಕಾಂಬಿನೇಷನ್ ಸಿನಿಮಾವನ್ನು ಕೆವಿಎನ್ ಪ್ರೊಡಕ್ಷನ್ ನಿರ್ಮಾಣ ಮಾಡುತ್ತಿದೆ. ಇದೇ ಸಿನಿಮಾವನ್ನು ಅಣ್ಣಾವ್ರ ಹುಟ್ಟುಹಬ್ಬದ ದಿನದಂದು, ಮೈಸೂರಿನ ಚಾಮುಂಡೇಶ್ವರಿ ಸನ್ನಿಧಿಯಲ್ಲಿ ಮುಹೂರ್ತ ಮಾಡಿದೆ ಚಿತ್ರತಂಡ. ತಾಯಿ ಶ್ರೀ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿ ಬಳಿಕ ನಿರ್ದೇಶಕ ಪ್ರೇಮ್, ನಟಿ ರಕ್ಷಿತಾ, ನಟ ಧ್ರುವ ಸರ್ಜಾ ಹಾಗೂ ನಿರ್ಮಾಪಕ ನಿರ್ಮಾಪಕ ನಿಶಾ ವೆಂಕಟ್ ಕೊಣಂಕಿ ಚಿತ್ರೀಕರಣಕ್ಕೆ ಚಾಲನೆ ನೀಡಿದರು.
ಚಾಮುಂಡಿ ಬೆಟ್ಟದ ಆವರಣದಲ್ಲಿ ಚಾಮುಂಡೇಶ್ವರಿ ಉತ್ಸವ ಮೂರ್ತಿಯ ತೇರು ಎಳೆಯುವ ದೃಶ್ಯವನ್ನು ಪ್ರೇಮ್ ಕ್ಯಾಮರಾದಲ್ಲಿ ಸೆರೆಹಿಡಿದಿದ್ದಾರೆ. ಈ ಸಂಭ್ರಮದ ಕ್ಷಣಕ್ಕೆ ನೂರಾರು ಸಂಖ್ಯೆಯಲ್ಲಿ ಜನರು ಸಾಕ್ಷಿಯಾಗಿದ್ದರು. ಪ್ರೇಮ್ ಹಾಗೂ ಧ್ರುವ ಸರ್ಜಾ ಕಾಂಬಿನೇಷನ್ನಲ್ಲಿ ಮೂಡಿಬರುತ್ತಿರುವ ಸಿನಿಮಾ ಭೂಗತಲೋಕದ ಹಿನ್ನೆಲೆಯಿದೆ ಎಂದು ಹೇಳಲಾಗುತ್ತಿದೆ.
1970-ಯುದ್ಧದ ಮುನ್ನುಡಿ ಇಲ್ಲಿಂದ ಆರಂಭ
ಈ ಹೊಸ ಕಾಂಬಿನೇಷನ್ ಸಿನಿಮಾಗೆ ಇನ್ನೂ ಹೆಸರಿಟ್ಟಿಲ್ಲ. ಆದರೆ, ಚಿತ್ರದ ಪೋಸ್ಟರ್ನಲ್ಲಿ '1970-ಯುದ್ಧದ ಮುನ್ನುಡಿ ಇಲ್ಲಿಂದ ಆರಂಭ' ಸಬ್ ಟೈಟಲ್ ಸಿನಿಪ್ರಿಯರ ಗಮನ ಸೆಳೆಯುತ್ತಿದೆ. ಸದ್ಯ ಶೂಟಿಂಗ್ ಆರಂಭ ಆಗಿದ್ದು, ಮೇ ತಿಂಗಳಿನಲ್ಲಿ ಚಿತ್ರದ ಟೈಟಲ್ ಲಾಂಚ್ ಮಾಡಲು ಚಿತ್ರ ತಂಡ ಮುಂದಾಗಿದೆ. ಅಂದ್ಹಾಗೆ ಇದು 1970ರ ಬೆಂಗಳೂರಿನ ಭೂಗತಲೋಕದ ನೈಜ ಕಥೆಯನ್ನು ಆಧರಿಸಿದ ಚಿತ್ರವಾಗಿದ್ದು, ಫ್ಯಾನ್ ಇಂಡಿಯಾ ಸಿನಿಮಾವಾಗಿದೆ.
"ಚಿತ್ರದ ಕತೆ ಕೇಳಿ ತುಂಬ ಖುಷಿ ಆಯಿತು. ಕತೆ ತುಂಬಾ ಪವರ್ಫುಲ್ ಆಗಿದೆ. ಕತೆ ಕೇಳಿದ ತಕ್ಷಣ ನಾನು ಸಿನಿಮಾ ಮಾಡಲು ಒಪ್ಪಿಕೊಂಡೆ. ಈ ಚಿತ್ರದಲ್ಲಿ ನಾನು ಅತ್ಯಂತ ಭಿನ್ನವಾದ ಲುಕ್ನಲ್ಲಿ ಕಾಣಿಸಿಕೊಳ್ಳುತ್ತೇನೆ. ಇದು ರೌಡಿಸಂ ಚಿತ್ರವಾದರೂ ಕುಟುಂಬ ಸಹಿತ ನೋಡುವ ರೀತಿಯಲ್ಲಿ ಚಿತ್ರವನ್ನು ತೆಗೆಯಲಾಗುತ್ತೆ." ಎಂದು ಧ್ರುವ ಸರ್ಜಾ ಹೇಳಿದ್ದಾರೆ. "ಇದು ಭೂಗತಲೋಕದ ಸಿನಿಮಾವಾದರೂ ಸಹ ರಕ್ತಚರಿತ್ರೆಯ ಜೊತೆಗೆ ಸೆಂಟಿಮೆಂಟ್ ಹಾಗೂ ಉತ್ತಮ ಹಾಡುಗಳನ್ನು ನಿರೀಕ್ಷೆ ಮಾಡಬಹುದು. ಕುಟುಂಬ ವರ್ಗದವರನ್ನು ಸಹ ಈ ಸಿನಿಮಾ ಸೆಳೆಯುವ ವಿಶ್ವಾಸದಲ್ಲಿದ್ದೇವೆ." ಎಂದು ನಿರ್ದೇಶಕ ಜೋಗಿ ಪ್ರೇಮ್ ಹೇಳಿದ್ದಾರೆ.