Don't Miss!
- News Namma Metro Blue Line: ಇತರ ಮಾರ್ಗಕ್ಕಿಂತಲೂ 'ನೀಲಿ' ಮಾರ್ಗದಲ್ಲಿ ವೇಗವಾಗಿ ಓಡಲಿವೆ ಮೆಟ್ರೋ, ಅಪ್ಡೇಟ್
- Lifestyle UPSCಯಲ್ಲಿ 2ನೇ ರ್ಯಾಂಕ್ ಗಳಿಸಿದ ಸಾಧಕನ ಡ್ಯಾನ್ಸ್ ವೀಡಿಯೋ ವೈರಲ್: ಇವರ ಬದುಕಿನಲ್ಲಿ ನಡೆದಿದೆ ಹಲವು ದುರಂತಗಳು
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Sports CSK vs LSG IPL 2024: ಚೆನ್ನೈ vs ಲಕ್ನೋ ಹೈ-ವೋಲ್ಟೇಜ್ ಪಂದ್ಯದ ಟಾಸ್ ವರದಿ; ಆಡುವ 11ರ ಬಳಗ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸರಳ ಮದುವೆ ಮೂಲಕ ಹೊಸ ಬಾಳಿಗೆ ಕಾಲಿಟ್ಟ 'ಅದ್ಧೂರಿ' ನಿರ್ದೇಶಕ ಎ.ಪಿ. ಅರ್ಜುನ್: ಫೋಟೊಗಳು
ಲಾಕ್ ಡೌನ್ ನಡುವೆಯೂ ನಿರ್ದೇಶಕ ಎ.ಪಿ. ಅರ್ಜುನ್ ಸರಳವಾಗಿ ತಮ್ಮ ಮನೆಯಲ್ಲಿಯೇ ವೈವಾಹಿಕ ಬದುಕಿಗೆ ಕಾಲಿರಿಸಿದ್ದಾರೆ. ಭಾನುವಾರ ನಡೆದ ಸರಳ ವಿವಾಹ ಸಮಾರಂಭದಲ್ಲಿ ಅವರು ಅನ್ನಪೂರ್ಣ (ಅನು) ಅವರೊಂದಿಗೆ ಹೊಸ ಜೀವನಕ್ಕೆ ಪ್ರವೇಶಿಸಿದರು.
ಲಾಕ್ ಡೌನ್ ನಡುವೆ ಅದ್ಧೂರಿ ಸಮಾರಂಭಗಳಿಗೆ ಅವಕಾಶವಿಲ್ಲ. ಈ ಮಧ್ಯೆ ಅನೇಕ ಕಲಾವಿದರು, ತಂತ್ರಜ್ಞರು ಸರಳ ವಿವಾಹದ ಸೂತ್ರವನ್ನು ಅನುಸರಿಸಿದ್ದಾರೆ. ಅವರ ಸಾಲಿಗೆ 'ಅದ್ಧೂರಿ' ನಿರ್ದೇಶಕ ಅರ್ಜುನ್ ಕೂಡ ಸೇರಿಕೊಂಡಿದ್ದಾರೆ. ದರ್ಶನ್, ಧ್ರುವ ಸರ್ಜಾ, ಲೂಸ್ ಮಾದ ಯೋಗಿ, ಧನಂಜಯ್ ಮುಂತಾದ ನಟರೊಂದಿಗೆ ಸಿನಿಮಾಗಳನ್ನು ಮಾಡಿರುವ ಎ.ಪಿ. ಅರ್ಜುನ್ ಅವರಿಗೆ ಚಿತ್ರರಂಗದಲ್ಲಿ ಅನೇಕ ಆಪ್ತರಿದ್ದರೂ, ಲಾಕ್ ಡೌನ್ ಕಾರಣದಿಂದ ಅವರೆಲ್ಲರೂ ಮದುವೆಹೆ ಹಾಜರಾಗಲು ಸಾಧ್ಯವಾಗಲಿಲ್ಲ. ಪವನ್ ಒಡೆಯರ್, ತರುಣ್ ಸುಧೀರ್, ಪ್ರೇಮ್ ಮುಂತಾದವರು ನವ ವಧೂವರರಿಗೆ ಶುಭ ಹಾರೈಸಿದರು. ಮುಂದೆ ಓದಿ...
ನಿರ್ದೇಶಕ ಸಂತು ಭಾಗಿ
ಕುಟುಂಬದ ಸದಸ್ಯರು ಹಾಗೂ ಕೆಲವೇ ಮಂದಿ ಆಪ್ತರು ಅವರ ಮದುವೆಯಲ್ಲಿ ಪಾಲ್ಗೊಂಡಿದ್ದರು. ಭಾನುವಾರ ನಡೆದ ಸಮಾರಂಭದಲ್ಲಿ 'ಅಲೆಮಾರಿ' ನಿರ್ದೇಶಕ ಸಂತು ಚಿತ್ರರಂಗದ ಪರವಾಗಿ ಅರ್ಜುನ್ ಅವರ ಮದುವೆಗೆ ಹಾಜರಾಗಿದ್ದರು.
ಹಾಸನದ ಅನ್ನಪೂರ್ಣ
ಅರ್ಜುನ್ ಅವರ ಕೈಹಿಡಿದಿರುವ ಅನು (ಅನ್ನಪೂರ್ಣ) ಅವರು ಮೂಲತಃ ಹಾಸನದವರು ಎನ್ನಲಾಗಿದೆ. ಅರ್ಜುನ್ ಈ ಹಿಂದೆ 'ಅದ್ಧೂರಿ' ಚಿತ್ರದ ಮೂಲಕ ಧ್ರುವ ಸರ್ಜಾ ಅವರನ್ನು ಚಿತ್ರರಂಗಕ್ಕೆ ಪರಿಚಯಿಸಿದ್ದರು. ಆದರೆ ಅವರ ಮದುವೆ ಅದ್ಧೂರಿಯಾಗಿರದೆ ಬಹಳ ಸರಳವಾಗಿದ್ದು ವಿಶೇಷ.
ಮನೆಯಲ್ಲಿಯೇ ಮದುವೆ ಮಂಟಪ
ಲಾಕ್ ಡೌನ್ ಕಾರಣದಿಂದಾಗಿ ಅರ್ಜುನ್ ಅವರ ಮನೆಯಲ್ಲಿಯೇ ಮದುವೆ ಮಂಟಪವನ್ನು ಸಿದ್ಧಪಡಿಸಲಾಗಿತ್ತು. ಮನೆಯ ಮುಂದೆ ಶಾಮಿಯಾನ, ಚಪ್ಪರ ಹಾಕಿ, ಹೂವುಗಳಿಂದ ಅಲಂಕರಿಸಲಾಗಿತ್ತು. ಹೆಚ್ಚು ಜನರಿಗೆ ಆಹ್ವಾನ ನೀಡದೆಯೇ ಅರ್ಜುನ್, ಲಾಕ್ ಡೌನ್ ನಿಯಮಗಳನ್ನು ಪಾಲಿಸಿದರು.
ನಿಖಿಲ್ ಕುಮಾರಸ್ವಾಮಿಗೆ ಸಿನಿಮಾ
'ಅದ್ಧೂರಿ', 'ಅಂಬಾರಿ', 'ರಾಟೆ', 'ಐರಾವತ' ಚಿತ್ರಗಳನ್ನು ನಿರ್ದೇಶಿಸಿರುವ ಅರ್ಜುನ್ ಅವರ 'ಕಿಸ್' ಚಿತ್ರ ಕಳೆದ ವರ್ಷ ಬಿಡುಗಡೆಯಾಗಿತ್ತು. ಮುಂದಿನ ಸಿನಿಮಾವನ್ನು ಅವರು ನಿಖಿಲ್ ಕುಮಾರಸ್ವಾಮಿ ಅವರಿಗೆ ನಿರ್ದೇಶಿಸಲಿದ್ದಾರೆ.
|
ಅಂಬಾರಿ ಮೂಲಕ ನಿರ್ದೇಶಕ
ಮಂಡ್ಯ ಮೂಲದವರಾದ ಅರ್ಜುನ್, 'ತಂಗಿಗಾಗಿ' ಚಿತ್ರಕ್ಕೆ ಹಾಡು ಬರೆಯುವ ಮೂಲಕ ಚಿತ್ರ ಸಾಹಿತಿಯಾಗಿ ಪ್ರವೇಶಿಸಿದ್ದರು. ಜತೆಗೆ ಸಹ ನಿರ್ದೇಶಕರಾಗಿ ಕೂಡ ಕೆಲಸ ಮಾಡಿದ್ದರು. 'ಅಂಬಾರಿ' ಚಿತ್ರದ ಮೂಲಕ ನಿರ್ದೇಶಕರಾಗಿ ಗುರುತಿಸಿಕೊಂಡಿದ್ದರು.
ಎಂಟು ವರ್ಷದ ಪ್ರೀತಿ
ಅರ್ಜುನ್ ಮತ್ತು ಅನ್ನಪೂರ್ಣ ಅವರದ್ದು ಪ್ರೇಮಕ್ಕೆ ವಿವಾಹದ ಮುದ್ರೆ ಬಿದ್ದಿದೆ. ಇಬ್ಬರೂ ಕಳೆದ ಎಂಟು ವರ್ಷಗಳಿಂದ ಪ್ರೀತಿಸುತ್ತಿದ್ದರು ಎನ್ನಲಾಗಿದೆ. ಮನೆಯವರ ಅನುಮತಿ ಪಡೆದು ಮನೆಯಲ್ಲಿಯೇ ಮದುವೆಯಾಗಿರುವುದು ವಿಶೇಷ.
ಚಿತ್ರ ಸಾಹಿತಿಯಾಗಿ ಹೆಸರು
ಎಪಿ ಅರ್ಜುನ್ ನಿರ್ದೇಶನದ 'ಕಿಸ್' ಚಿತ್ರದಲ್ಲಿ ವಿರಾಟ್ ಮತ್ತು ಶ್ರೀಲೀಲಾ ನಟಿಸಿದ್ದರು. ವಿರಾಟ್ ನಟಿಸಲಿರುವ ಮತ್ತೊಂದು ಚಿತ್ರಕ್ಕೂ ಎ.ಪಿ. ಅರ್ಜುನ್ ಆಕ್ಷನ್ ಕಟ್ ಹೇಳಲಿದ್ದಾರೆ. ಗೀತರಚನಾಕಾರನಾಗಿ ಕೂಡ ಗುರುತಿಸಿಕೊಂಡಿರುವ ಅರ್ಜುನ್, ಅನೇಕ ಹಿಟ್ ಹಾಡುಗಳನ್ನು ನೀಡಿದ್ದಾರೆ.