Don't Miss!
- Sports CSK vs LSG IPL 2024: ರುತುರಾಜ್ ಭರ್ಜರಿ ಶತಕ, ದುಬೆ ಸ್ಫೋಟಕ ಬ್ಯಾಟಿಂಗ್; ಲಕ್ನೋಗೆ ಬೃಹತ್ ಗುರಿ ನೀಡಿದ ಚೆನ್ನೈ
- News Narendra Modi: ಕರ್ನಾಟಕಕ್ಕೆ ಏಪ್ರಿಲ್ 29, 29ಕ್ಕೆ ಪ್ರಧಾನಿ ಮೋದಿ ಆಗಮನ
- Lifestyle UPSCಯಲ್ಲಿ 2ನೇ ರ್ಯಾಂಕ್ ಗಳಿಸಿದ ಸಾಧಕನ ಡ್ಯಾನ್ಸ್ ವೀಡಿಯೋ ವೈರಲ್: ಇವರ ಬದುಕಿನಲ್ಲಿ ನಡೆದಿದೆ ಹಲವು ದುರಂತಗಳು
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರಿಷಬ್ ಶೆಟ್ಟಿಯ ಹೊಸ ಸಿನಿಮಾದಿಂದ ಹೊರನಡೆದ ನಿರ್ದೇಶಕ
ನಟ ರಿಷಬ್ ಶೆಟ್ಟಿ ನಟಿಸುತ್ತಿರುವ ಹೊಸ ಸಿನಿಮಾ 'ಹರಿಕತೆ ಅಲ್ಲ ಗಿರಿಕತೆ' ಸಿನಿಮಾದ ನಿರ್ದೇಶಕ ಗಿರಿಶ್ ಕೃಷ್ಣ ಹಠಾತ್ತನೆ ಚಿತ್ರತಂಡದಿಂದ ಹೊರನಡೆದಿದ್ದಾರೆ.
ಗಿರಿಶ್ ಕೃಷ್ಣ, ಯಾವುದೇ ಅಸಮಾಧಾನದ ಕಾರಣದಿಂದ ಚಿತ್ರವನ್ನು ತ್ಯಜಿಸಿಲ್ಲ, ಬದಲಿಗೆ ಅವರಿಗೆ ಆರೋಗ್ಯ ಸಮಸ್ಯೆ ಎದುರಾದ ಕಾರಣ ಗಿರಿಶ್ ಅವರು ಸಿನಿಮಾದಿಂದ ದೂರ ಉಳಿದಿದ್ದಾರೆ. ಅವರ ಸ್ಥಾನವನ್ನು ಇಬ್ಬರು ಹೊಸ ನಿರ್ದೇಶಕರು ತುಂಬುತ್ತಿದ್ದಾರೆ.
ಕರಣ್ ಅನಂತ್ ಮತ್ತು ಅನಿರುದ್ ಮಹೇಶ್ ಅವರುಗಳು ಗಿರಿಶ್ ಕೃಷ್ಣ ಸ್ಥಾನಕ್ಕೆ ಬಂದಿದ್ದು, 'ಹರಿ ಕತೆ ಅಲ್ಲ ಗಿತಿಕತೆ' ಸಿನಿಮಾವನ್ನು ದಡ ತಲುಪಿಸಲಿದ್ದಾರೆ.
ಗಿರಿಶ್ ಕೃಷ್ಣ, ಸಿನಿಮಾ ಚಿತ್ರೀಕರಣದ ಆರಂಭದಲ್ಲಿಯೇ ಅನಾರೋಗ್ಯಕ್ಕೆ ಒಳಗಾದರಂತೆ, 'ನನ್ನ ಆರೋಗ್ಯ ಸುಧಾರಿಸುವವರೆಗೆ ಕಾಯುತ್ತೇವೆ ಎಂದು ಚಿತ್ರತಂಡ ಹೇಳಿತು, ಆದರೆ ನನಗೆ ಅದು ಇಷ್ಟವಿರಲಿಲ್ಲ, ಹಾಗಾಗಿ ಅವರಿಗೆ ಸಿನಿಮಾ ಚಿತ್ರೀಕರಣ ಮುಂದುವರೆಸುವಂತೆ ಹೇಳಿದ್ದೇನೆ' ಎಂದಿದ್ದಾರೆ ಗಿರಿ ಕೃಷ್ಣ.
Recommended Video
ರಿಷಬ್ ಶೆಟ್ಟಿ ಸಹ ಈ ಬಗ್ಗೆ ಮಾತನಾಡಿದ್ದು, 'ನಟ-ನಟಿಯರ ಡೇಟ್ಸ್ಗಳು ಬುಕ್ ಆಗಿಬಿಟ್ಟಿದ್ದವು ಹಾಗಾಗಿ ಚಿತ್ರೀಕರಣ ಮುಂದುವರೆಸಲೇ ಬೇಕಾಯಿತು. ಗಿರಿ ಪ್ರತಿಭಾವಂತ ನಿರ್ದೇಶಕ ಅವರೊಂದಿಗೆ ಮುಂದೆ ಮತ್ತೆ ಕೆಲಸ ಮಾಡುವ ಇರಾದೆ ಇದೆ. ಗಿರಿ ಸ್ಥಾನವನ್ನು ಈಗ ಕರಣ್-ಅನಿರುದ್ ತುಂಬಲಿದ್ದಾರೆ ಎಂದಿದ್ದಾರೆ.
ಕಾಮಿಡಿ-ಡ್ರಾಮಾ ಸಿನಿಮಾ ಆಗಿರುವ ಹರಿ ಕತೆ ಅಲ್ಲ ಗಿರಿ ಕತೆ ಸಿನಿಮಾದಲ್ಲಿ ರಿಷಬ್ ನಾಯಕನಟರಾಗಿ ನಟಿಸುತ್ತಿದ್ದಾರೆ. ಸಿನಿಮಾವನ್ನು ಸಂದೇಶ್ ಪ್ರೊಡಕ್ಷನ್ಸ್ ನಿರ್ಮಿಸುತ್ತಿದೆ.