Don't Miss!
- News ಲೋಕಸಭಾ ಚುನಾವಣೆ: ಕಾಂಗ್ರೆಸ್ ಸರ್ಕಾರದ ವಿರುದ್ಧ ಎಚ್ಡಿಕೆ ಮೇಕೆದಾಟು ಅಸ್ತ್ರ
- Sports DC vs GT IPL 2024: ಅಕ್ಷರ್, ಪಂತ್ ಭರ್ಜರಿ ಬ್ಯಾಟಿಂಗ್; ಗುಜರಾತ್ಗೆ ಸವಾಲಿನ ಗುರಿ ನೀಡಿದ ಡೆಲ್ಲಿ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Lifestyle 613 ದಿನ ಕೊರೊನಾ ವಿರುದ್ಧ ಹೋರಾಡಿ ವೃತಪಟ್ಟ ವ್ಯಕ್ತಿ..!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮೃತನ ಕುಟುಂಬಕ್ಕೆ ದರ್ಶನ್ ಪರ ದಿನಕರ್ ತೂಗುದೀಪ ಸಾಂತ್ವನ
ಚಾಲೆಂಜಿಂಗ್ ಸ್ಟಾರ್ ದರ್ಶನ್ ಹುಟ್ಟುಹಬ್ಬದ ದಿನ (ಫೆಬ್ರವರಿ 16) ಅವರ ಅಪ್ಪಟ ಅಭಿಮಾನಿ ಮಧು ಕುಮಾರ್ ಅಪಘಾತಕ್ಕೀಡಾಗಿ ಸಾವನ್ನಪ್ಪಿದ ಘಟನೆ ನಿಮಗೆಲ್ಲಾ ಗೊತ್ತಿರಬಹುದು.
ದರ್ಶನ್ ಹುಟ್ಟುಹಬ್ಬಕ್ಕೆ ಶುಭಾಶಯ ಕೋರಲು ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿರುವ ನಟ ದರ್ಶನ್ ಅವರ ಮನೆಗೆ ಮುಂಜಾನೆಯೇ ತಮ್ಮ ಗೆಳೆಯ ಸುಧಾಂಶು ಜೊತೆ ತೆರಳಿದ್ದ ಅಭಿಮಾನಿ ಮಧು ಕುಮಾರ್ ಬಳಿಕ ತಮ್ಮ ಮನೆಗೆ ವಾಪಸ್ ಆಗುತ್ತಿದ್ದ ವೇಳೆ ಕೊನೆಯುಸಿರೆಳೆದರು.[ನಟ ದರ್ಶನ್ ಹುಟ್ಟುಹಬ್ಬದ ದಿನ ಎಂತಹ ದುರಂತ]
ಬೆಂಗಳೂರಿನ ಥಣಿಸಂದ್ರ ನಿವಾಸಿ ಯುವಕ ಮಧು ಕುಮಾರ್, ರಾಜರಾಜೇಶ್ವರಿ ನಗರದಿಂದ ನಾಯಂಡಹಳ್ಳಿ ಮೇಲ್ಸೇತುವೆ ಮೇಲೆ ಚಲಿಸುತ್ತಿದ್ದಾಗ ಕೆ.ಎಸ್.ಆರ್.ಟಿ.ಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಸಾವನ್ನಪಿದರು.
ಈ ವಿಷಯ ತಿಳಿದ ದರ್ಶನ್ ಸಹೋದರ ದಿನಕರ್ ತೂಗುದೀಪ ಇಂದು ಥಣಿಸಂದ್ರದಲ್ಲಿರುವ ಮಧು ಕುಮಾರ್ ಮನೆಗೆ ಭೇಟಿ ನೀಡಿ, ಕುಟುಂಬಕ್ಕೆ ಸಾಂತ್ವನ ಹೇಳಿದರು.
'ಜಗ್ಗು ದಾದಾ' ಸಿನಿಮಾ ಶೂಟಿಂಗ್ ನಲ್ಲಿ ಬಿಜಿಯಾಗಿರುವ ಕಾರಣ ದಿನಕರ್ ಜೊತೆ ದರ್ಶನ್ ಭೇಟಿ ನೀಡಲಾಗಲಿಲ್ಲ. ಶೂಟಿಂಗ್ ನಿಂದ ಬಿಡುವು ಮಾಡಿಕೊಂಡು ಮಧು ಕುಮಾರ್ ಮನೆಗೆ ದರ್ಶನ್ ಇಂದು ಅಥವಾ ನಾಳೆ ತೆರಳುವ ಸಾಧ್ಯತೆ ಇದೆ.