Don't Miss!
- Sports
ಕೋಟಿ ಕೊಟ್ರೂ ಡಕ್ಔಟ್ ಆಗಿದ್ದೀಯಾ ಎಂದು ಐಪಿಎಲ್ ತಂಡದ ಮಾಲೀಕ ಕೆನ್ನೆಗೆ ಹೊಡೆದಿದ್ರು: ರಾಸ್ ಟೇಲರ್!
- News
Breaking: ಕರ್ನಾಟಕದಲ್ಲಿ 2ನೇ ದಿನವೂ ಕೊರೊನಾದಿಂದ 5 ಮಂದಿ ಸಾವು!
- Lifestyle
ಸ್ವಾತಂತ್ರ್ಯದ ಅಮೃತ ಮಹೋತ್ಸಕ್ಕೆ ಸ್ಪೆಷಲ್ ರೆಸಿಪಿ: ತಿರಂಗಾ ಹಲ್ವಾ
- Automobiles
ಇವಿ ಬಸ್ ಸೇವೆಗಾಗಿ 1 ಬಿಲಿಯನ್ ಡಾಲರ್ ಮೌಲ್ಯದ ಸ್ವಿಚ್ ಮೊಬಿಲಿಟಿ ನಿರ್ಮಾಣದ 5 ಸಾವಿರ ಇವಿ ಬಸ್ ನಿಯೋಜನೆ
- Technology
ಬ್ಲೂ ಬೋಲ್ಡ್ N2 ಸ್ಮಾರ್ಟ್ಫೋನ್ ಬಿಡುಗಡೆ! ಏನೆಲ್ಲಾ ಫೀಚರ್ಸ್ ಲಭ್ಯ!
- Finance
ಕೇರಳ ಲಾಟರಿ: 'ಕಾರುಣ್ಯ KR 562' ಟಿಕೆಟ್ ವಿಜೇತರ ಪಟ್ಟಿ ಇಲ್ಲಿದೆ
- Education
CSG Karnataka Recruitment 2022 : 128 ಪ್ರಾಜೆಕ್ಟ್ ಮ್ಯಾನೇಜರ್ ಮತ್ತು ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
- Travel
75ನೇ ಸ್ವಾತೊಂತ್ರೋತ್ಸವವನ್ನು ಸ್ಮರಿಸುತ್ತಾ ಸ್ವಾತಂತ್ರ್ಯ ಹೋರಾಟದೊಡನೆ ಸಂಬಂಧವಿರುವ ಭಾರತದ ಈ ಸ್ಮಾರಕಗಳು
ಕರಿ ಚಿರತೆಗೆ ಆಕ್ಷನ್-ಕಟ್ ಹೇಳ್ತಾರಂತೆ, 'ಭಜರಂಗಿ' ಹರ್ಷ.!
ಇದೇ ಮೊದಲ ಬಾರಿಗೆ ನೃತ್ಯ ನಿರ್ದೇಶಕ ಕಮ್ ನಿರ್ದೇಶಕ ಹರ್ಷ ಅವರು ಬ್ಲ್ಯಾಕ್ ಕೋಬ್ರಾ ದುನಿಯಾ ವಿಜಯ್ ಅವರಿಗೆ ಆಕ್ಷನ್-ಕಟ್ ಹೇಳಲು ತಯಾರಾಗಿದ್ದಾರೆ. ದುನಿಯಾ ವಿಜಿ ಹಾಗೂ ಖ್ಯಾತ ನಿರ್ದೇಶಕ ಹರ್ಷ ಅವರ ಕಾಂಬಿನೇಷನ್ ನಲ್ಲಿ ಹೊಸ ಚಿತ್ರವೊಂದು ಸೆಟ್ಟೇರುತ್ತಿದೆ.
'ಕೆ.ಪಿ ಶ್ರೀಕಾಂತ್ ನಿರ್ಮಾಣದಲ್ಲಿ ನನ್ನ ಹೊಸ ಚಿತ್ರಕ್ಕೆ, ನಿರ್ದೇಶಕ ಎ.ಹರ್ಷ ಅವರು ನಿರ್ದೇಶನ ಮಾಡುತ್ತಿದ್ದು, ನಾನು ಸೇರಿ ಮೂವರ ಸಂಯೋಜನೆ ವಿಭಿನ್ನವಾಗಿ ಮೂಡಿ ಬರಲಿದೆ. ಚಂದನವನದ ಖ್ಯಾತ ನೃತ್ಯ ನಿರ್ದೇಶಕ ಕಮ್ ನಿರ್ದೇಶಕ ಎ.ಹರ್ಷ ಅವರ ಚಿತ್ರದಲ್ಲಿ ಕಾಣಿಸಿಕೊಳ್ಳುತ್ತಿರುವುದು ಹೊಸ ಅನುಭವ ನೀಡಲಿದೆ ಎಂದು ಕರಿ ಚಿರತೆ ದುನಿಯಾ ವಿಜಯ್ ಅವರು ಸಂತಸ ವ್ಯಕ್ತಪಡಿಸಿದ್ದಾರೆ.[ಚಿತ್ರಗಳು: ಭರ್ಜರಿಯಾಗಿ ದನ ಕಾಯುತ್ತಿರುವ ವಿಜಿ ಮತ್ತು ಪ್ರಿಯಾಮಣಿ..!]
ನಿರ್ಮಾಪಕ ಶ್ರೀಕಾಂತ್ ಅವರ ನಿರ್ಮಾಣದಲ್ಲಿ ಮೂಡಿಬರುತ್ತಿರುವ, ಮೊದಲ ಚಿತ್ರ ಇದಾಗಿದ್ದು, ಈಗಾಗಲೇ ಚಿತ್ರದ ಸ್ಕ್ರಿಪ್ಟ್ ತಯಾರಾಗುತ್ತಿದೆ ಎಂದು ನಟ ದುನಿಯಾ ವಿಜಯ್ ಹೇಳಿದ್ದಾರೆ.
ಇನ್ನು ನಟ ದುನಿಯಾ ವಿಜಯ್ ಅವರು ಯೋಗರಾಜ್ ಭಟ್ಟರ 'ದನ ಕಾಯೋನು' ಚಿತ್ರದ ಶೂಟಿಂಗ್ ನಲ್ಲಿ ಬ್ಯುಸಿಯಾದರೆ, ನಿರ್ದೇಶಕ ಹರ್ಷ ಅವರು ಕಾಮಿಡಿ ನಟ ಶರಣ್ ಅವರ ಜೊತೆ 'ಜೈ ಮಾರುತಿ 800' ಚಿತ್ರದ ಚಿತ್ರೀಕರಣದಲ್ಲಿದ್ದಾರೆ.['ಜೈ ಮಾರುತಿ 800' ಫುಲ್ ಕಾಮಿಡಿ ಸಿನಿಮಾ: ಎ ಹರ್ಷ]
ಒಟ್ನಲ್ಲಿ ದುನಿಯಾ ವಿಜಿ ಮತ್ತು ಹರ್ಷ ಅವರ ಬಹುನಿರೀಕ್ಷಿತ ಪ್ರಾಜೆಕ್ಟ್ ಗಳು ಮುಗಿದ ನಂತರ, ಇವರಿಬ್ಬರ ಜುಗಲ್ ಬಂದಿಯಲ್ಲಿ ಹೊಸ ಪ್ರಾಜೆಕ್ಟ್ ಸೆಟ್ಟೇರಲಿದೆ.