ಡಿಂಪಲ್ ಸ್ಟಾರ್ ದಿಗಂತ್ 'ಒಂದೂರಲ್ಲಿ ಒಬ್ಬ ರಾಜ ಇದ್ದ'
ಮೀನಾತೂಗುದೀಪ ಶ್ರೀನಿವಾಸ್ ಈ ಚಿತ್ರದ ನಿರ್ಮಾಪಕರು. 'ಬುಲ್ ಬುಲ್' ಚಿತ್ರದ ಮೂಲಕ ತಂತ್ರಜ್ಞರನ್ನು ನಿರ್ಮಾಪಕರನಾಗಿ ಮಾಡಿದ ಖ್ಯಾತಿ ತೂಗುದೀಪ ಪ್ರೊಡಕ್ಷನ್ಸ್ ಸಂಸ್ಥೆಯದು. ಈ ಚಿತ್ರದ ಮೂಲಕ ಮಲ್ಲಿಕಾರ್ಜುನ್.ಬಿ.ಸಂಕನಗೌಡರ, ಚಿಂತನ್ ಹಾಗೂ ಶ್ರೀನಿವಾಸ್ ನಿರ್ಮಾಪಕರಾಗುತ್ತಿದ್ದಾರೆ.
'ಜೊತೆಜೊತೆಯಲಿ', 'ನವಗ್ರಹ' ಹಾಗೂ 'ಸಾರಥಿ'ಯಂತಹ ಯಶಸ್ವಿ ಚಿತ್ರಗಳನ್ನು ನಿರ್ದೇಶಿಸಿದ್ದ ದಿನಕರ್ ತೂಗುದೀಪ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಆಗಸ್ಟ್ ನಿಂದ ಆರಂಭವಾಗುವ ಈ ಚಿತ್ರಕ್ಕೆ ಮೂರು ಹಂತಗಳಲ್ಲಿ ಚಿತ್ರೀಕರಣ ನಡೆಯಲಿದೆ.
ಡಿಂಪಲ್ ಸ್ಟಾರ್ ದಿಗಂತ್ ಈ ಚಿತ್ರದ ನಾಯಕರಾಗಿದ್ದು, ರಚಿತಾ ರಾಮ್ (ಬುಲ್ ಬುಲ್) ನಾಯಕಿಯಾಗಿ ಅಭಿನಯಿಸುತ್ತಿದ್ದಾರೆ. ಉಳಿದ ತಾರಾಬಳಗದ ಆಯ್ಕೆ ನಡೆಯುತ್ತಿದೆ. ವಿ.ಹರಿಕೃಷ್ಣರ ಸಂಗೀತ ನಿರ್ದೇಶನವಿದೆ. (ಬುಲ್ ಬುಲ್ ಚಿತ್ರ ವಿಮರ್ಶೆ ಓದಿ)
ಈ ಚಿತ್ರಕ್ಕೆ ಕೆ.ಎಂ.ಪ್ರಕಾಶ್ ಸಂಕಲನಕಾರರಾಗಿದ್ದಾರೆ. ಮಲ್ಲಿಕಾರ್ಜುನ್.ಬಿ.ಸಂಕನಗೌಡರ ಸಹ ನಿರ್ದೇಶನವಿರುವ 'ಒಂದೂರಲ್ಲಿ ಒಬ್ಬ ರಾಜ ಇದ್ದ' ಚಿತ್ರಕ್ಕೆ ಚಿಂತನ್ ಸಂಭಾಷಣೆ ಬರೆಯುತ್ತಿದ್ದಾರೆ. (ಒನ್ಇಂಡಿಯಾ ಕನ್ನಡ)


Click it and Unblock the Notifications












