Don't Miss!
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- News RCB: ಆರ್ಸಿಬಿ ಫ್ರಾಂಚೈಸ್ನಿಂದ ಬೆಂಗಳೂರಿನ ಮೂರು ಕೆರೆಗಳ ಪುನಶ್ಚೇತನ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ವಿವಾದಿತ ಲೇಖಕ ಯೋಗೇಶ್ ಮಾಸ್ಟರ್ ಸೆಕೆಂಡ್ ಇನ್ನಿಂಗ್ಸ್
ತಮ್ಮ 'ಢುಂಢಿ' ಕೃತಿಯ ಮೂಲಕ ವಿಘ್ನ ವಿನಾಶಕ ವಿಘ್ನೇಶ್ವರನನ್ನು ವಿಚಿತ್ರವಾಗಿ ಸೃಷ್ಟಿಸಿ ಕೋಟ್ಯಾಂತರ ಆಸ್ತಿಕರ ಪಾಲಿನ ವಿಲನ್ ಆದ ಯೋಗೇಶ್ ಮಾಸ್ಟರ್ ಅವರು ಇನ್ನೊಂದು ಚಿತ್ರದ ಮೂಲಕ ಪ್ರೇಕ್ಷಕರ ಮುಂದೆ ಬರುತ್ತಿದ್ದಾರೆ.
ಈ ಹಿಂದೆ ಅವರು 'ಪ್ರೀತಿ ಪ್ಯಾರ್ ಔರ್ ಲವ್' ಚಿತ್ರದಲ್ಲಿ ಬಣ್ಣ ಹಚ್ಚಿದ್ದರು. ಇದೀಗ 'ಮೂರು ಬಿಟ್ಟವರು ಊರಿಗೆ ದೊಡ್ಡವರು' ಚಿತ್ರದಲ್ಲಿ ಬಣ್ಣ ಹಚ್ಚುತ್ತಿದ್ದಾರೆ. ಕೊಪ್ಪಳದಲ್ಲಿ ಈ ಚಿತ್ರದ ಮುಹೂರ್ತ ಶುಕ್ರವಾರ (ಫೆ.20) ನಡೆಯಿತು. [ಸ್ಯಾಂಡಲ್ ವುಡ್ ಗೆ 'ಢುಂಢಿ' ಯೋಗೇಶ್ ಮಾಸ್ಟರ್]
ಬಸವರಾಜ ಕೊಪ್ಪಳ ಅವರು ನಾಯಕ ನಟರಾಗಿ ಅಭಿನಯಿಸುವ ಜೊತೆಗೆ ನಿರ್ದೇಶನದ ಜವಾಬ್ದಾರಿಯನ್ನೂ ಹೊತ್ತಿದ್ದಾರೆ. ಈ ಚಿತ್ರದಲ್ಲಿ ಯೋಗೀಶ್ ಮಾಸ್ಟರ್ ಅವರು ಪೋಷಕ ಪಾತ್ರದಲ್ಲಿ ಕಾಣಿಸಲಿದ್ದಾರೆ. ಈ ವರ್ಷಾಂತ್ಯಕ್ಕೆ ಚಿತ್ರದ ತೆರೆಕಾಣುವ ಸಾಧ್ಯತೆಗಳಿವೆ.
ಇನ್ನು ಪ್ರೀತಿ ಪ್ಯಾರ್ ಮತ್ತು ಲವ್ ಚಿತ್ರದ ವಿಚಾರಕ್ಕೆ ಬಂದರೆ, ಇದೊಂದು ಮೂರು ವೆರೈಟಿ ಪ್ರೀತಿಯ ಕಥೆ. ಹಿಂದೂ, ಮುಸ್ಲಿಂ ಹಾಗೂ ಕ್ರಿಶ್ಚಿಯನ್ ಸಮುದಾಯದ ಮೂರು ಯುವ ಜೋಡಿಗಳ ಮೂರು ಡಿಫೆರೆಂಟ್ ಲವ್ ಸ್ಟೋರಿ ಹೊಂದಿರುವ ಈ ಚಿತ್ರ. ಕಥೆ, ಚಿತ್ರಕಥೆ, ಸಂಭಾಷಣೆಗಳನ್ನು ಯೋಗೇಶ್ ಮಾಸ್ಟರ್ ಹಾಗೂ ಕೃಷ್ಣ ರಚಿಸಿದ್ದಾರೆ. (ಏಜೆನ್ಸೀಸ್)