Don't Miss!
- Technology Google: ಗೂಗಲ್ ಪಿಕ್ಸೆಲ್ 8a ಬೆಲೆ ಮಾಹಿತಿ ಲೀಕ್! ಈ ಫೋನ್ ಫೀಚರ್ಸ್ ಏನು?
- Automobiles ಯುವಕರಿಗೆ ಸಿಹಿಸುದ್ದಿ: ಕೈಗೆಟುಕುವ ಬೆಲೆ, ಮಾಸ್ ಲುಕ್ನಲ್ಲಿ ಬರುತ್ತಿದೆ ಹೊಸ ಬಜಾಜ್ ಪಲ್ಸರ್ 400 ಬೈಕ್
- Finance ಇನ್ಮುಂದೆ ನಿಮ್ಮ ಜಮೀನಿನಲ್ಲಿ ನೀವು ಮನೆ ಕಟ್ಟೋದಕ್ಕೂ ಸರ್ಕಾರದ ಅನುಮತಿ ಅಗತ್ಯ, ಏನಿದು ಹೋಸ ನಿಯಮ?
- News ಬಿಜೆಪಿ ಭದ್ರಕೋಟೆಯಲ್ಲಿ ಶೋಭಾ ಕರಂದ್ಲಾಜೆಗೆ ಕಠಿಣ ಸವಾಲು!
- Lifestyle ಉಪ್ಪು ನೀರಿನಿಂದ ಮುಖ ತೊಳೆದರೆ ಆಗುವ ಲಾಭವೇನು.? ಇದರ ಅನಾನುಕೂಲವೇನು ಗೊತ್ತಾ?
- Sports IPL 2024: ಆರ್ಸಿಬಿ ಕಪ್ ಗೆಲ್ಲದಿರಲು ಅತಿಯಾದ ಪಾರ್ಟಿ ಕಾರಣವೇ?; ರೈನಾ ಬಿಚ್ಚಿಟ್ಟ ಸತ್ಯ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಹೊಸ ಪ್ರಯತ್ನಕ್ಕೆ ಕೈ ಹಾಕಿದ 'ಹುಲಿರಾಯ' ನಿರ್ದೇಶಕ
'ಹುಲಿರಾಯ' ಸಿನಿಮಾದ ನಂತರ ನಿರ್ದೇಶಕ ಅರವಿಂದ್ ಕೌಶಿಕ್ 'ಬೆಂಗಳೂರು ಇತ್ಯಾದಿ' ಸಿನಿಮಾ ಮಾಡುತ್ತಿರುವುದು ಎಲ್ಲರಿಗೂ ತಿಳಿದಿದೆ. ಇನ್ನು ಈಗಾಗಲೇ ಈ ಚಿತ್ರದ ಪೋಸ್ಟರ್ ಕೂಡ ಸಾಮಾಜಿಕ ಜಾಲತಾಣದಲ್ಲಿ ಒಳ್ಳೆಯ ಪ್ರತಿಕ್ರಿಯೆ ಪಡೆದುಕೊಂಡಿದೆ.
ವಿಶೇಷ ಏನೆಂದ್ರೆ, ಈಗ 'ಬೆಂಗಳೂರು ಇತ್ಯಾದಿ' ಸಿನಿಮಾದ ಮೂಲಕ ಅರವಿಂದ್ ಕೌಶಿಕ್ ಹೊಸ ಪ್ರಯತ್ನಕ್ಕೆ ಕೈ ಹಾಕಿದ್ದಾರೆ. ಸಾಮಾನ್ಯವಾಗಿ ಎಲ್ಲರೂ ಸಿನಿಮಾ ಮುಗಿದ ನಂತರ ಪ್ರೇಕ್ಷಕರ ಬಳಿಗೆ ಹೋಗುತ್ತಾರೆ. ಆದರೆ ಇವರು ತಮ್ಮ ಹೊಸ ಚಿತ್ರ ಶುರುವಿನ ಹಂತದಲ್ಲಿಯೇ ತಮ್ಮ ಪ್ರೇಕ್ಷಕ ವರ್ಗವನ್ನು ಗುರುತಿಸಿ ಸಿನಿಮಾ ಮಾಡಲು ಹೊರಟಿದ್ದಾರೆ.
ಈಗಾಗಲೇ 'ದಿ ಆಡಿಯನ್ಸ್ ಫಿಲ್ಮ್ ಕ್ಲಬ್' ಎಂಬ ತಂಡವನ್ನು ಕಟ್ಟಿರುವ ಅವರು ಒಂದು ಒಳ್ಳೆಯ ಸಿನಿಮಾಗೆ ಒಂದು ಒಳ್ಳೆಯ ಪ್ರೇಕ್ಷಕ ವರ್ಗವನ್ನು ಸೃಷ್ಟಿ ಮಾಡುತ್ತಿದ್ದಾರೆ. ಜೊತೆಗೆ ಈ ತಂಡದ ಮೂಲಕವು ಹೊಸ ಪ್ರತಿಭೆಗಳಿಗೆ ಅವಕಾಶ ನೀಡುವ ಯೋಜನೆ ಇದೆ.
ಸೋ, ನಿಮಗೆ ಕೂಡ ಸಿನಿಮಾದಲ್ಲಿ ಆಸಕ್ತಿ ಇದ್ದು, ಹಾಡು, ಸಂಭಾಷಣೆ, ಕಥೆ ಬರೆಯುವ, ಮ್ಯೂಸಿಕ್ ನೀಡುವ ಅಥಾವ ಪೋಸ್ಟರ್ ಡಿಸೈನ್ ಮಾಡುವ ಈ ರೀತಿಯ ಪ್ರತಿಭೆ ನಿಮ್ಮ ಬಳಿ ಇದ್ದರೆ ಅದನ್ನು [email protected] ಕಳುಹಿಸಬಹುದು.