Don't Miss!
- Lifestyle ರೆಸಿಪಿ: ಮಾವಿನ ಕಾಯಿ ತುರಿದು ಮಾಡುವ ಉಪ್ಪಿನಕಾಯಿ, ಎಣ್ಣೆ ಬಳಸಿಲ್ಲ, ವರ್ಷದವರೆಗೆ ಇಡಲೂ ಬಹುದು
- News ಚೊಂಬನ್ನು ಅರಗಿಸಿಕೊಳ್ಳಲಾಗದೇ ಬಿಜೆಪಿ ಪಿಕ್ಪಾಕೆಟ್ ಜಾಹೀರಾತು- ಡಿಕೆಶಿ ವಾಗ್ದಾಳಿ
- Technology Google: ಗೂಗಲ್ ಪಿಕ್ಸೆಲ್ 8a ಬೆಲೆ ಮಾಹಿತಿ ಲೀಕ್! ಈ ಫೋನ್ ಫೀಚರ್ಸ್ ಏನು?
- Automobiles ಯುವಕರಿಗೆ ಸಿಹಿಸುದ್ದಿ: ಕೈಗೆಟುಕುವ ಬೆಲೆ, ಮಾಸ್ ಲುಕ್ನಲ್ಲಿ ಬರುತ್ತಿದೆ ಹೊಸ ಬಜಾಜ್ ಪಲ್ಸರ್ 400 ಬೈಕ್
- Finance ಇನ್ಮುಂದೆ ನಿಮ್ಮ ಜಮೀನಿನಲ್ಲಿ ನೀವು ಮನೆ ಕಟ್ಟೋದಕ್ಕೂ ಸರ್ಕಾರದ ಅನುಮತಿ ಅಗತ್ಯ, ಏನಿದು ಹೋಸ ನಿಯಮ?
- Sports IPL 2024: ಆರ್ಸಿಬಿ ಕಪ್ ಗೆಲ್ಲದಿರಲು ಅತಿಯಾದ ಪಾರ್ಟಿ ಕಾರಣವೇ?; ರೈನಾ ಬಿಚ್ಚಿಟ್ಟ ಸತ್ಯ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮುಚ್ಚುತ್ತಿದ್ದ ಸರ್ಕಾರಿ ಶಾಲೆಗೆ ಹೊಸ ರೂಪ: ರಿಷಬ್ ದತ್ತು ಪಡೆದ ಶಾಲೆ ಈಗ ಹೇಗಿದೆ?
ಸ್ಯಾಂಡಲ್ ವುಡ್ ನ ನಿರ್ದೇಶಕ ಮತ್ತು ನಟ ರಿಷಬ್ ಶೆಟ್ಟಿ ಮುಚ್ಚಿಹೋಗುತ್ತಿದ್ದ ಸರ್ಕಾರಿ ಶಾಲೆಯನ್ನು ದತ್ತು ಪಡೆದಿದ್ದರು. "ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು" ಸಿನಿಮಾ ಮೂಲಕ ಸರ್ಕಾರಿ ಶಾಲೆಯ ದುಸ್ಥಿತಿಯನ್ನು ಸುಂದರವಾಗಿ ಕಟ್ಟಿಕೊಟ್ಟಿದ್ದರು. ಶೆಟ್ಟರ ಸರ್ಕಾರಿ ಶಾಲೆಗೆ ಎಲ್ಲಕಡೆಯಿಂದ ಅದ್ಭುತ ಪ್ರತಿಕ್ರಿಯೆ ವ್ಯಕ್ತವಾಗಿತ್ತು.
ಸರ್ಕಾರಿ ಶಾಲೆಯಲ್ಲಿ ಚಿತ್ರೀಕರಣ ಮಾಡಿ, ಸಿನಿಮಾ ಸಕ್ಸಸ್ ಆದ ನಂತರ ಸೈಲೆಂಟ್ ಆಗದ ರಿಷಬ್, ಚಿತ್ರೀಕರಣ ಮಾಡಿದ ಶಾಲೆಯನ್ನು ದತ್ತು ಪಡೆದಿದ್ದರು. ಶಾಲೆ ಅಳಿವಿನ ಅಂಚಿನಲ್ಲಿದೆ ಎನ್ನುವ ವಿಚಾರ ಗೊತ್ತಾಗುತ್ತಿದ್ದಂತೆ ಶಾಲೆಗೆ ಮರುಜೀವ ನೀಡಲು ಮುಂದಾಗಿದ್ದರು.
ರಿಷಬ್ ಶೆಟ್ಟಿ 'ರುದ್ರ ಪ್ರಯಾಗ'ದಲ್ಲಿ ಬಾಲಿವುಡ್ ನಟ
ರಿಷಬ್ ದಕ್ಷಿಣ ಕನ್ನಡ ಜೆಲ್ಲೆಯ ಬಂಟ್ವಾಳ ತಾಲೂಕಿನ ಕೈರಂಗಳ ಶಾಲೆಯಲ್ಲಿ ಚಿತ್ರೀಕರಣ ಮಾಡಿದ್ದರು. ಚಿತ್ರೀಕರಣ ನಂತರ ಆ ಶಾಲೆ ಮುಚ್ಚುವ ಸ್ಥಿಯಲ್ಲಿ ಇದೆ ಎಂದು ತಿಳಿದ ರಿಷಬ್ ದತ್ತು ಪಡೆದಿದ್ದರು. ಈಗ ಆ ಶಾಲೆಯನ್ನು ಮಾದರಿ ಶಾಲೆಯಾಗಿ ರೂಪಿಸಿದ್ದಾರೆ.
ಚಿತ್ರೀಕರಣ ಸಮಯದಲ್ಲಿ ಶಾಲೆಯಲ್ಲಿ 42 ಮಕ್ಕಳು ಇದ್ದರಂತೆ. ಆ ನಂತರ ಶಾಲೆಯಲ್ಲಿ ಕೇವಲ 17 ಮಕ್ಕಳು ಮಾತ್ರ ಉಳಿದ್ದರು. ಇನ್ನೇನು ಶಾಲೆ ಮುಚ್ಚಿ ಹೋಗುತ್ತಿದೆ ಎನ್ನುವಷ್ಟೊತ್ತಿಗೆ ರಿಷಬ್ ಶಾಲೆಯನ್ನು ಕಾಪಾಡಿ ಉಳಿಸಿಕೊಂಡಿದ್ದಾರೆ.
ಶಾಲೆಗೆ ಸುಣ್ಣ ಬಣ್ಣ ಮಾಡಿಸಿದ್ದಾರೆ. ಶಾಲೆಯನ್ನು ಸಂಪೂರ್ಣವಾಗಿ ನವೀಕರಿಸಿದ್ದಾರೆ. ಅಲ್ಲದೆ ಸ್ಪೋಕನ್ ಇಂಗ್ಲೀಷ್ ಕ್ಲಾಸ್, ಉತ್ತಮ ಶಿಕ್ಷಕರು ಹೀಗೆ ಸಾಕಷ್ಟು ರೀತಿಯಲ್ಲಿ ಶಾಲೆಯನ್ನು ಬದಲಾಯಿಸಿದ್ದಾರೆ ರಿಷಬ್ ಮತ್ತು ತಂಡ. 17 ಮಕ್ಕಳಿದ್ದ ಶಾಲೆಯಲ್ಲೀಗ 84 ಜನ ವಿದ್ಯಾರ್ಥಿಗಳಿದ್ದಾರೆ. ಇನ್ನು ಎರಡು ವರ್ಷಗಳಲ್ಲಿ ಮಕ್ಕಳ ಸಂಖ್ಯೆ 300ಕ್ಕೆ ಏರಿಕೆಯಾಗುವ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ ರಿಷಬ್.
ರಿಷಬ್ ನಿರ್ದೇಶನ ಮಾಡಿದ್ದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು ಸಿನಿಮಾದ ರೀತಿಯಲ್ಲೆ, ನಿಜಜೀವನದಲ್ಲೂ ಮುಚ್ಚಿಹೋಗುತ್ತಿದ್ದ ಸರ್ಕಾರಿ ಶಾಲೆಯನ್ನು ರಕ್ಷಿಸಿ ಹೊಸ ರೂಪ ನೀಡಿದ್ದಾರೆ. ಇದೊಂದೆ ಶಾಲೆಯಲ್ಲ ಕರ್ನಾಟಕದಲ್ಲಿ ಇಂತಹ ಸಾಕಷ್ಟು ಕನ್ನಡ ಮಾಧ್ಯಮದ ಶಾಲೆಗಳು ಅಳಿವಿನ ಅಂಚಿನಲ್ಲಿವೆ. ರಿಷಬ್ ಕನ್ನಡ ಶಾಲೆ ಉಳಿಸಿ ಎನ್ನುವ ಅಭಿಯಾನ ಕೂಡ ಶುರುಮಾಡಿದ್ದಾರೆ.