Don't Miss!
- News Mysuru Zoo: ಬೇಸಿಗೆಯಲ್ಲೂ ಮೈಸೂರು ಮೃಗಾಲಯ ಕೂಲ್.. ಕೂಲ್! ಹೇಗೆ ಗೊತ್ತಾ?
- Technology vivo: ವಿವೋ Y200i ಸ್ಮಾರ್ಟ್ಫೋನ್ ಲಾಂಚ್! 12GB RAM.. 6000mAh ಬ್ಯಾಟರಿ
- Automobiles ಸಣ್ಣ ಕುಟುಂಬಗಳಿಗೆ ಬೆಸ್ಟ್ ಕಾರು... 5.36 ಲಕ್ಷ ರೂ. ಬೆಲೆ... 34 ಕಿ.ಮೀ ಮೈಲೇಜ್!
- Lifestyle 2 ಬಗೆಯ ಮಜ್ಜಿಗೆ ಸಾರು ರೆಸಿಪಿ: ಕಾಯಿ ಹಾಕಿದ, ಕಾಯಿ ಹಾಕದ ಸಾರಿನ ರೆಸಿಪಿ
- Sports ಐಪಿಎಲ್ನಿಂದ ದೂರವುಳಿದಿದ್ದ ಟೀಮ್ ಇಂಡಿಯಾ ವೇಗಿ ಟಿ20 ವಿಶ್ವಕಪ್ ಆಡುತ್ತಾರಾ?: ಆಟಗಾರ ಹೇಳಿದ್ದೇನು?
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಡ್ರಗ್ಸ್ ಎಫೆಕ್ಟ್: ಮೂರು ಘಟನೆಗಳಿಗೆ ಸ್ಪಷ್ಟನೆ ಕೇಳಿದ ಇಂದ್ರಜಿತ್ ಲಂಕೇಶ್
ಕನ್ನಡ ಚಿತ್ರರಂಗದಲ್ಲಿ ಕೆಲವು ನಟ-ನಟಿಯರು ಹಾಗೂ ತಂತ್ರಜ್ಞರು ಡ್ರಗ್ಸ್ ಸೇವಿಸುತ್ತಾರೆ ಎಂಬ ವಿಚಾರಕ್ಕೆ ಸಂಬಂಧಪಟ್ಟಂತೆ ನಿರ್ದೇಶಕ ಇಂದ್ರಜಿತ್ ಲಂಕೇಶ್ ಬಹಿರಂಗವಾಗಿ ಹೇಳಿಕೆ ನೀಡಿದ್ದಾರೆ.
Recommended Video
'ಇಂಡಸ್ಟ್ರಿಯಲ್ಲಿ ಡ್ರಗ್ಸ್ ಬಳಕೆ ಇದೆ, ಚಿತ್ರರಂಗವನ್ನು ಸ್ವಚ್ಛಗೊಳಿಸಬೇಕು, ಯಾರೆಲ್ಲ ಡ್ರಗ್ಸ್ ಸೇವಿಸುತ್ತಾರೆ ಎಂಬ ವಿವರ ನನ್ನ ಬಳಿ ಇದೆ. ಅಗತ್ಯವಿದ್ದರೆ ಪೊಲೀಸ್ ತನಿಖೆಗೆ ನಾನು ಸಹಕರಿಸುತ್ತೇನೆ ಎಂದಿದ್ದರು. ಅಷ್ಟೇ ಅಲ್ಲದೆ ಇತ್ತೀಚಿಗೆ ಮೃತಪಟ್ಟಿದ್ದ ಯುವನಟನ ಪೋಸ್ಟ್ ಮಾರ್ಟಮ್ ಏಕೆ ಮಾಡಲಿಲ್ಲ ಎಂದು ಸಹ ಪ್ರಶ್ನಿಸಿದ್ದರು.
ಅಪಘಾತ, ಡ್ರಗ್ಸ್ ಆರೋಪಕ್ಕೆ ಪ್ರಜ್ವಲ್ ದೇವರಾಜ್, ದಿಗಂತ್ ಸ್ಪಷ್ಟನೆ
ಈ ಎಲ್ಲ ವಿಚಾರಕ್ಕೆ ಕುರಿತು ಮತ್ತಷ್ಟು ಮಾತನಾಡಿರುವ ಇಂದ್ರಜಿತ್ ಲಂಕೇಶ್ ಸಿನಿಮಾರಂಗಕ್ಕೆ ಸಂಬಂಧಿಸಿದಂತೆ ಪ್ರಮುಖ ಘಟನೆಗಳನ್ನು ಉಲ್ಲೇಖಿಸಿ, ಇದಕ್ಕೆ ಸ್ಪಷ್ಟನೆ ನೀಡಿ ಎಂದಿದ್ದಾರೆ. ಈ ಘಟನೆಗಳನ್ನು ಸೂಕ್ಷ್ಮವಾಗಿ ಗಮನಿಸಿದರೆ ಚಿತ್ರಜಗತ್ತಿನಲ್ಲಿ ಡ್ರಗ್ಸ್ ಹೇಗೆ ಬಳಕೆಯಾಗುತ್ತಿದೆ ಎಂದು ತಿಳಿಯುತ್ತದೆ ಎಂದಿದ್ದಾರೆ. ಅಷ್ಟಕ್ಕೂ, ಯಾವುದು ಆ ಘಟನೆಗಳು? ಮುಂದೆ ಓದಿ...
ಘಟನೆ ಒಂದು
ಮೂರು ವರ್ಷದ ಹಿಂದೆ 2017 ಸೆಪ್ಟೆಂಬರ್ 27 ರಂದು ಮಧ್ಯರಾತ್ರಿ ಬೆಂಗಳೂರಿನ ಸೌತ್ ಎಂಡ್ ವೃತ್ತದಲ್ಲಿ ಕಾರೊಂದು ಅಪಘಾತಕ್ಕೆ ಒಳಗಾಗುತ್ತೆ. ಕಾರಿನಲ್ಲಿ ಉದ್ಯಮಿಯೊಬ್ಬರು ಮೊಮ್ಮಗ ಹಾಗೂ ಕನ್ನಡ ಕೆಲವು ನಟರು ಇದ್ದರು ಎಂದು ವರದಿಯಾಗುತ್ತದೆ. ಅಪಘಾತ ಸ್ಥಳದಲ್ಲಿ ಕಾರನ್ನು ಬಿಟ್ಟು ನಟರು ಪರಾರಿಯಾದರು ಎಂದು ಸ್ಥಳೀಯರು ಹೇಳಿದ್ದರು. ಈ ಪ್ರಕರಣ ಏನಾಯಿತು ಎಂದು ಇಂದ್ರಜಿತ್ ಪ್ರಶ್ನಿಸಿದ್ದಾರೆ.
ಗಾಂಜಾ ಸಿಕ್ಕಿತ್ತು ಎಂಬ ವರದಿ
ಉದ್ಯಮಿ ಆದಿಕೇಶವುಲು ಮೊಮ್ಮಗ ವಿಷ್ಣು ಸೇರಿದಂತೆ ಕೆಲವು ನಟರು ಇದ್ದರು ಎಂದು ಹೇಳಲಾಗಿತ್ತು. ಪೊಲೀಸ್ ತನಿಖೆ ವೇಳೆ ಈ ಕಾರಿನಲ್ಲಿ ಗಾಂಜಾ ಸಹ ಪತ್ತೆಯಾಗಿತ್ತು ಎಂದು ವರದಿಯಾಗುತ್ತದೆ. ಆದರೆ, ಈ ಅಪಘಾತ ಪ್ರಕರಣದ ತನಿಖೆ ಏನಾಯ್ತು? ಆ ನಟರನ್ನು ಯಾರು ಮತ್ತು ವಿಚಾರಣೆಗೆ ಏಕೆ ಹೋಗಲಿಲ್ಲ? ಗಾಂಜಾ ಬಗ್ಗೆ ಏಕೆ ತನಿಖೆ ಆಗ್ಲಿಲ್ಲ ಎಂದು ಕೇಳಿದ್ದಾರೆ.
ಸ್ಯಾಂಡಲ್ ವುಡ್ ಗೆ ಡ್ರಗ್ ನಂಟು: ಯುವ ನಟನ ಸಾವಿನ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಇಂದ್ರಜಿತ್ ಲಂಕೇಶ್
ಘಟನೆ ಎರಡು
ಇನ್ನು ಕೆಪಿಎಲ್ ಟೂರ್ನಿಯನ್ನಿ ಸ್ಪಾಟ್ ಫಿಕ್ಸಿಂಗ್ ಹಾಗೂ ಹನಿ ಟ್ರ್ಯಾಪ್ ನಡೆದಿತ್ತು ಎನ್ನಲಾದ ಪ್ರಕರಣದಲ್ಲಿ ಕೆಲವು ಆಟಗಾರರನ್ನು ಬಂಧಿಸಲಾಯಿತು. ಈ ಕೇಸ್ನಲ್ಲಿ ನಟಿಯರು ಸಹಕರಿಸಿದ್ದರು ಎಂದು ವರದಿಯಾಯಿತು. ಆದರೆ, ನಟಿಯರ ವಿಚಾರಣೆ ಆಗಿಲ್ಲ, ಅವರ ಹೆಸರು ಬಂದಿಲ್ಲ ಏಕೆ ಎಂದು ಇಂದ್ರಜಿತ್ ಲಂಕೇಶ್ ಕೇಳಿದ್ದಾರೆ.
ಘಟನೆ ಮೂರು
ಇತ್ತೀಚಿಗಷ್ಟೆ ಯುವ ನಟನ ಸಾವಾಯಿತು? ಅವರ ಪಾರ್ಥಿವ ಶರೀರವನ್ನು ಪೋಸ್ಟ್ ಮಾರ್ಟಮ್ ಏಕೆ ಮಾಡಿಲ್ಲ ಎಂದು ಇಂದ್ರಜಿತ್ ಲಂಕೇಶ್ ಪ್ರಶ್ನಿಸಿದ್ದಾರೆ. ಪರೋಕ್ಷವಾಗಿ ಚಿರು ಸರ್ಜಾ ಸಾವಿನ ಬಗ್ಗೆಯೂ ಮಾತನಾಡಿದ ನಿರ್ದೇಶಕರು ಚಿರು ಸಾವಿನ ಬಗ್ಗೆಯೂ ಅನುಮಾನ ವ್ಯಕ್ತಪಡಿಸಿದ್ದಾರೆ.