Don't Miss!
- News Petrol Price: ಇಂದಿನ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ವಿವರ ತಿಳಿಯಿರಿ
- Finance ಎಂಡಿಎಚ್ ಮತ್ತು ಎವರೆಸ್ಟ್ ಸೇರಿದಂತೆ ಎಲ್ಲಾ ಬ್ರಾಂಡ್ ಮಸಾಲೆಗಳ ಮಾದರಿಗಳ ಪರೀಕ್ಷೆಗೆ ಮುಂದಾದ FSSAI
- Sports CSK vs LSG IPL 2024: ಐಪಿಎಲ್ನಲ್ಲಿ ಈ ದಾಖಲೆ ಮಾಡಿದ ಮೊದಲ ಸಿಎಸ್ಕೆ ನಾಯಕ ರುತುರಾಜ್ ಗಾಯಕ್ವಾಡ್
- Lifestyle ಈ ಕಾರಣಕ್ಕೆ ನೀವು ಮಾವಿನ ಹಣ್ಣನ್ನು ನೀರಿನಲ್ಲಿ ನೆನೆಹಾಕಿಯೇ ತಿನ್ನಬೇಕು, ಅದು ನಿಮ್ಮ ತೋಟದಲ್ಲಿ ಬೆಳೆದಿದ್ದೇ ಆಗಿರಲಿ
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಪ್ರಜ್ವಲ್ ಮೇಲಿನ ಆರೋಪಕ್ಕೆ ಸ್ಪಷ್ಟನೆ ಕೊಟ್ಟ ದಿನಕರ್
ಸೆಪ್ಟೆಂಬರ್ 27 ರಾತ್ರಿ ಸೌಂತ್ ಎಂಡ್ ವೃತ್ತದಲ್ಲಿ ನಡೆದ ಅಪಘಾತದಲ್ಲಿ, ಉದ್ಯಮಿ ಆದಿಕೇಶವುಲು ಮೊಮ್ಮಗ ವಿಷ್ಣು ಅವರ ನಟ ಪ್ರಜ್ವಲ್ ದೇವರಾಜ್ ಮತ್ತು ದಿಗಂತ್ ಇದ್ದರು ಎಂಬ ಆರೋಪ ಕೇಳಿ ಬಂದಿತ್ತು.
ಇದಕ್ಕೆ ಸ್ವತಃ ಪ್ರಜ್ವಲ್ ದೇವರಾಜ್ ಮತ್ತು ದಿಗಂತ್ ಸ್ಪಷ್ಟನೆ ನೀಡಿದ್ದರು. ದಿಗಂತ್ ಕನಕಪುರದಲ್ಲಿ ಚಿತ್ರವೊಂದರ ಶೂಟಿಂಗ್ ನಲ್ಲಿದ್ದರೇ, ಪ್ರಜ್ವಲ್ ಗೋವಾದಲ್ಲಿ 'ಲೈಫ್ ಜೊತೆ ಸೆಲ್ಫಿ' ಚಿತ್ರದಲ್ಲಿ ತೊಡಗಿಕೊಂಡಿದ್ದಾರೆ ಎಂದು ಹೇಳಿದ್ದರು.
ಇದೀಗ, ಈ ಪ್ರಕರಣ ಮತ್ತು ಇಬ್ಬರು ನಟರ ವಿರುದ್ಧ ಬಂದಿರುವ ಆರೋಪದ ಬಗ್ಗೆ ನಿರ್ದೇಶಕ ದಿನಕರ್ ತೂಗುದೀಪ್ ಮಾತನಾಡಿದ್ದಾರೆ. ಏನಂದ್ರು ಎಂದು ತಿಳಿಯಲು ಮುಂದೆ ಓದಿ.....
ಸೆಪ್ಟೆಂಬರ್ 26 ರಿಂದ ಗೋವಾದಲ್ಲಿದ್ದೀವಿ
ಸೆಪ್ಟೆಂಬರ್ 26 ರಿಂದ ನಾವೆಲ್ಲಾ ಗೋವಾದಲ್ಲಿ ಶೂಟಿಂಗ್ ಮಾಡುತ್ತಿದ್ದೀವಿ. ಅಕ್ಟೋಬರ್ 10ರ ವರೆಗೂ ಅಲ್ಲೇ ಚಿತ್ರೀಕರಣ ಮಾಡಲಿದ್ದೀವಿ ಎಂದು ನಿರ್ದೇಶಕ ದಿನಕರ್ ತೂಗುದೀಪ ತಿಳಿಸಿದ್ದಾರೆ.
ಅಪಘಾತ, ಡ್ರಗ್ಸ್ ಆರೋಪಕ್ಕೆ ಪ್ರಜ್ವಲ್ ದೇವರಾಜ್, ದಿಗಂತ್ ಸ್ಪಷ್ಟನೆ
ಪ್ರಜ್ವಲ್ ನನ್ನ ಜೊತೆಯಲ್ಲಿದ್ದರು
ಈ ಘಟನೆ ನಡೆದ ದಿನ ರಾತ್ರಿ 8 ಗಂಟೆವರೆಗೂ ಮತ್ತು ಬೆಳಿಗ್ಗೆ 10 ಗಂಟೆಯಿಂದ ನನ್ನ ಜೊತೆಯಲ್ಲೇ ಶೂಟಿಂಗ್ ನಲ್ಲಿದ್ದರು'' - ದಿನಕರ್ ತೂಗುದೀಪ್, ನಿರ್ದೇಶಕ
ಡ್ರಗ್ಸ್ ಆರೋಪ ನಿರಾಕರಿಸಿದ ನಟ ದಿಗಂತ್
ಇದೆಲ್ಲಾ ಸುಳ್ಳು ಸುದ್ದಿ
ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿರುವುದೆಲ್ಲಾ ಸುಳ್ಳು ಸುದ್ದಿ. ಆ ಅಪಘಾತಕ್ಕೂ ಪ್ರಜ್ವಲ್ ದೇವರಾಜ್ ಗೂ ಯಾವುದೇ ಸಂಬಂಧವಿಲ್ಲ ಎಂದು 'ಲೈಫ್ ಜೊತೆ ಒಂದು ಸೆಲ್ಫಿ' ಚಿತ್ರದ ನಿರ್ದೇಶಕ ದಿನಕರ್ ವಿಡಿಯೋ ಮೂಲಕ ಸ್ಪಷ್ಟಪಡಿಸಿದ್ದಾರೆ.
ಗೋವಾದಲ್ಲಿ ಶೂಟಿಂಗ್
ದಿನಕರ್ ತೂಗುದೀಪ ನಿರ್ದೇಶನ ಮಾಡುತ್ತಿರುವ ಈ ಚಿತ್ರದಲ್ಲಿ ಲವ್ಲಿ ಸ್ಟಾರ್ ಪ್ರೇಮ್, ನಟಿ ಹರಿಪ್ರಿಯಾ, ನಟ ಪ್ರಜ್ವಲ್ ದೇವ್ ರಾಜ್ ಈ ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ.
ದಿನಕರ್ ತೂಗುದೀಪ ಅವರು ಮಾತನಾಡಿರುವ ವಿಡಿಯೋ ಇಲ್ಲಿದೆ