Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನಟನೆ-ನಿರ್ದೇಶನ-ಸಂಕಲನ ತರಗತಿಗಳನ್ನು ಪುನರಾರಂಭಿಸಿದ 'ಜಿ ಅಕಾಡೆಮಿ'
ಕೊರೊನಾ ವೈರಸ್ ಲಾಕ್ಡೌನ್ನಿಂದ ಸ್ಥಗಿತಗೊಂಡಿದ್ದ ಜಿ ಅಕಾಡೆಮಿಯ ತರಗತಿಗಳು ಮತ್ತೆ ಪುನರಾರಂಭವಾಗಿದೆ. ಆಗಸ್ಟ್ 17ನೇ ತಾರೀಖಿನಿಂದ ತರಗತಿಗಳು ಶುರುವಾಗಿದ್ದು, ಆಸಕ್ತ ವಿದ್ಯಾರ್ಥಿಗಳು ದಾಖಲಾತಿ ಪಡೆಯಬಹುದು.
Recommended Video
'ರಾಜಾಹುಲಿ' ಖ್ಯಾತಿಯ ನಿರ್ದೇಶಕ ಗುರುದೇಶಪಾಂಡೆ ಜಿ ಅಕಾಡೆಮಿಯನ್ನು ಸ್ಥಾಪಿಸಿದ್ದು, ಕನ್ನಡದ ಖ್ಯಾತ ನಿರ್ದೇಶಕ, ತಂತ್ರಜ್ಞರಿಂದ ಮಾರ್ಗದರ್ಶನ ಕೊಡಿಸುತ್ತಿದ್ದಾರೆ. ನಟನೆ, ನಿರ್ದೇಶನ, ಸಂಕಲನ ಕಲಿಯುವ ಆಸಕ್ತಿ ಇರುವ ವಿದ್ಯಾರ್ಥಿಗಳಿಗೆ ಅನುಭವಿ ಸಿನಿಮಾ ಮೇಕರ್ಸ್ ಪಾಠ ಮಾಡುತ್ತಿದ್ದಾರೆ.
ಸುನಿಲ್ ಕುಮಾರ್ ದೇಸಾಯಿ, ದಯಾಳ್ ಪದ್ಮನಾಭನ್, ರಾಘು ಶಿವಮೊಗ್ಗ, ಮೌನೇಶ್ ಬಡಿಗೇರ್, ಬಿಎಂ ಗಿರಿರಾಜ್, ಭರ್ಜರಿ ಚೇತನ್ ಕುಮಾರ್, ರಾಜ್ಯ ಪ್ರಶಸ್ತಿ ವಿಜೇತರಾದ ಸಂಚಾರಿ ವಿಜಯ್, ಸಂಕಲನಕಾರರ ಆದಂತಹ ಸುರೇಶ್ ಅರಸ್, ಕೆಂಪರಾಜು, ದೀಪಕ್, ಖ್ಯಾತ ಡ್ಯಾನ್ಸ್ ಮಾಸ್ಟರ್ ಆದಂತಹ ಮುರಳಿ ಮಾಸ್ಟರ್, ಮತ್ತು ಸ್ಟಂಟ್ ಮಾಸ್ಟರ್ ಡಿಫರೆಂಟ್ ಡ್ಯಾನಿ, ಖ್ಯಾತ ಮ್ಯೂಸಿಕ್ ಡೈರೆಕ್ಟರ್ ಆದಂತಹ ಮಣಿಕಾಂತ್ ಕದ್ರಿ, ಶ್ರೀಧರ್ ವಿ ಸಂಭ್ರಮ್ ಸೇರಿದಂತೆ ಹಲವರು ಜಿ ಅಕಾಡೆಮಿಯ ಸದಸ್ಯರಾಗಿದ್ದಾರೆ.
ಇದೀಗ, ಜಿ ಅಕಾಡೆಮಿಯ ಹೊಸ ಸದಸ್ಯರಾಗಿ ಖ್ಯಾತ ನಿರ್ದೇಶಕರಾದ ಶಶಾಂಕ್ ಮತ್ತು ಪವನ್ ಒಡೆಯರ್ ಸಹ ಸೇರ್ಪಡೆಯಾಗಿದ್ದು, ವಿದ್ಯಾರ್ಥಿಗಳಿಗೆ ಚಲನಚಿತ್ರ ನಟನೆ-ನಿರ್ದೇಶನ-ಸಂಕಲನ ಕುರಿತಾದ ತರಗತಿಗಳನ್ನು ನಡೆಸಿಕೊಡಲಿದ್ದಾರೆ.
ಕೊರೊನಾ ವೈರಸ್ಗೆ ಸಂಬಂಧಿಸಿದಂತೆ ಜಿ ಅಕಾಡೆಮಿ ಸಕಲ ಮುಂಜಾಗ್ರತಾ ಕ್ರಮವನ್ನು ಕೈಗೊಂಡಿದೆ. ಸಂಪೂರ್ಣವಾಗಿ ಕಚೇರಿಯ ಹಾಗೂ ತರಗತಿಗಳನ್ನು ಸ್ಯಾನಿಟೈಸರ್ ನಿಂದ ಸ್ವಚ್ಛಗೊಳಿಸಿದೆ. ಮಾಸ್ಕ್ ಕಡ್ಡಾಯ ಮಾಡಿದೆ, ಸಾಮಾಜಿಕ ಅಂತರವನ್ನು ಸಹ ಕಾಯ್ದುಕೊಂಡು ಕಾರ್ಯನಿರ್ವಹಿಸುತ್ತಿದೆ.
ಇದರ ಬಗ್ಗೆ ಮತ್ತಷ್ಟು ಮಾಹಿತಿ ತಿಳಿಯಲು ಸಂಪರ್ಕಿಸಿ 9900777222/9900195195