Don't Miss!
- News ಲೋಕಸಭೆ ಚುನಾವಣೆ: ಕಲಬುರಗಿ ಮತದಾರರು, ವಿಧಾನಸಭಾ ಕ್ಷೇತ್ರ ಮಾಹಿತಿ
- Automobiles Mahindra Bolero: ಅಪಘಾತವಾದ ಕಾರಿಗೆ ಅದ್ದೂರಿ ಮಾಡಿಫಿಕೇಷನ್: ವಿಡಿಯೋಗೆ ವಾವ್ ಎನ್ನಲೇಬೇಕು!
- Lifestyle ನಿಮಗೆ ಬೀಳುವ ಕನಸುಗಳ ಹಿಂದಿರುವ ಅರ್ಥ, ಉದ್ದೇಶವೇನು ಗೊತ್ತಾ?
- Finance ನೀರಿನ ಬಿಕ್ಕಟ್ಟು: ಬೆಂಗಳೂರು ತೊರೆಯಲು ಮುಂದಾದ ಅನೇಕ ನಿವಾಸಿಗಳು!
- Technology ಇಂದು ಒನ್ಪ್ಲಸ್ನ ಈ ಸ್ಪೆಷಲ್ ಮೊಬೈಲ್ನ ಫಸ್ಟ್ ಸೇಲ್!..ಬೆಲೆ ಎಷ್ಟು ಅಂತೀರಾ?
- Sports ಆರ್ಸಿಬಿ ಸ್ಟಾರ್ ಶ್ರೇಯಾಂಕಾ ಪಾಟೀಲ್ ಬಗ್ಗೆ ನಿಮಗೆಷ್ಟು ಗೊತ್ತು?; ಶಿಕ್ಷಣ, ವಯಸ್ಸು, ಕೌಟುಂಬಿಕ ಹಿನ್ನೆಲೆ ಬಗ್ಗೆ ಮಾಹಿತಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಹೊಸ ಕಥೆಯಲ್ಲಿ ಶ್ರೀ ರಾಮನಾದ ದೂದ್ ಪೇಡಾ ದಿಗಂತ್
'ಕಥೆಯೊಂದು ಶುರುವಾಗಿದೆ' ಸಿನಿಮಾ ಸಕ್ಸಸ್ ನಲ್ಲಿರುವ ನಟ ದಿಗಂತ್ ಅಭಿಮಾನಿಗಳಿಗೆ ತಮ್ಮ ಹೊಸ ಸಿನಿಮಾ ಬಗ್ಗೆ ಮಾಹಿತಿ ನೀಡಿದ್ದಾರೆ. 'ಕಥೆಯೊಂದು ಶುರುವಾಗಿದೆ' ಚಿತ್ರದ ಬಗ್ಗೆ ಪ್ರೇಕ್ಷಕರು ಮೆಚ್ಚುಗೆ ವ್ಯಕ್ತ ಪಡಿಸುತ್ತಿರುವ ಬೆನ್ನಲ್ಲೆ ದಿಗಂತ್ ಶ್ರೀ ರಾಮನಾಗಿ ಅಭಿಮಾನಿಗಳ ಮುಂದೆ ಬರಲಿದ್ದಾರೆ.
ಬಾಲಿವುಡ್ ನ ನಿರ್ದೇಶಕ ಕುನಾಲ್ ಕೊಹ್ಲಿ ರಾಮಾಯಣವನ್ನಿಟ್ಟುಕೊಂಡು ಹೊಸ ಸಿನಿಮಾ ಮಾಡುತ್ತಿದ್ದಾರೆ. 'ಫನಾ', 'ಹಮ್ ತುಮ್', ಸಿನಿಮಾ ನಿರ್ದೇಶಿಸಿದ್ದ ಕುನಾಲ್ ಕೊಹ್ಲಿ, ಈ ಬಾರಿ ಪೌರಾಣಿಕ ನಿರ್ದೇಶನ ಮಾಡಲು ಸಜ್ಜಾಗಿದ್ದಾರೆ.
ಕಥೆಯೊಂದು ಶುರುವಾಗಿದೆ ವಿಮರ್ಶಕರ ಮನಸ್ಸು ಗೆಲ್ಲುವಲ್ಲಿ ಯಶಸ್ವಿ ಆಯ್ತಾ?
ಶ್ರೀ ರಾಮನ ಪಾತ್ರಕ್ಕೆ ದಿಗಂತ್ ಸೂಕ್ತವಾದ ಆಯ್ಕೆ ಎಂದು ತಿಳಿದಿರುವ ನಿರ್ದೇಶಕರು ಈ ಬಗ್ಗೆ ಕೆಲವೇ ದಿನಗಳಲ್ಲಿ ಅಧಿಕೃತವಾಗಿ ಮಾಹಿತಿ ಹೊರ ಹಾಕಲಿದ್ದಾರಂತೆ.
ಎರಡು ಭಾಗಗಳಲ್ಲಿ ಸಿನಿಮಾ ಬಿಡುಗಡೆ ಆಗಲಿದ್ದು ಇನ್ನು ಕೆಲವೇ ದಿನಗಳಲ್ಲಿ ಚಿತ್ರೀಕರಣ ಶುರುವಾಗಲಿದ್ಯಂತೆ. ಈಗಾಗಲೇ ಬಾಲಿವುಡ್ ನ ಚಿತ್ರಗಳಲ್ಲಿ ಅಭಿನಯ ಮಾಡಿ ಭರವಸೆ ಮೂಡಿಸಿರುವ ದಿಗಂತ್ ರಾಮನ ಪಾತ್ರದಲ್ಲಿ ಹೇಗೆ ಕಾಣಿಸಿಕೊಳ್ಳುತ್ತಾರೆ ಎನ್ನುವುದೇ ಅಭಿಮಾನಿಗಳ ಕುತೂಹಲ.