Don't Miss!
- Automobiles ಬೈಕಿನಂತೆ ಮೈಲೇಜ್, ಹಿಂದೆಗಿಂತಲೂ ಬಲಿಷ್ಠವಾಗಿ ಸ್ವಿಫ್ಟ್ ಅಖಾಡಕ್ಕೆ: ಖರೀದಿಸಲು ಕ್ಯೂ ನಿಲ್ಲಲು ರೆಡಿಯಾಗಿರಿ!
- News Bengaluru Rain: ಮುದ್ದಿನ ನಾಯಿಮರಿಗೆ ಮೊದಲ ಮಳೆ ತೋರಿಸಿ ಖುಷಿ ಪಟ್ಟ ವ್ಯಕ್ತಿ; ವಿಡಿಯೋ ವೈರಲ್
- Lifestyle ಮಕ್ಕಳಲ್ಲಿ ಮಲೇರಿಯಾ: ಹೇಗೆ ಬರುತ್ತದೆ, ಇದರ ಲಕ್ಷಣಗಳೇನು? ತಡೆಗಟ್ಟುವುದು ಹೇಗೆ?
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Sports IPL 2024: ಎಸ್ಆರ್ಹೆಚ್ ಸಂಘಟಿತ ಆಟಕ್ಕೆ ಬ್ರೇಕ್ ಹಾಕಲು ಆರ್ಸಿಬಿ ಏನು ಮಾಡಬೇಕು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಚಂದನವನದಲ್ಲಿ ರಂಗೇರಿದ ದಿನಕರ್ ಸೆಲ್ಫಿ ಕ್ರೇಜ್
ಎಲ್ಲೆಲ್ಲೂ ಸೆಲ್ಫಿಯದ್ದೇ ಹವಾ... ಅದುವೇ ದಿನಕರ್ ತೂಗುದೀಪ ನಿರ್ದೇಶನದ 'ಲೈಫ್ ಜೊತೆ ಒಂದ್ ಸೆಲ್ಫಿ' ಚಿತ್ರದ್ದು. ಇತ್ತೀಚೆಗೆ ಚಿತ್ರತಂಡ ಸೆಲ್ಫಿ ಅಭಿಯಾನವನ್ನೇ ಪ್ರಾರಂಭಿಸಿದ್ದು ವಿಶೇಷ.
'ಜೊತೆ ಜೊತೆಯಲಿ', 'ನವಗ್ರಹ', 'ಸಾರಥಿ'ಯಂತಹ ಬಿಗ್ ಹಿಟ್ ಹಾಗೂ ಸದಭಿರುಚಿಯ ಚಿತ್ರಗಳನ್ನು ನೀಡಿದ ದಿನಕರ್ ಗೆ ಇದು ತಮ್ಮ ನಿರ್ದೇಶನದ ನಾಲ್ಕನೇ ಚಿತ್ರ. ಚಿತ್ರಕ್ಕೆ ಸಮೃದ್ಧಿ ಮಂಜುನಾಥ್ ಅವರು ಬಂಡವಾಳ ಹೂಡಿದ್ದಾರೆ.
ಪ್ರಜ್ವಲ್ ದೇವರಾಜ್, ನೆನಪಿರಲಿ ಪ್ರೇಮ್ ಹಾಗೂ ಹರಿಪ್ರಿಯ ಮುಖ್ಯ ಭೂಮಿಕೆಯಲ್ಲಿರುವ ಚಿತ್ರಕ್ಕೆ ಎ.ಆರ್.ನಿರಂಜನ್ ಬಾಬು ರವರ ಅದ್ಭುತ ಛಾಯಾಗ್ರಹಣವಿದೆ.
ದರ್ಶನ್ ಸಹೋದರ ದಿನಕರ್ ದಂಪತಿಗೆ ಇಂದು ಮರೆಯಲಾಗದ ದಿನ
ಕವಿರಾಜ್, ಜಯಂತ್ ಕಾಯ್ಕಿಣಿ, ಯೋಗರಾಜ್ ಭಟ್ ಹಾಗೂ ವಿ.ನಾಗೇಂದ್ರ ಪ್ರಸಾದ ಅವರ ಸಾಹಿತ್ಯಕ್ಕೆ ವಿ.ಹರಿಕೃಷ್ಣ ಸಂಗೀತ ಸಂಯೋಜನೆ ಮಾಡಿದ್ದಾರೆ. ಈಗಾಗಲೇ ಚಿತ್ರದ ಎಲ್ಲಾ ಹಾಡುಗಳಿಗೆ ಉತ್ತಮ ಪ್ರತಿಕ್ರಿಯೆ ದೊರೆತಿದ್ದು ಚಿತ್ರತಂಡ ಸಂತೋಷದಿಂದ ಸೆಲ್ಫಿ ಅಭಿಯಾನ ಮುಂದುವರೆಸಿದೆ.
ಮಾನಸ ದಿನಕರ್ ಚಿತ್ರಕ್ಕೆ ಕಥೆ ಬರೆದಿದ್ದು, ಚಿಂತನ್ ರ ಸಂಭಾಷಣೆ ಹಾಗೂ ಕೆ.ಎಂ.ಪ್ರಕಾಶ್ ರ ಸಂಕಲನವಿದೆ.
ಹಲವು ಕಾರಣಗಳಿಂದಾಗಿ ಚಿತ್ರವು ಕುತೂಹಲಭರಿತವಾಗಿದ್ದು ಎಲ್ಲ ವರ್ಗದ ಪ್ರೇಕ್ಷಕರ ಮನಸ್ಸನ್ನು ಸೆಳೆಯಲು ನಿಮ್ಮ ನೆಚ್ಚಿನ ಚಿತ್ರಮಂದಿರಗಳಿಗೆ ಅತೀಶೀಘ್ರದಲ್ಲಿ ಬರಲಿದೆ. ಚಿತ್ರತಂಡಕ್ಕೆ ಶುಭವಾಗಲಿ.