Don't Miss!
- Finance Zero Shadow Day: ಬೆಂಗಳೂರಿನಲ್ಲಿ ಇಂದು ಪ್ರಕೃತಿಯ ಅಚ್ಚರಿ
- News ರಾಜ್ಯದ ವಿವಿಧೆಡೆ ವರುಣದೇವನ ಆರ್ಭಟ; ಕರ್ನಾಟಕದ ಪ್ರಮುಖ ಡ್ಯಾಂಗಳ ನೀರಿನ ಮಟ್ಟ ಎಷ್ಟು ?
- Technology ಇಂದು ವಿವೋ T3x 5G ಸ್ಮಾರ್ಟ್ಫೋನ್ ಫಸ್ಟ್ ಸೇಲ್; ಬೆಲೆ 13,499ರೂ.!
- Automobiles Triber: 7 ಜನ ಹೋಗಬಹುದಾದ ರೆನಾಲ್ಟ್ ಟ್ರೈಬರ್ ಖರೀದಿಸಬೇಕೇ.. ಆನ್-ರೋಡ್ ಬೆಲೆ ಎಷ್ಟು, EMI ಏನು?
- Lifestyle ಹೋಟೆಲ್ ರುಚಿಯ ಪನೀರ್ ಪೆಪ್ಪರ್ ಫ್ರೈ ಮನೆಯಲ್ಲೇ ಮಾಡಿ..! 10 ನಿಮಿಷದಲ್ಲಿ ರೆಡಿ..!
- Sports CSK vs LSG IPL 2024: ಐಪಿಎಲ್ನಲ್ಲಿ ಈ ದಾಖಲೆ ಮಾಡಿದ ಮೊದಲ ಸಿಎಸ್ಕೆ ನಾಯಕ ರುತುರಾಜ್ ಗಾಯಕ್ವಾಡ್
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ದಿನಕರ್ ದಂಪತಿಯ ಈ ಬಾರಿಯ ವಿವಾಹ ವಾರ್ಷಿಕೋತ್ಸವ ತುಂಬ ವಿಶೇಷ
Recommended Video
ನಟ ತೂಗುದೀಪ ಶ್ರೀನಿವಾಸ್ ಅವರ ಪುತ್ರ ಹಾಗೂ ದರ್ಶನ್ ಅವರ ಸಹೋದರ ನಿರ್ದೇಶಕ ದಿನಕರ್ ತೂಗುದೀಪ್ ಜೀವನದಲ್ಲಿ ಇಂದು ಮರೆಯಲಾಗದ ದಿನ. ಕಾರಣ, ಇಂದು ದಿನಕರ್ ಹಾಗೂ ಮಾನಸ ದಂಪತಿ ತಮ್ಮ ವಿವಾಹ ವಾರ್ಷಿಕೋತ್ಸವದ ಸಂಭ್ರಮದಲ್ಲಿ ಇದ್ದಾರೆ.
2008 ಆಗಸ್ಟ್ 21 ರಂದು ದಿನಕರ್ ಮಾನಸ ಅವರ ಕೈ ಹಿಡಿದಿದ್ದರು. ಇಂದಿಗೆ ಈ ಜೋಡಿ ಹತ್ತನೇ ವರ್ಷದ ವಿವಾಹ ವಾರ್ಷಿಕೋತ್ಸವದ ಆಚರಿಸುತ್ತಿದ್ದಾರೆ. ಈ ಜೋಡಿಗೆ ಇಬ್ಬರು ಮಕ್ಕಳಿದ್ದು, ಅವರದ್ದು ಸ್ವೀಟ್ ಫ್ಯಾಮಿಲಿಯಾಗಿದೆ. ಈ ಕುಟುಂಬಕ್ಕೆ ಅಭಿಮಾನಿಗಳು ಸಹ ಸಾಮಾಜಿಕ ಜಾಲತಾಣಗಳಲ್ಲಿ ಶುಭಾಶಯ ತಿಳಿಸುತ್ತಿದ್ದಾರೆ.
ದರ್ಶನ್ ಸಹೋದರ ದಿನಕರ್ ದಂಪತಿಗೆ ಇಂದು ಮರೆಯಲಾಗದ ದಿನ
ಈ ವರ್ಷ ಈ ಜೋಡಿಯ ವಿವಾಹ ವಾರ್ಷಿಕೋತ್ಸವ ತುಂಬಾನೇ ವಿಶೇಷವಾಗಿದೆ. ಏಕೆಂದರೆ, ಇವರಿಬ್ಬರ ಸಿನಿಮಾ ಇದೇ ಶುಕ್ರವಾರ ಬಿಡುಗಡೆಯಾಗುತ್ತಿದೆ. 'ಲೈಫ್ ಜೊತೆ ಒಂದ್ ಸೆಲ್ಫಿ' ಸಿನಿಮಾದ ಕಥೆಯನ್ನು ಮಾನಸ ಅವರು ಬರೆದಿದ್ದು, ಅದನ್ನು ದಿನಕರ್ ನಿರ್ದೇಶನ ಮಾಡಿದ್ದಾರೆ.
ಇದೇ ಕಾರಣಕ್ಕೆ ನೋಡಿ 'ತೂಗುದೀಪ ಮನೆತನ'ಕ್ಕೆ ಇಷ್ಟೊಂದು ಗೌರವ ಇರುವುದು!
2011ರಲ್ಲಿ ಬಂದ 'ಸಾರಥಿ' ಸಿನಿಮಾ ದಿನಕರ್ ನಿರ್ದೇಶನದ ಕೊನೆಯ ಸಿನಿಮಾ ಆಗಿತ್ತು. ಆದರೆ ಇದೀಗ ಏಳು ವರ್ಷಗಳ ನಂತರ ಮತ್ತೆ ದಿನಕರ್ ಡೈರೆಕ್ಷನ್ ಮಾಡಿದ್ದಾರೆ. ಈ ಸಿನಿಮಾದಲ್ಲಿ ಪ್ರಜ್ವಲ್ ದೇವರಾಜ್, ನೆನಪಿರಲಿ ಪ್ರೇಮ್ ಹಾಗೂ ಹರಿಪ್ರಿಯಾ ಲೀಡ್ ರೋಲ್ ನಲ್ಲಿ ನಟಿಸಿದ್ದಾರೆ.