Just In
- 24 min ago
ಬೆಂಕಿ ಹಚ್ಚಿ ಆನೆ ಸಾವು: ಈ ಪೈಶಾಚಿಕ ಕೃತ್ಯ ನಡೆಸಿದ ಪಾಪಿಗಳಿಗೆ ಕಠಿಣ ಶಿಕ್ಷೆ ಆಗಲೇಬೇಕು- ಸುಮಲತಾ
- 2 hrs ago
ನಟಿ ರಾಗಿಣಿಗೆ ಜಾಮೀನು ಸಿಕ್ಕರೂ ಜೈಲಿನಿಂದ ಹೊರಬರಲು ಪರದಾಟ
- 2 hrs ago
ಕಾರವಾರ ಬೀಚ್ ಸ್ವಚ್ಛ ಮಾಡಿದ ನಟ ಅರುಣ್ ಸಾಗರ್
- 2 hrs ago
ಹಿಂದಿ ರಾಷ್ಟ್ರ ಭಾಷೆ ಎಂದ ಸಾಹಿತಿ ದೊಡ್ಡರಂಗೇಗೌಡ: ಇದು ಅವರ ಅರಿವಿನ ಕೊರತೆಯಾಗಿರಬಹುದು ಎಂದ ನಿಖಿಲ್
Don't Miss!
- News
"ಸಿಬಿಐ, ಇಡಿ ಮೂಲಕ ಮೋದಿ ತಮಿಳುನಾಡನ್ನು ನಿಯಂತ್ರಿಸುವ ಪ್ರಯತ್ನದಲ್ಲಿದ್ದಾರೆ"
- Sports
'ವೈಟ್ಬಾಲ್ ತಂಡಗಳಲ್ಲಿ ಅಯ್ಯರ್, ಸ್ಯಾಮ್ಸನ್ ಬದಲು ಪಂತ್ ಆಡಿಸಬೇಕು'
- Automobiles
2021ರ ಕ್ರೆಟಾ ಕಂಪ್ಯಾಕ್ಟ್ ಎಸ್ಯುವಿ ಕಾರಿನ ಬೆಲೆ ಹೆಚ್ಚಳ ಮಾಡಿದ ಹ್ಯುಂಡೈ
- Lifestyle
ಮಕರ ರಾಶಿಗೆ ಶುಕ್ರನ ಸಂಚಾರ: ಯಾವೆಲ್ಲಾ ರಾಶಿಗೆ ಶುಕ್ರದೆಸೆ
- Finance
ಮೂರನೇ ತ್ರೈಮಾಸಿಕದಲ್ಲಿ ಭಾರೀ ಲಾಭಗಳಿಸಿದ ರಿಲಯನ್ಸ್ ಇಂಡಸ್ಟ್ರೀಸ್
- Education
NIT Recruitment 2021: ಜ್ಯೂನಿಯರ್ ರಿಸರ್ಚ್ ಫೆಲೋ ಜೆಆರ್ಎಫ್ಹುದ್ದೆಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಹೊಸ ಪ್ರಯತ್ನಕ್ಕೆ ಕೈ ಹಾಕಿದ 'ಹುಲಿರಾಯ' ನಿರ್ದೇಶಕ
'ಹುಲಿರಾಯ' ಸಿನಿಮಾದ ನಂತರ ನಿರ್ದೇಶಕ ಅರವಿಂದ್ ಕೌಶಿಕ್ 'ಬೆಂಗಳೂರು ಇತ್ಯಾದಿ' ಸಿನಿಮಾ ಮಾಡುತ್ತಿರುವುದು ಎಲ್ಲರಿಗೂ ತಿಳಿದಿದೆ. ಇನ್ನು ಈಗಾಗಲೇ ಈ ಚಿತ್ರದ ಪೋಸ್ಟರ್ ಕೂಡ ಸಾಮಾಜಿಕ ಜಾಲತಾಣದಲ್ಲಿ ಒಳ್ಳೆಯ ಪ್ರತಿಕ್ರಿಯೆ ಪಡೆದುಕೊಂಡಿದೆ.
ವಿಶೇಷ ಏನೆಂದ್ರೆ, ಈಗ 'ಬೆಂಗಳೂರು ಇತ್ಯಾದಿ' ಸಿನಿಮಾದ ಮೂಲಕ ಅರವಿಂದ್ ಕೌಶಿಕ್ ಹೊಸ ಪ್ರಯತ್ನಕ್ಕೆ ಕೈ ಹಾಕಿದ್ದಾರೆ. ಸಾಮಾನ್ಯವಾಗಿ ಎಲ್ಲರೂ ಸಿನಿಮಾ ಮುಗಿದ ನಂತರ ಪ್ರೇಕ್ಷಕರ ಬಳಿಗೆ ಹೋಗುತ್ತಾರೆ. ಆದರೆ ಇವರು ತಮ್ಮ ಹೊಸ ಚಿತ್ರ ಶುರುವಿನ ಹಂತದಲ್ಲಿಯೇ ತಮ್ಮ ಪ್ರೇಕ್ಷಕ ವರ್ಗವನ್ನು ಗುರುತಿಸಿ ಸಿನಿಮಾ ಮಾಡಲು ಹೊರಟಿದ್ದಾರೆ.
ಈಗಾಗಲೇ 'ದಿ ಆಡಿಯನ್ಸ್ ಫಿಲ್ಮ್ ಕ್ಲಬ್' ಎಂಬ ತಂಡವನ್ನು ಕಟ್ಟಿರುವ ಅವರು ಒಂದು ಒಳ್ಳೆಯ ಸಿನಿಮಾಗೆ ಒಂದು ಒಳ್ಳೆಯ ಪ್ರೇಕ್ಷಕ ವರ್ಗವನ್ನು ಸೃಷ್ಟಿ ಮಾಡುತ್ತಿದ್ದಾರೆ. ಜೊತೆಗೆ ಈ ತಂಡದ ಮೂಲಕವು ಹೊಸ ಪ್ರತಿಭೆಗಳಿಗೆ ಅವಕಾಶ ನೀಡುವ ಯೋಜನೆ ಇದೆ.
ಸೋ, ನಿಮಗೆ ಕೂಡ ಸಿನಿಮಾದಲ್ಲಿ ಆಸಕ್ತಿ ಇದ್ದು, ಹಾಡು, ಸಂಭಾಷಣೆ, ಕಥೆ ಬರೆಯುವ, ಮ್ಯೂಸಿಕ್ ನೀಡುವ ಅಥಾವ ಪೋಸ್ಟರ್ ಡಿಸೈನ್ ಮಾಡುವ ಈ ರೀತಿಯ ಪ್ರತಿಭೆ ನಿಮ್ಮ ಬಳಿ ಇದ್ದರೆ ಅದನ್ನು theaudiencefilmclub@gmail.com ಕಳುಹಿಸಬಹುದು.