Don't Miss!
- Automobiles ಜನಪ್ರಿಯ ಕಂಪನಿಗಳಿಂದ ಮುಂಬರುವ ಪುಟ್ಟ ಕಾರುಗಳಿವು.. ಇವೇ ಮಿಡಲ್ ಕ್ಲಾಸ್ ಜನರ ಫೆವರೇಟ್ ಆಗುವುದು ಪಕ್ಕಾ!
- Sports IPL 2024: ಐಪಿಎಲ್ನಲ್ಲಿ ವಿಶಿಷ್ಟ ದಾಖಲೆ ಬರೆದ ಜಯದೇವ್ ಉನಾದ್ಕಟ್; ಈ ಸಾಧನೆ ಮಾಡಿದ ಮೊದಲ ಭಾರತೀಯ
- Technology iPhones: ಬೇಕಿತ್ತಾ ಇದೆಲ್ಲ? ನಕಲಿ ಐಫೋನ್ ಮೂಲಕ ಆಪಲ್ಗೆ ಪಂಗನಾಮ ಹಾಕಿದವನಿಗೆ ಜೈಲೂಟ
- News Priyank Kharge Life Threat: ಎನ್ಕೌಂಟರ್ ಮಾಡುವುದಾಗಿ ಪ್ರಿಯಾಂಕ್ ಖರ್ಗೆಗೆ ಜೀವ ಬೆದರಿಕೆ!
- Lifestyle ಮದ್ಯದ ಅಮಲಲ್ಲಿ ತೇಲಾಡುತ್ತಿದ್ದ ಶಿಕ್ಷಕನಿಗೆ ಮಕ್ಕಳಿಂದಲೇ ಚಪ್ಪಲಿ ಏಟು..!
- Finance 2.3 ಲಕ್ಷ ರೂಪಾಯಿಗೆ 9 ನಿಂಬೆಹಣ್ಣು ಹರಾಜು, ಏನಿದರ ವಿಶೇಷತೆ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಹಿರಿಯ ನಟ ಡಿಂಗ್ರಿ ನಾಗರಾಜ್ ಅವರಿಗೆ ಗೌರವ ಡಾಕ್ಟರೇಟ್
ಸ್ಯಾಂಡಲ್ ವುಡ್ ನ ಹಿರಿಯ ನಟ ಡಿಂಗ್ರಿ ನಾಗರಾಜ್ ಅವರಿಗೆ ಗೌರವ ಡಾಕ್ಟರೇಟ್ ನೀಡಿ ಗೌರವಿಸಲಾಗಿದೆ. 'ವರ್ಚುವಲ್ ಆಫ್ ಯೂನಿವರ್ಸಿಟಿ ಫಾರ್ ಪೀಸ್ ಆಂಡ್ ಎಜುಕೇಷನ್' ಯುನಿವರ್ಸಿಟಿಯಿಂದ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗಿದೆ.
ನಿನ್ನೆ(ಜೂನ್ 8) ಭಾರತೀಯ ವಿದ್ಯಾಭವನ್ ನಲ್ಲಿ ನಡೆದ ಸಮಾರಂಭದಲ್ಲಿ ನಾಗರಾಜ್ ಅವರಿಗೆ ಗೌರವ ಡಾಕ್ಟರೇಟ್ ನೀಡಿ ಗೌರವಿಸಲಾಗಿದೆ. ಕನ್ನಡ ಚಿತ್ರರಂಗದಲ್ಲಿ ಸಾಕಷ್ಟು ಸೇವೆ ಸಲ್ಲಿಸಿರುವ ನಾಗರಾಜ್ ಅವರಿಗೆ ಈಗ ಗೌರವ ಡಾಕ್ಟರೇಟ್ ಸಿಕ್ಕಿರುವುದು ಸಂತಸತಂದಿದೆ.
ಈ ಸಂತಸವನ್ನು ಸಾಮಾಜಿಕ ಜಾಲತಾಣದಲ್ಲಿ ಡಿಂಗ್ರಿ ನಾಗರಾಜ್ ಅವರ ಪುತ್ರ ರಾಜವರ್ಧನ್ ಹಂಚಿಕೊಂಡಿದ್ದಾರೆ. ಮಗ ರಾಜವರ್ಧನ್ ಕೂಡ ಈಗ ಚಿತ್ರರಂಗದಲ್ಲಿ ಮಿಂಚುತ್ತಿದ್ದಾರೆ. ಮುಂದೆ ಓದಿ..
30ವರ್ಷಕ್ಕು ಹೆಚ್ಚು ಕಾಲ ಕಲಾಸೇವೆ
ಕನ್ನಡ ಚಿತ್ರರಂಗದಲ್ಲಿ ಸುಮಾರು 30 ವರ್ಷಗಳಿಂದ ಕಲಾ ಸೇವೆ ಮಾಡಿಕೊಂಡು ಬಂದಿರುವ ಡಿಂಗ್ರಿ ನಾಗರಾಜ್ ಅವರ ದೀರ್ಘಕಾಲದ ಸಾಧನೆಗೆ ಡಾಕ್ಟರೇಟ್ ಎನ್ನುವ ಗರಿ ಸಿಕ್ಕಿದೆ. 'ವರ್ಚುವಲ್ ಆಫ್ ಯೂನಿವರ್ಸಿಟಿ ಫಾರ್ ಪೀಸ್ ಆಂಡ್ ಎಜುಕೇಷನ್' ಯುನಿವರ್ಸಿಟಿ ಈ ಗೌರವ ಡಾಕ್ಟರೇಟ್ ಅನ್ನು ನಾಗರಾಜ್ ಅವರಿಗೆ ಪ್ರದಾನ ಮಾಡಿದೆ.
165 ಚಿತ್ರಗಳಲ್ಲಿ ಅಭಿನಯ
ಹಿರಿಯ ನಟ ಡಿಂಗ್ರಿ ನಾಗರಾಜ್ ಸುಮಾರು 165ಕ್ಕು ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ಹಾಸ್ಯ ಕಲಾವಿದರಾಗಿ ಕನ್ನಡ ಚಿತ್ರಾಭಿಮಾನಿಗಳನ್ನು ರಂಜಿಸಿದ್ದಾರೆ. 'ಸೋಲಿಲ್ಲದ ಸರದಾರ', 'ದೋರೆ', 'ಬಂಗಾರದ ಕಳಶ','ಶಿವ ಕೊಟ್ಟ ಸೌಭಾಗ್ಯ', 'ಮನೆಯೇ ಮಂತ್ರಾಲಯ' ಸೇರಿದಂತೆ ಅನೇಕ ಸಿನಿಮಾ ಬಣ್ಣ ಹಚ್ಚು ರಂಜಿಸಿದ್ದಾರೆ.
ಸಂತಸ ಹಂಚಿಕೊಂಡ ಮಗ ರಾಜವರ್ಧನ್
ಈ ಬಗ್ಗೆ ಡಿಂಗ್ರಿ ನಾಗರಾಜ್ ಅವರ ಮಗ ರಾಜವರ್ಧನ್ ಅವರು ಸಂತಸ ಹಂಚಿಕೊಂಡಿದ್ದಾರೆ."ಅಭಿನಂದನೆಗಳು ಅಪ್ಪ. ಇಷ್ಟು ವರ್ಷಗಳು ಕಷ್ಟಪಟ್ಟಿದ್ದಕ್ಕೆ ಈಗ ನಿನಗೆ ಗೌರವ ಡಾಕ್ಟರೇಟ್ ಸಿಕ್ಕಿದೆ. ನೀನು ಇದುವರೆಗೂ ಮಾಡಿರುವ ಸಾಧನೆಯನ್ನು ಗುರುತಿಸಿ ವರ್ಷಗಳ ನಂತರ ಈಗ ನಿನ್ನನ್ನ ಗುರುತಿಸಿರುವುದಕ್ಕೆ ಸಂತಸವಾಗುತ್ತೆ. ಮತ್ತೊಮ್ಮೆ ಅಭಿನಂದನೆಗಳು ಅಪ್ಪ" ಎಂದು ಅಪ್ಪನ ಸಾಧನೆಯನ್ನು ಹೆಮ್ಮೆಯಿಂದ ಭಣ್ಣಿಸಿದ್ದಾರೆ ರಾಜವರ್ಧನ್.
ರಾಜವರ್ಧನ್ ಸಿನಿ ಪಯಣ
ಈಗ ಡಿಂಗ್ರಿ ನಾಗರಾಜ್ ಅವರ ಮಗ ರಾಜವರ್ಧನ್ ಕನ್ನಡ ಚಿತ್ರರಂಗದಲ್ಲಿ ಮಿಂಚುತ್ತಿದ್ದಾರೆ. 2016ರಲ್ಲಿ ಫ್ಲೈ ಚಿತ್ರದ ಮೂಲಕ ಬಣ್ಣದ ಲೋಕದ ಜರ್ನಿ ಪ್ರಾರಂಭಿಸಿದ್ದಾರೆ. ಆ ನಂತರ ನೂರೊಂದು ನೆನಪು ಚಿತ್ರದಲ್ಲಿ ಅಭಿನಯಿಸಿದ್ದಾರೆ. ಸದ್ಯ ಬಿಚ್ಚುಗತ್ತಿ ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ.
ಬಹು ನಿರೀಕ್ಷೆಯ ಬಿಚ್ಚುಗತ್ತಿ ಸಿನಿಮಾ
ಬಹುನಿರೀಕ್ಷೆಯ ಬಿಚ್ಚುಗತ್ತಿ ಎಂಬ ಐತಿಹಾಸಿಕ ಸಿನಿಮಾ ಚಿತ್ರೀಕಣದಲ್ಲಿ ರಾಜವರ್ದನ್ ಬ್ಯುಸಿಯಾಗಿದ್ದಾರೆ. ಬರಮಣ್ಣನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಬರಮಣ್ಣ ನಾಯಕ ಕಾದಂಬರಿ ಆಧಾರಿತ ಚಿತ್ರ ಇದಾಗಿದೆ. ನಾಯಕಿಯಾಗಿ ಹರಿಪ್ರಿಯಾ ಕಾಣಿಸಿಕೊಂಡಿದ್ದಾರೆ. ಹರಿಸಂತೋಷ್ ನಿರ್ದೇಶನ ಮಾಡುತ್ತಿದ್ದಾರೆ.