ಯಧ್ಬಾವಂ ತದ್ಭವತಿ; ಪಾರ್ವತಮ್ಮ ಒಳ್ಳೆ ಉದ್ದೇಶವನ್ನು ಅಂದು ತಪ್ಪಾಗಿ ಅರ್ಥೈಸಿಕೊಂಡಿದ್ರಾ ದರ್ಶನ್?

ನಟ ದರ್ಶನ್ ಕೊಲೆ ಪ್ರಕರಣದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ಇದರ ಬೆನ್ನಲ್ಲೇ ಈ ಹಿಂದಿನ ಹಲವು ಘಟನೆಗಳಲ್ಲಿ ದರ್ಶನ್ ನಡೆ ಹೇಗಿತ್ತು ಎನ್ನುವ ಬಗ್ಗೆ ಚರ್ಚೆಯಾಗುತ್ತಿದೆ. ಈ ಹಿಂದೆ ದರ್ಶನ್ ನಮಗೆ ಬೆದರಿಸಿದ್ದರು ಎಂದು ಕೆಲವರು ಆರೋಪಿಸಿದ್ದಾರೆ. ಚಿತ್ರರಂಗದಲ್ಲಿ ದರ್ಶನ್ ಆರಂಭದ ದಿನಗಳ ಬಗ್ಗೆ ನಿರ್ದೇಶಕ ಪ್ರಕಾಶ್ ರಾಜ್ ಮೇಹು ಇಂಟ್ರೆಸ್ಟಿಂಗ್ ವಿಚಾರ ಹೇಳಿದ್ದಾರೆ.

ನೀನಾಸಂನಲ್ಲಿ ಕಲಿತು ಬಂದವರು ಪ್ರಕಾಶ್ ರಾಜ್ ಮೇಹು. ಡಾ. ರಾಜ್‌ಕುಮಾರ್ ಕುಟುಂಬಕ್ಕೆ ಬಹಳ ಆಪ್ತರಾಗಿದ್ದರು. ದೊಡ್ಮನೆಯ ಸಾಕಷ್ಟು ಸಿನಿಮಾಗಳಲ್ಲಿ ಅವರು ಕೆಲಸ ಮಾಡಿದ್ದಾರೆ. ಅಣ್ಣಾವ್ರು, ವರದಪ್ಪ ಜೊತೆ ಬಹಳ ದಿನಗಳ ಕಾಲ ಒಡನಾಟ ಇಟ್ಟುಕೊಂಡಿದ್ದವರು. ದೊಡ್ಮನೆಯವರನ್ನು ಹತ್ತಿರದಿಂದ ಬಲ್ಲವರು. ನಟ ದರ್ಶನ್ ಸಹ ಪೂರ್ಣಿಮಾ ಎಂಟರ್‌ಪ್ರೈಸಸ್ ಬ್ಯಾನರ್‌ನಲ್ಲಿ ಕ್ಯಾಮರಾ ಅಸಿಸ್ಟೆಂಟ್ ಆಗಿ ಕೆಲಸ ಮಾಡಿದ್ದರು.

Did Parvathamma think that Darshan would be a competitor to Puneeth Rajkumar Prakash Raj Mehu recalls

'ಜನುಮದ ಜೋಡಿ' ಚಿತ್ರಕ್ಕೆ ಛಾಯಾಗ್ರಾಹಕ ಗೌರಿ ಶಂಕರ್ ಜೊತೆ ದರ್ಶನ್ ಸಹಾಯಕರಾಗಿ ದುಡಿದಿದ್ದರು. ಆ ಸಮಯದಲ್ಲಿ ನಡೆದ ಘಟನೆಯನ್ನು ನಿರ್ದೇಶಕ ಪ್ರಕಾಶ್ ರಾಜ್ ಮೇಹು ನೆನಪಿಸಿಕೊಂಡಿದ್ದಾರೆ. ಫೇಸ್‌ಬುಕ್‌ನಲ್ಲಿ ಈ ಬಗ್ಗೆ ಬರೆದುಕೊಂಡಿದ್ದಾರೆ. "ಯಧ್ಬಾವಂ ತದ್ಭವತಿ.. ನಾನು 'ಜನುಮದ ಜೋಡಿ' ಚಿತ್ರದ ನಿರ್ದೇಶನ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೆ, ದರ್ಶನ್ ಅದೇ ಸಿನಿಮಾದಲ್ಲಿ ಛಾಯಾಗ್ರಹಕರಾದ ಬಿ. ಸಿ ಗೌರಿಶಂಕರ್ ಅವರ ಸಹಾಯಕರಾಗಿ ಕೆಲಸ ಮಾಡುತ್ತಿದ್ದರು. (ಎಲ್ಲಾ ಕಡೆ ನಾನು ಲೈಟ್ ಬಾಯ್ ಆಗಿ ಕೆಲಸ ಮಾಡುತ್ತಿದ್ದೆ, ಲೈಟ್‌ಗಳನ್ನು ಎತ್ತುತ್ತಿದ್ದೆ ಅಂತ ಹೇಳಿಕೊಳ್ಳುತ್ತಾರೆ ಅದು ಸುಳ್ಳು, ಕ್ಯಾಮೆರಾಮೆನ್ ಅಸ್ಟೆಂಟ್ ಬೇರೆ, ಲೈಟ್ ಬಾಯ್ಸ್ ಬೇರೆ)

"ನಾನು ನೀನಾಸಂನಲ್ಲಿ ಕೋರ್ಸ್ ಮುಗಿಸಿಕೊಂಡು ಚಿತ್ರರಂಗಕ್ಕೆ ಬಂದಿದ್ದೆ, ದರ್ಶನ್ ಸಹ ಅದೇ ಸ್ಕೂಲ್ನಿಂದ ಬಂದಿದ್ದರು, ನನಗಿಂತ ಎರಡು-ಮೂರು ವರ್ಷ ಜೂನಿಯರ್. ಹಾಗಾಗಿ ನಮ್ಮಿಬ್ಬರ ನಡುವೆ ಆ ಒಂದು ಸೆಂಟಿಮೆಂಟಲ್ ಅಟ್ಯಾಚ್ಮೆಂಟ್ ಇತ್ತು. 'ಜನುಮದ ಜೋಡಿ' ಸಿನಿಮಾ ಬಿಡುಗಡೆಯಾಗಿ ಸೂಪರ್-ಡೂಪರ್ ಹಿಟ್ಟಾಗಿತ್ತು ಆ ಸಮಯಕ್ಕೆ ಭಾರತಕ್ಕೆ Zimmi Zib ಅನ್ನುವ ಒಂದು ಕ್ಯಾಮೆರಾ ಯಂತ್ರ ಹೊಸದಾಗಿ ಬಂದಿತ್ತು ಅದನ್ನು ವಜ್ರೇಶ್ವರಿಗೆ ತರಿಸಬೇಕೆನ್ನುವುದು ಅಪ್ಪು ಅವರ ಆಸೆಯಾಗಿತ್ತು"

Did Parvathamma think that Darshan would be a competitor to Puneeth Rajkumar Prakash Raj Mehu recalls

"ಪಾರ್ವತಮ್ಮ ಅವರು ಆ ಕ್ಯಾಮೆರಾ ತರಿಸುವ ನಿರ್ಧಾರ ಮಾಡಿ ಅದರ ಬಗ್ಗೆ ಮಾಹಿತಿ ಪಡೆದರು. ಆ Zimmi ಯನ್ನು ಮಾಮೂಲಿ ಕ್ಯಾಮೆರಾಮನ್‌ಗಳು ಆಪರೇಟ್ ಮಾಡಲು ಸಾಧ್ಯವಿಲ್ಲ ಅದಕ್ಕೇ ಸಪರೇಟಾಗಿ ಟ್ರೈನಿಂಗ್ ಆಗಬೇಕು ಅದಕ್ಕಾಗಿ ಬಾಂಬೆಯಲ್ಲಿ ಮೂರು ತಿಂಗಳೋ, ಆರು ತಿಂಗಳೋ ಟ್ರೈನಿಂಗ್ ಕೊಡಲಾಗುವುದು ಅನ್ನುವ ವಿಷಯ ತಿಳಿದ ಅಮ್ಮ, ಕ್ಯಾಮೆರಾ ಡಿಪಾರ್ಟ್ಮೆಂಟ್ನಲ್ಲಿ ಕೆಲಸ ಮಾಡುತ್ತಿದ್ದ ದರ್ಶನ್ ಅವರನ್ನು ಕರೆಸಿ ಜಿಮ್ಮಿ ವಿಷಯ ಹೇಳಿ, "ಬಾಂಬೆಗೆ ಕಳುಹಿಸಿಕೊಡುತ್ತೇನೆ, ತರಬೇತಿ ಪಡೆದು ಬಂದು ಆ ಜಿಮ್ಮಿಯನ್ನು ನೀನೆ ನೋಡಿಕೋ" ಅಂತ ಹೇಳಿದರು."

"ಅಮ್ಮ ಅವರ ಉದ್ದೇಶ ದರ್ಶನ್ ಅವರಿಗೆ ಒಂದು ಉದ್ಯೋಗ ಆಗಲಿ ಅನ್ನುವುದಾಗಿತ್ತೆ ವಿನಃ ಮತ್ತೇನೂ ಅಲ್ಲ. ದರ್ಶನ್ ಅದನ್ನು ಒಪ್ಪಲಿಲ್ಲ! ಅದು ಅವರಿಷ್ಟ, ಅದರಲ್ಲೇನು ತಪ್ಪಿಲ್ಲ. ಮುಂದೆ ದರ್ಶನ್ ಹೀರೋ ಆದರು, ಸ್ಟಾರ್ ಆದರು ಸಂತೋಷ. ಆದರೆ ಮೇಲಿನ ವಿಷಯದ ಬಗ್ಗೆ ದರ್ಶನ್ ಹೇಳಿಕೊಳ್ಳುತ್ತಿದ್ದದ್ದು ಏನು ಗೊತ್ತೆ? "ತನ್ನ ಮಗ ಪುನೀತ್ ಗೆ ಇವನು ಪ್ರತಿಸ್ಪರ್ಧಿ ಆಗುತ್ತಾನೆ ಅದನ್ನು ತಪ್ಪಿಸಿ, ನನ್ನನ್ನು ಜಿಮ್ಮಿ ಆಪರೇಟರ್ ಮಾಡಲು ಪ್ಲಾನ್ ಮಾಡಿದ್ದರು, ನಾನು ತಪ್ಪಿಸಿಕೊಂಡೆ" ಅಂತ"

"ಮುಂದೆ ಅಪ್ಪು ಸ್ಟಾರ್ ಆಗುತ್ತಾನೆ, ದರ್ಶನ್ ಅವನ ಪ್ರತಿಸ್ಪರ್ಧಿಯಾಗುತ್ತಾನೆ ಅಂತ ಪಾರ್ವತಮ್ಮನವರು ಕನಸು ಕಂಡಿದ್ದರೆ? ಏನೋ ಅವನ ಜೀವನೋಪಾಯಕ್ಕೆ ಒಂದು ದಾರಿಯಾಗಲಿ ಅನ್ನುವ ಒಳ್ಳೆಯ ಉದ್ದೇಶದಿಂದ ಹೇಳಿದ ಮಾತನ್ನು ಈ ರೀತಿ ಗ್ರಹಿಸಿಲಾಗಿತ್ತು" ಎಂದು ಪ್ರಕಾಶ್ ರಾಜ್ ಮೇಹು ಆ ಘಟನೆಯನ್ನು ನೆನಪಿಸಿಕೊಂಡಿದ್ದಾರೆ.

More from Filmibeat

English summary
Director Prakash raj mehu recalls Parvathamma Rajkumar job offer to Darshan;
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X