Don't Miss!
- News Big Offer for Bengaluru Voters: ಮತದಾರರಿಗೆ ಗುಡ್ ನ್ಯೂಸ್.. ರಿಯಾಯಿತಿ ದರದಲ್ಲಿ ತಿಂಡಿ ವ್ಯವಸ್ಥೆ
- Technology ಇಂದು ಮತ್ತೆ ಮೊಟೊರೊಲಾ ಎಡ್ಜ್ 50 ಪ್ರೊ ಫೋನಿನ ಸ್ಪೆಷಲ್ ಸೇಲ್!..ಡಿಸ್ಕೌಂಟ್ ಎಷ್ಟು?
- Sports PBKS vs MI IPL 2024: ಮತ್ತೊಮ್ಮೆ ಕೊನೆಯ ಓವರ್ನಲ್ಲಿ ಮುಗ್ಗರಿಸಿದ ಪಂಜಾಬ್ ಕಿಂಗ್ಸ್ ಪ್ಲೇಆಫ್ ಸನ್ನಿವೇಶ ಹೇಗಿದೆ?
- Finance ಕಚ್ಚಾ ತೈಲ ಆಮದು ಗಣನೀಯ ಇಳಿಕೆ, ಪೆಟ್ರೋಲ್ ಡಿಸೇಲ್ ಬೆಲೆ ಹೆಚ್ಚಾಗುತ್ತಾ?
- Lifestyle ಶುಕ್ರವಾರ ವೈಭವ ಲಕ್ಷ್ಮಿ ವ್ರತ ಮಾಡೋದೇಕೆ..? ಹೇಗೆ ಆಚರಿಸಬೇಕು ಎಂಬ ಮಾಹಿತಿ ಇಲ್ಲಿದೆ..!
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರಿಷಬ್ ಶೆಟ್ಟಿಯ ಹೊಸ ಸಿನಿಮಾದಿಂದ ಹೊರನಡೆದ ನಿರ್ದೇಶಕ
ನಟ ರಿಷಬ್ ಶೆಟ್ಟಿ ನಟಿಸುತ್ತಿರುವ ಹೊಸ ಸಿನಿಮಾ 'ಹರಿಕತೆ ಅಲ್ಲ ಗಿರಿಕತೆ' ಸಿನಿಮಾದ ನಿರ್ದೇಶಕ ಗಿರಿಶ್ ಕೃಷ್ಣ ಹಠಾತ್ತನೆ ಚಿತ್ರತಂಡದಿಂದ ಹೊರನಡೆದಿದ್ದಾರೆ.
ಗಿರಿಶ್ ಕೃಷ್ಣ, ಯಾವುದೇ ಅಸಮಾಧಾನದ ಕಾರಣದಿಂದ ಚಿತ್ರವನ್ನು ತ್ಯಜಿಸಿಲ್ಲ, ಬದಲಿಗೆ ಅವರಿಗೆ ಆರೋಗ್ಯ ಸಮಸ್ಯೆ ಎದುರಾದ ಕಾರಣ ಗಿರಿಶ್ ಅವರು ಸಿನಿಮಾದಿಂದ ದೂರ ಉಳಿದಿದ್ದಾರೆ. ಅವರ ಸ್ಥಾನವನ್ನು ಇಬ್ಬರು ಹೊಸ ನಿರ್ದೇಶಕರು ತುಂಬುತ್ತಿದ್ದಾರೆ.
ಕರಣ್ ಅನಂತ್ ಮತ್ತು ಅನಿರುದ್ ಮಹೇಶ್ ಅವರುಗಳು ಗಿರಿಶ್ ಕೃಷ್ಣ ಸ್ಥಾನಕ್ಕೆ ಬಂದಿದ್ದು, 'ಹರಿ ಕತೆ ಅಲ್ಲ ಗಿತಿಕತೆ' ಸಿನಿಮಾವನ್ನು ದಡ ತಲುಪಿಸಲಿದ್ದಾರೆ.
ಗಿರಿಶ್ ಕೃಷ್ಣ, ಸಿನಿಮಾ ಚಿತ್ರೀಕರಣದ ಆರಂಭದಲ್ಲಿಯೇ ಅನಾರೋಗ್ಯಕ್ಕೆ ಒಳಗಾದರಂತೆ, 'ನನ್ನ ಆರೋಗ್ಯ ಸುಧಾರಿಸುವವರೆಗೆ ಕಾಯುತ್ತೇವೆ ಎಂದು ಚಿತ್ರತಂಡ ಹೇಳಿತು, ಆದರೆ ನನಗೆ ಅದು ಇಷ್ಟವಿರಲಿಲ್ಲ, ಹಾಗಾಗಿ ಅವರಿಗೆ ಸಿನಿಮಾ ಚಿತ್ರೀಕರಣ ಮುಂದುವರೆಸುವಂತೆ ಹೇಳಿದ್ದೇನೆ' ಎಂದಿದ್ದಾರೆ ಗಿರಿ ಕೃಷ್ಣ.
Recommended Video
ರಿಷಬ್ ಶೆಟ್ಟಿ ಸಹ ಈ ಬಗ್ಗೆ ಮಾತನಾಡಿದ್ದು, 'ನಟ-ನಟಿಯರ ಡೇಟ್ಸ್ಗಳು ಬುಕ್ ಆಗಿಬಿಟ್ಟಿದ್ದವು ಹಾಗಾಗಿ ಚಿತ್ರೀಕರಣ ಮುಂದುವರೆಸಲೇ ಬೇಕಾಯಿತು. ಗಿರಿ ಪ್ರತಿಭಾವಂತ ನಿರ್ದೇಶಕ ಅವರೊಂದಿಗೆ ಮುಂದೆ ಮತ್ತೆ ಕೆಲಸ ಮಾಡುವ ಇರಾದೆ ಇದೆ. ಗಿರಿ ಸ್ಥಾನವನ್ನು ಈಗ ಕರಣ್-ಅನಿರುದ್ ತುಂಬಲಿದ್ದಾರೆ ಎಂದಿದ್ದಾರೆ.
ಕಾಮಿಡಿ-ಡ್ರಾಮಾ ಸಿನಿಮಾ ಆಗಿರುವ ಹರಿ ಕತೆ ಅಲ್ಲ ಗಿರಿ ಕತೆ ಸಿನಿಮಾದಲ್ಲಿ ರಿಷಬ್ ನಾಯಕನಟರಾಗಿ ನಟಿಸುತ್ತಿದ್ದಾರೆ. ಸಿನಿಮಾವನ್ನು ಸಂದೇಶ್ ಪ್ರೊಡಕ್ಷನ್ಸ್ ನಿರ್ಮಿಸುತ್ತಿದೆ.